ಯೋಧರಿಗೆ ಸಮರ್ಪಿತ ಪುಷ್ಪ ಪ್ರದರ್ಶನ ಉದ್ಘಾಟಿಸಿದ ಕುಮಾರಸ್ವಾಮಿ
ಬೆಂಗಳೂರು, ಆಗಸ್ಟ್ 4: ಫಲಪುಷ್ಪಗಳಲ್ಲಿ ಅರಳಿದ ಭಾರತದ ಸೇನೆ ಸಾಮರ್ಥ್ಯ. ಅಮರ್ ಜವಾನ್ ಪ್ರತಿಕೃತಿ, ಭಾರತದ ರಕ್ಷಣಾ ಪಡೆಗಳು ಇದೆಲ್ಲವೂ ಒಂದೆಡೆ ನಿರ್ಮಿಸಲಾಗಿದ್ದ ಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಶನಿವಾರ ಚಾಲನೆ ನೀಡಿದರು.
ಲಾಲ್ ಬಾಗ್ ನಲ್ಲಿ ಶನಿವಾರ ತೋಟಗಾರಿಕೆ ಇಲಾಖೆ ಸ್ವಾತಂತ್ರ್ಯ ದಿನದ ಅಂಗವಾಗಿ ಏರ್ಪಡಿಸಿರುವ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು. ಯೋಧರ ಗೌರವಾರ್ಥ ಪುಷ್ಪ ಪ್ರದರ್ಶನ ಏರ್ಪಡಿಸಿರುವುದು ಹೆಮ್ಮೆಯ ಸಂಗತಿ.
ಸಿಯಾಚಿನ್ ಸೇರಿದಂತೆ ನಾನಾ ರೆಜಿಮೆಂಟ್ ಗಳ ವೈಶಿಷ್ಟ್ಯ ಸಾರುವ ಪುಷ್ಪ ಪ್ರದರ್ಶನವನ್ನು ಯೋಧರಿಗೆ ಸಮರ್ಪಿಸಿರುವುದು ಹೆಮ್ಮೆಯ ಸಂಗತಿ ಎಂದು ಶ್ಲ್ಯಾಘಿಸಿದರು. ನಾಡಿನ ಜನತೆ ಪುಷ್ಪ ಪ್ರದರ್ಶನ ವೀಕ್ಷಿಸಿದರೆ ಹೆಚ್ಚು ಅರ್ಥಪೂರ್ಣ ಎಂದರು.

ಲಾಲ್ಬಾಗ್ನಲ್ಲಿ ಶನಿವಾರ ಆರಂಭವಾಗಿರುವ ಫಲಪುಷ್ಪ ಪ್ರದರ್ಶನ ಆಗಸ್ಟ್ 15ರವರೆಗೂ ನಡೆಯಲಿದೆ. ಪ್ರತಿ ವರ್ಷದಂತೆ ಈವರ್ಷವೂ ಲಾಲ್ ಬಾಗ್ ನಲ್ಲಿ ಹಲವಾರು ವಿಧ ವಿಧವಾದ ಪುಷ್ಟಗಳಿಂದ ಗ್ಲಾಸ್ ಹೌಸ್ ಅನ್ನು ಅಲಂಕರಿಸಲಾಗಿದೆ.
ವಾಯುಸೇನೆ, ಭೂ ಸೇನೆ, ನೌಕಾಸೇನೆಯನ್ನು ಗುಲಾಬಿ ಹೂವುಗಳಿಂದ ಸಿದ್ದಪಡಿಸಲಾಗಿದೆ. ಸಿಯಾಚಿನ್ ಪ್ರದೇಶದಲ್ಲಿ 30 ಡಿಗ್ರಿ ಸೆಲ್ಸಿಯಸ್ನಲ್ಲಿ ನಮ್ಮ ಯೋಧರು ಹೇಗೆ ಕಾರ್ಯ ನಿರ್ವಹಿಸುತ್ತಾರೆ ಎಂಬ ಬಗ್ಗೆ ಹೂಗಳಿಂದಲೇ ಚಿತ್ರಿಸಿರುವುದು ವಿಶೇಷವಾಗಿದೆ.
ಪ್ರದರ್ಶನದ 15 ದಿನಗಳ ವೇಳೆಯೂ ಮೂರರಿಂದ ನಾಲ್ಕು ಬಾರಿ ಪುಷ್ಪಗಳನ್ನು ಬದಲಾಯಿಸಲಾಗುತ್ತದೆ. ಈ ಬದಲಾವಣೆಗೆ ಒಂದು ಸಲಕ್ಕೆ 40 ಸಾವಿರ ರೂ. ವೆಚ್ಚವಾಗುತ್ತದೆ. 1.20 ಲಕ್ಷ ಹೂಗಳನ್ನು ಈ ರೀತಿ ಬದಲಾವಣೆ ಮಾಡಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ವೈ.ಎಸ್ ಪಾಟಿಲ್ ತಿಳಿಸಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications