ಸಂಪುಟ ವಿಸ್ತರಣೆ ವೇಳೆ ಭದ್ರತಾ ವೈಫಲ್ಯ: ಡಿಜಿಪಿಯಿಂದ ವರದಿ ಕೇಳಿದ ಸಿಎಂ
ಬೆಂಗಳೂರು, ಜೂನ್ 7 : ಸಚಿವ ಸಂಪುಟ ವಿಸ್ತರಣೆ ವೇಳೆ ರಾಜಭವನದಲ್ಲಿ ಸ್ಪೀಕರ್ಗೆ ಆಗಿರುವ ಅವಮಾನ ಹಾಗೂ ಭದ್ರತೆ ವೈಫಲ್ಯ ಕುರಿತಂತೆ ಸಮಗ್ರ ವರದಿ ನೀಡುವಂತೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ರಾಜ್ಯದ ಪೊಲೀಸ್ ಮಹಾನಿರ್ದೇಶಕಿ ನೀಲಮಣಿರಾಜು ಅವರಿಗೆ ಸೂಚನೆ ನೀಡಿದ್ದಾರೆ.
ಗುರುವಾರ ಹಿರಿಯ ಪೊಲೀಸ್ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಅವರು ಡಿಜಿಪಿ ನೀಲಮಣಿ ರಾಜು ಹಾಗು ಬೆಂಗಳೂರು ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಬುಧವಾರ ರಾಜಭವನದಲ್ಲಿ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮಕ್ಕೆಂದು ಬಂದಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜಭವನದ ಒಳಗೆ ಪ್ರವೇಶಕ್ಕೆ ಪೊಲೀಸ್ ಅಧಿಕಾರಿಗಳು ನಿರಾಕರಿಸಿ ಅವಮಾನ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕುರಿತು ರಮೇಶ್ ಕುಮಾರ್ ರಾಜ್ಯ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರಿಗೆ ಪತ್ರ ಬರೆದಿದ್ದರು.

ಸ್ಪೀಕರ್ ರಮೇಶ್ ಕುಮಾರ್ ರಾಜಭವನ ಪ್ರವೇಶಿಸಲಾಗದೆ ಹಿಂದಿರುಗಿ ಬಂದಿದ್ದು, ಎಚ್ಡಿ ದೇವೇಗೌಡ ಪತ್ನಿ ಚೆನ್ನಮ್ಮ ನಡೆದುಕೊಂಡು ರಾಜಭವನ ರಸ್ತೆಯಲ್ಲಿ ಹೋಗಿದ್ದು, ಎಂಎಲ್ಸಿ ಶರವಣ ರಾಜಭವನ ಪ್ರವೇಶಿಸಲು ಹರಸಾಹಸ ಪಟ್ಟಿದ್ದು, ಟ್ರಾಫಿಕ್ ನಿಯಂತ್ರಣದಲ್ಲೂ ವಿಫಲವಾದ ಪೊಲೀಸ್ ಇಲಾಖೆ ಭದ್ರತೆ ವೈಫಲ್ಯಕ್ಕೆ ಸೂಕ್ತ ವರದಿ ನೀಡುವಂತೆ ಕುಮಾರಸ್ವಾಮಿ ಖಡಕ್ ಸೂಚನೆ ನೀಡಿದ್ದಾರೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications