ಖಾಸಗಿ ಆಸ್ಪತ್ರೆ ಬಿಲ್ ಮಂಡನೆಗೂ ಮುನ್ನ ಮರು ಪರಿಶೀಲನೆ: ಸಿಎಂ ಭರವಸೆ
ಬೆಂಗಳೂರು, ನವೆಂಬರ್ 13 : ಬೆಳಗಾವಿಯಲ್ಲಿ ಖಾಸಗಿ ವೈದ್ಯರ ಪ್ರತಿಭಟನೆ ವಿಚಾರ ಐಎಂಎ ಪದಾಧಿಕಾರಿಗಳೊಂದಿಗೆ ಸಂಧಾನ ಸಭೆ ಸಫಲ. ಸದನದಲ್ಲಿ ಮಸೂದೆ ಮಂಡನೆಗೂ ಮುನ್ನ ಸಭೆ ನಡೆಸಿ ತಿದ್ದುಪಡಿ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ.
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ 2017ಕ್ಕೆ (ಕೆಪಿಎಂಇ) ಮಾಡಿರುವ ತಿದ್ದುಪಡಿಯಲ್ಲಿನ ಕೆಲವು ಅಂಶಗಳನ್ನು ಕೈಬಿಡುವಂತೆ ಆಗ್ರಹಿಸಿ ಭಾರತೀಯ ವೈದ್ಯ ಸಂಘದ (ಐಎಂಎ) ರಾಜ್ಯ ಘಟಕದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ನಿಮಗೆ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಹಾಗಾಗಿ ಮುಷ್ಕರ ಹಿಂಪಡೆಯಿರಿ ಎಂದು ಮನವಿ ಮಾಡಿದ್ದಾರೆ.

ಮುಷ್ಕರ ನಿರತ ವೈದ್ಯ ಸಂಘಟನೆಯ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಮನವಿ ಮಾಡಿದರು. ಅಧಿವೇಶನದಲ್ಲಿ ಸರ್ಕಾರ ಮಂಡಲಿಸಲಿರುವ ವಿಧೇಯಕ ಕುರಿತು ಯಾವುದೇ ಭಯ ಬೇಡ. ವೈದ್ಯರಿಗೆ ತೊಂದರೆ ಅಥವಾ ಕಿರುಕುಳ ನೀಡಲು ಸರ್ಕಾರ ವಿಧೇಯಕ ರೂಪಿಸಿಲ್ಲ.
ಆದರೂ ವಿಧೇಯಕ ಮಂಡನೆಗೆ ಮುನ್ನ ಆರೋಗ್ಯ ಸಚಿವರೊಂದಿಗೆ, ಪದಾಧಿಕಾರಿಗಳ ಜತೆ ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸುತ್ತೇವೆ. ಬಡವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಹೊಸದಾಗಿ ಕಾನೂನು ಜಾರಿಗೆ ತರಲು ಮುಂದಾಗಿದೆ.ವೈದ್ಯರಲ್ಲಿ ಎಲ್ಲರೂ ಕೆಟ್ಟವರಲ್ಲ. ವೈದ್ಯರನ್ನು ನಿಯಂತ್ರಿಸುವ ಉದ್ದೇಶವೂ ನಮಗಿಲ್ಲ. ಹೀಗಾಗಿ ಮುಷ್ಕರ ಹಿಂಪಡೆಯಿರಿ ಎಂದು ಮನವಿ ಮಾಡಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications