ಪತ್ನಿಗಾಗಿ ಸೀರೆ ಖರೀದಿಸಿದ ಸಿಎಂ ಬೊಮ್ಮಾಯಿ: ಇತರರಿಗೂ ಸೂಚನೆ
ಬೆಂಗಳೂರು, ಅಕ್ಟೋಬರ್ 2: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆಯ ಪ್ರಯುಕ್ತ ಖಾದಿ ಬಟ್ಟೆ ಖರೀದಿಸಿದರು.
ಬೆಂಗಳೂರು ನಗರದ ಗಾಂಧಿ ಭವನದ ಪಕ್ಕದಲ್ಲಿರುವ ಖಾದಿ ಎಂಪೋರಿಯಂನಲ್ಲಿ ತಲಾ ಮೂರು ಮೀಟರ್ ಅಳತೆಯ 10 ಜುಬ್ಬಾ ಪೀಸ್ಗಳನ್ನು ಸಿಎಂ ಬೊಮ್ಮಾಯಿ ಖರೀದಿಸಿದರಲ್ಲದೆ, ಇದೇ ವೇಳೆ ತಮ್ಮ ಪತ್ನಿಗೆ ಸೀರೆಯನ್ನೂ ಖರೀದಿಸಿ ಅಚ್ಚರಿ ಮೂಡಿಸಿದರು.
ಖಾದಿ ಎಂಪೋರಿಯಂನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಮಡದಿಗಾಗಿ ಮೂರು ಸೀರೆ ನೋಡಿದರು. ಕಡೆಗೆ ಒಂದನ್ನು ಆಯ್ಕೆ ಮಾಡಿಕೊಂಡರು. ಸಿಎಂ ಬೊಮ್ಮಾಯಿಯವರು ಒಟ್ಟು 16,000 ರೂ. ಮೊತ್ತದ ಬಟ್ಟೆ ಖರೀದಿಸಿದ್ದಾರೆ.

ಖರೀದಿ ವೇಳೆ ಸಚಿವರಿಗೂ ಸೀರೆ ಕೊಳ್ಳುವಂತೆ ಸೂಚಿಸಿದ ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ ಸೀರೆ ಖರೀದಿ ವೇಳೆ ಆಗಮಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರರಿಗೆ, ''ಬಾರಪ್ಪಾ, ನಿಮ್ಮ ಮನೆಯವರಿಗೆ ಸೀರೆ ಖರೀದಿ ಮಾಡು'' ಎಂದಿದ್ದಾರೆ. ಬೊಮ್ಮಾಯಿಯವರ ಮಾತನ್ನು ಕೇಳಿದ ವಿಜಯೇಂದ್ರ, ''ನಮಗೊಂದು ಸೀರೆ ಕೊಡಿ'' ಎಂದು ಹೇಳಿ ಸುಮಾರು 4,300 ರೂಪಾಯಿ ಮೊತ್ತದ ಸೀರೆ ಖರೀದಿಸಿದ್ದಾರೆ.
ಇದೇ ವೇಳೆ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳರಿಗೂ ಸೀರೆ ತೆಗೆದುಕೊಳ್ಳಿ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ಆಗ ಗೋವಿಂದ ಕಾರಜೋಳರು, ''ಸಾರ್, ನನಗೆ ಅದೆಲ್ಲಾ ಗೊತ್ತಾಗಲ್ಲ'' ಎಂದು ಹೇಳಿದರು. ''ಈಗಲಾದರೂ ಕಲಿತುಕೊಳ್ಳಿ'' ಎಂದು ಬೊಮ್ಮಾಯಿ ತಮಾಷೆ ಮಾಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಮಾತಿಗೆ ಕಟ್ಟು ಬಿದ್ದ ಸಚಿವ ಗೋವಿಂದ ಕಾರಜೋಳ, ''ಇರಲಿ, ನನಗೊಂದು ಸೀರೆ ಕೊಡಿ'' ಎಂದು ಹೇಳಿ, ಸೀರೆ ಖರೀದಿಸಿದ್ದಾರೆ. ಇದೇ ವೇಳೆ ಪೌರಾಡಳಿತ ಎಂಟಿಬಿ ನಾಗರಾಜ್ ಕೂಡ ಬಟ್ಟೆ ಖರೀದಿಸಿದ್ದು, ಅವರ ಬಿಲ್ 3000 ರೂ. ಮೊತ್ತದ್ದಾಗಿದೆ.
ಶಾಸ್ತ್ರಿ ಪ್ರತಿಮೆಗೆ ಪುಷ್ಪಾರ್ಚನೆ
ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 117ನೇ ಜನ್ಮ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನ ಸೌಧದ ಆವರಣದಲ್ಲಿರುವ ಶಾಸ್ತ್ರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
"ಸತ್ಯ, ಅಹಿಂಸೆ, ಸ್ವಚ್ಛತೆಯ ಮಹತ್ವವನ್ನು ಸಾರಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯಂದು ಗೌರವ ನಮನಗಳು," ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ, "ಮಾಜಿ ಪ್ರಧಾನಮಂತ್ರಿ, ಭಾರತರತ್ನ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯಂದು ಅವರಿಗೆ ಆದರ ಪೂರ್ವಕ ಪ್ರಣಾಮಗಳು. ಅವರ ಪ್ರಾಮಾಣಿಕತೆ, ಪರಿಶ್ರಮ, ಸ್ವಾತಂತ್ರ್ಯ ಹೋರಾಟ, ದೇಶಸೇವೆ, ಪ್ರಧಾನಮಂತ್ರಿಗಳಾಗಿ ಅವರ ಆಡಳಿತ, ದಿಟ್ಟ ನಿರ್ಣಯಗಳು, ಅವರ ಸಾಧನೆಗಳು ಎಂದೆಂದಿಗೂ ಅಮರ," ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಗಾಂಧಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದ ರಾಜ್ಯಪಾಲರು
ಮಹಾತ್ಮ ಗಾಂಧೀಜಿ ಜನ್ಮದಿನದ ಅಂಗವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜಭವನದ ಅಂಗಳದಲ್ಲಿರುವ ಗಾಂಧಿ ಪುತ್ಥಳಿಗೆ ಶನಿವಾರ ಪುಷ್ಪಾರ್ಚನೆ ಮಾಡಿದರು.
Recommended Video
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications