ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಫೈನಲ್!
ಹಾವೇರಿ: ಇಡೀ ರಾಜ್ಯದ ಗಮನ ಸೆಳೆದಿದ್ದ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿರುವ ಹಾವೇರಿಯ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಫೈನಲ್ ಆಗಿದೆ. ಮೊಹಮ್ಮದ್ ಯೂಸುಫ್ಗೆ ಟಿಕೆಟ್ ನೀಡುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದಾರೆ ಕಾಂಗ್ರೆಸ್ ನಾಯಕರು. ಆದರೆ ಈ ಹಿಂದೆ ಶಿಗ್ಗಾಂವಿ ಕ್ಷೇತ್ರದಿಂದ ವಿನಯ್ ಕುಲಕರ್ಣಿ ಸ್ಪರ್ಧೆ ಖಚಿತ ಎನ್ನಲಾಗಿತ್ತು.
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಪಕ್ಷವನ್ನ ಈ ಬಾರಿ ಅಧಿಕಾರಕ್ಕೆ ತರಲು ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ. ಇದೇ ನಿಟ್ಟಿನಲ್ಲಿ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಇದೀಗ ಕಾಂಗ್ರೆಸ್ ತನ್ನ 4ನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಈಗಾಗಲೇ ಕಾಂಗ್ರೆಸ್ 224 ಅಭ್ಯರ್ಥಿಗಳ ಪೈಕಿ 209 ಅಭ್ಯರ್ಥಿಗಳನ್ನ ಚುನಾವಣಾ ಕಣಕ್ಕಿಳಿಸಿದೆ. ಈ ಪೈಕಿ ಸಿಎಂ ಬೊಮ್ಮಾಯಿ ಪ್ರತಿನಿಧಿಸುವ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡದೆ ಕುತೂಹಲ ಕೆರಳಿಸಿದ್ದರು ಕಾಂಗ್ರೆಸ್ ನಾಯಕರು.

ಕಾಂಗ್ರೆಸ್ ಲೆಕ್ಕಾಚಾರ ಬದಲಾಯ್ತಾ?
ಅಂದಹಾಗೆ ಈ ಮೊದಲು 2 ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದ ಕಾಂಗ್ರೆಸ್, ಶಿಗ್ಗಾಂವಿ ಕ್ಷೇತ್ರದಿಂದ ಲಿಂಗಾಯತ ಸಮುದಾಯದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಜನೆ ಹಾಕಿಕೊಂಡಿತ್ತು. ಆ ಪ್ರಕಾರ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಬಲ ಸವಾಲು ಹಾಕಬಲ್ಲ ಉತ್ತರ ಕರ್ನಾಟಕದ ಲಿಂಗಾಯತ ನಾಯಕನಿಗೆ ಹುಡುಕಾಟ ಕೂಡ ನಡೆದಿತ್ತು. ಈ ಸಮಯದಲ್ಲಿ ವಿನಯ್ ಕುಲಕರ್ಣಿ ಹೆಸರು ಬಹುತೇಕ ಫೈನಲ್ ಆಗಿತ್ತು ಎನ್ನುಷ್ಟರಲ್ಲೇ ಅಭ್ಯರ್ಥಿ ಆಯ್ಕೆಯೇ ಬದಲಾಗಿದೆ.
ಹೇಗಿತ್ತು ಶಿಗ್ಗಾಂವಿ ರಣತಂತ್ರ?
ಶಿಗ್ಗಾಂವಿ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಂಚಮಸಾಲಿ ಲಿಂಗಾಯತರು, ಮುಸ್ಲಿಮರು ಸೇರಿದಂತೆ ಕುರುಬರು ಇದ್ದಾರೆ. ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ನೀಡಬಹುದು ಎಂಬ ಲೆಕ್ಕಾಚಾರ ಶುರುವಾಗಿತ್ತು. ಇದೆಲ್ಲದರ ಜೊತೆಗೆ ಶಿಗ್ಗಾಂವಿಯ ಮಾಜಿ ಕಾಂಗ್ರೆಸ್ ಶಾಸಕ ಅಜ್ಜಂಪೀರ್ ಖಾದ್ರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊನೆಗೆ ವಿನಯ್ ಕುಲಕರ್ಣಿಗೆ ಟಿಕೆಟ್ ದೊರೆತರೆ, ಬೆಂಬಲಿಸುವುದಾಗಿ ಅಜ್ಜಂಪೀರ್ ಖಾದ್ರಿ ಭರವಸೆ ನೀಡಿದ ನಂತರ ಕುತೂಹಲ ದುಪ್ಪಟ್ಟಾಗಿತ್ತು.
ಧಾರವಾಡ ಅಭ್ಯರ್ಥಿಯಾಗಿ ಸ್ಪರ್ಧೆ
ಇತ್ತ ವಿನಯ್ ಕುಲಕರ್ಣಿ ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯಾಗಿ ಎಂಟ್ರಿ ಕೊಡಲಿದ್ದಾರೆ ಎಂಬ ಲೆಕ್ಕಚಾರ ಶುರುವಾಗಿರುವಾಗಲೇ ಕಾಂಗ್ರೆಸ್ ಬೇರೆಯದ್ದೇ ನಿರ್ಧಾರ ತೆಗೆದುಕೊಂಡಿತ್ತು. ಧಾರವಾಡದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿಗೆ ಟಿಕೆಟ್ ಫೈನಲ್ ಮಾಡಿತ್ತು ಕಾಂಗ್ರೆಸ್. ಇದೀಗ ಅಂತಿಮವಾಗಿ ಮೊಹಮ್ಮದ್ ಯೂಸುಫ್ಗೆ ಶಿಗ್ಗಾಂವಿ ಟಿಕೆಟ್ ನಿಡಿರುವ ಕಾಂಗ್ರೆಸ್, ಸ್ಥಳೀಯ ಮಟ್ಟದಲ್ಲಿ ಬೇರೆಯದ್ದೇ ತಂತ್ರ ಹೂಡಿರುವಂತೆ ಮೇಲ್ನೋಟಕ್ಕೆ ಕಾಣುತ್ತಿದೆ.
ವಿನಯ್ ಕುಲಕರ್ಣಿಗೆ ಭಾರಿ ಹಿನ್ನಡೆ
ಒಂದು ಕಡೆ ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದ್ದರೆ, ಮತ್ತೊಂದು ಕಡೆ ಧಾರವಾಡದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ನ್ಯಾಯಾಲಯದಲ್ಲಿ ಭಾರೀ ಹಿನ್ನಡೆಯಾಗಿದೆ. ವಿನಯ್ ಕುಲಕರ್ಣಿ ಧಾರವಾಡ ಪವೇಶಿಸಲು ಕೋರಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಮೇ 10ರಂದು ನಡೆಯುವ ಚುನಾವಣೆಗೆ ಈಗಾಗಲೇ ವಿನಯ್ ಕುಲಕರ್ಣಿ ಹೆಸರಿನಲ್ಲಿ ನಾಮಪತ್ರ ಸಲ್ಲಿಕೆಯಾಗಿದೆ. ಹೀಗಾಗಿ ಕಾಂಗ್ರೆಸ್ ನಾಯಕರ ಮುಂದಿನ ಕ್ರಮದ ಬಗ್ಗೆ ಕುತೂಹಲ ದುಪ್ಪಟ್ಟಾಗಿದೆ.
ಒಟ್ಟಾರೆ ಮತದಾನಕ್ಕೆ ಕೌಂಟ್ಡೌನ್ ಶುರುವಾಗಿರುವ ಬೆನ್ನಲ್ಲೇ ವಿಭಿನ್ನ ನಿಲುವನ್ನ ಕಾಂಗ್ರೆಸ್ ತೆಗೆದುಕೊಳ್ಳುತ್ತಿದೆ. ಸಿಎಂ ಕ್ಷೇತ್ರದಲ್ಲಿ ಮೊದಲು ಪ್ರಬಲ ಅಭ್ಯರ್ಥಿ ಹಾಕಲು ಯೋಜನೆ ರೂಪಿಸಲಾಗಿತ್ತು. ಆದರೆ ಇದೀಗ ಆ ಯೋಜನೆಯೇ ಬದಲಾಗಿ ಹೋಗಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ಅಧಿಸೂಚನೆ ಏಪ್ರಿಲ್ 13ರ ಗುರುವಾರ ಪ್ರಕಟವಾಗಿದ್ದು, ಸರ್ಕಾರಿ ರಜೆ ದಿನ ಹೊರತುಪಡಿಸಿ ಏಪ್ರಿಲ್ 20ರ ತನಕ ನಾಮಪತ್ರ ಸಲ್ಲಿಕೆ ಮಾಡಬಹುದು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications