ಪ್ರದೀಪ್ ಸಾವು: ಶಾಸಕರು ಆರೋಪ ಮುಕ್ತರಾಗಲಿ: ಸಿಎಂ ಆಶಯ
ಬೆಂಗಳೂರು, ಜನವರಿ 02: ಬೆಂಗಳೂರಿನಲ್ಲಿ ಉದ್ಯಮಿ ಪ್ರದೀಪ್ ಅವರ ಸಾವು ನಾಗರಿಕ ವಿವಾದವಾಗಿದೆ. ಈ ಪ್ರಕರಣದಲ್ಲಿ ಶಾಕಸರು ಭಾಗಿಯಾಗಿಲ್ಲ. ಪೊಲೀಸರು ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉದ್ಯಮಿ ಸಾವಿನ ಪ್ರಕರಣ ನಾಗರಿಕ ವಿವಾದವಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಲಿದ್ದಾರೆ. ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಶಾಸಕ ಅರವಿಂದ್ ಲಿಂಬಾವಳಿ ಅವರು ಆರೋಪ ಮುಕ್ತರಾಗಲಿ ಎಂದು ಅವರು ಆಶಿಸಿದರು.
ಬೆಂಗಳೂರು ಮೂಲದ ಉದ್ಯಮಿ ಪ್ರದೀಪ್ (47) ಎಂಬುವವರು ಹಣಕಾಸಿನ ತೊಂದರೆಯಿಂದ ಭಾನುವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಆತ್ಮಹತ್ಯೆಗೂ ಮುನ್ನ ಪತ್ರ ಬರೆದಿದ್ದು, ಅದರಲ್ಲಿ ಅವರು, ಶಾಸಕ ಲಿಂಬಾವಳಿ ಸೇರಿದಂತೆ ಆರು ಜನರ ಹೆಸರನ್ನು ಉಲ್ಲೇಖಿಸಿದ್ದಾರೆ.

ಇಷ್ಟು ಜನರು ನನ್ನ ಆತ್ಮಹತ್ಯೆಗೆ ನಿರ್ಧಾರಕ್ಕೆ ಪ್ರಚೋದಿಸಿದ್ದಾರೆ ಎಂದು ಶಾಸಕರ ಜೊತೆಗೆ ಜಯರಾಮ ರೆಡ್ಡಿ, ಜಿ ರಮೇಶ್ ರೆಡ್ಡಿ, ರಾಘವ ಭಟ್, ಗೋಪಿ.ಕೆ ಮತ್ತು ಸೋಮಯ್ಯ.ಕೆ ಎಂಬುವರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಮೃತ ಉದ್ಯಮಿ ಪತ್ನಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಏನಿದು ಪ್ರಕರಣ?
ಉದ್ಯಮಿ ಪ್ರದೀಪ್ ಎಂಬಾತ ಎಚ್ಎಸ್ಆರ್ ಬಡಾವಣೆಯ ಅಮಲೀಪುರದ ನಿವಾಸಿ. ಅವರು ಕನಕಪುರ ರಸ್ತೆಯ ನೆಟ್ಟಗೆರೆ ಬಳಿ ರೆಸಾರ್ಟ್ನಲ್ಲಿ ಭಾನುವಾರ ಸಂಜೆ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರ ಪತ್ನಿ ದೂರು ನೀಡಿದ್ದಾರೆ. ದೂರಿನಲ್ಲಿ ಪತ್ನಿ, ನನ್ನ ಪತಿ ಈ ಹಿಂದೆ ಹಲವಾರು ವ್ಯಾಪಾರಗಳಲ್ಲಿ ಹಣ ಹೂಡಿಕೆ ಮಾಡಿದ್ದರು. ಹಣಕಾಸಿನ ವಿಚಾರದಲ್ಲಿ ತುಸು ನಷ್ಟು ಅನುಭವಿಸಿದ್ದರು. ಕೆಲವರು ಬರಬೇಕಾದ ಹಣ ಬಂದಿರಲಿಲ್ಲ. ಆದ್ದರಿಂದ ಪತಿ ಸಾವಿಗೆ ನ್ಯಾಯ ಕೊಡಿಸುವಂತೆ ಪತ್ನಿ ಪೊಲೀಸ್ ಬಳಿ ಮನವಿ ಮಾಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications