Sankey flyover: ಅಧಿಕಾರಿಗಳು, ಪ್ರತಿಭಟನಾಕಾರರ ನಡುವೆ ಫ್ಲೈಓವರ್ ಯೋಜನೆ ಬಗ್ಗೆ ಚರ್ಚೆ; ಸಿಎಂ ಭರವಸೆ
ಸ್ಯಾಂಕಿ ಮೇಲ್ಸೇತುವೆಗೆ ಭಾರಿ ವಿರೋಧ ವ್ಯಕ್ತವಾಗುತ್ತಿದ್ದು, ಮೊದಲ ಬಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನ ಮುರಿದಿದ್ದಾರೆ.
ಬೆಂಗಳೂರು, ಫೆಬ್ರವರಿ. 05: ಭಾರಿ ವಿರೋಧಕ್ಕೆ ಕಾರಣವಾಗಿರುವ ವಿವಾದಿತ ಸ್ಯಾಂಕಿ ಮೇಲ್ಸೇತುವೆ ಯೋಜನೆ ಕುರಿತು ಮೌನ ಮುರಿದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಬಿಎಂಪಿ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚೆಗೆ ಆಹ್ವಾನಿಸುವುದಾಗಿ ಸದಾಶಿವನಗರ ಮತ್ತು ಮಲ್ಲೇಶ್ವರಂ ನಿವಾಸಿಗಳಿಗೆ ಭರವಸೆ ನೀಡಿದ್ದಾರೆ.
ಈ ಸ್ಯಾಂಕಿ ಮೇಲ್ಸೇತುವೆ ವಿರುದ್ಧ ಹೋರಾಟ ಹೆಚ್ಚಾಗುತ್ತಿದ್ದು, ಸ್ಯಾಂಕಿ ಗ್ರೂಪ್ ನಾಗರಿಕರನ್ನು ಪ್ರತಿನಿಧಿಸುವ ನಿವಾಸಿಗಳ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅವರ ಆರ್ಟಿ ನಗರ ನಿವಾಸದಲ್ಲಿ ಭೇಟಿಯಾಗಿ ಯೋಜನೆ ಕೈಬಿಡುವಂತೆ ಮನವಿ ಮಾಡಿದ್ದಾರೆ.
It was reassuring to meet Honourable CM of Karnataka @CMofKarnataka @BSBommai this morning to register our protest and explain our stance regarding Sankey Flyover and he has agreed to look into it with an open mind . Thank you Sir for your time. #flyoveryaake #CitizensforSankey pic.twitter.com/M9DRknfwiX
— Lakshmi Sharath (@lakshmisharath) February 4, 2023
ವಲಯ ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿದ ಬಳಿಕ ನಿವಾಸಿಗಳು ಸಿಎಂಗೆ ಮನವಿ ಸಲ್ಲಿಸಿದ್ದಾರೆ.

ಸದಾಶಿವನಗರ ಮತ್ತು ಮಲ್ಲೇಶ್ವರಂ ನಿವಾಸಿಗಳ ನಿಯೋಗದ ಸದಸ್ಯರಾದ ಲಕ್ಷ್ಮಿ ಶರತ್ "ನಾವು ಸುಮಾರು 10 ನಿಮಿಷಗಳ ಕಾಲ ಸಿಎಂ ಅವರನ್ನು ಭೇಟಿ ಮಾಡಿದ್ದೇವೆ. ಅವರು ಬಹಳ ತಾಳ್ಮೆಯಿಂದ ನಮ್ಮ ಯೋಚನೆ ಮತ್ತು ಅಭಿಪ್ರಾಯಗಳನ್ನು ಕೇಳಿಸಿಕೊಂಡಿದ್ದಾರೆ" ಎಂದಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, 'ನಮಗೆ ಈ ಯೋಜನೆ ಏಕೆ ಬೇಕು ಎಂದು ನಮಗೆಲ್ಲರಿಗೂ ತಿಳಿದಿದೆ, ಈ ಯೋಜನೆ ನಿಮಗೆ ಬೇಡವಾದರೆ ಏಕೆ ಬೇಡ ಎಂದು ನನಗೆ ತಿಳಿಸಿ, ನಾನು ಮುಕ್ತ ಮನಸ್ಸಿನಿಂದ ಕೇಳಿಸಿಕೊಳ್ಳುತ್ತೇನೆ. ನಾನು ಅಧಿಕಾರಿಗಳೊಂದಿಗೆ ಮಾತನಾಡಿ ಯೋಜನೆಯ ಬಗ್ಗೆ ನಿಮ್ಮೊಂದಿಗೆ ಚರ್ಚೆ ನಡೆಸುತ್ತೇನೆ" ಎಂದು ಹೇಳಿದ್ದಾರೆ.
ಬಿಬಿಎಂಪಿ ವತಿಯಿಂದ ಭಾಷ್ಯಂ ವೃತ್ತದಿಂದ ಮಲ್ಲೇಶ್ವರಂ 18ನೇ ಕ್ರಾಸ್ವರೆಗೆ ಸ್ಯಾಂಕಿ ರಸ್ತೆ ಅಗಲೀಕರಣ ಹಾಗೂ ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಭಾಷ್ಯಂ ವೃತ್ತ ಹಾಗೂ ಗುಟ್ಟಹಳ್ಳಿ ಜಂಕ್ಷನ್ನಲ್ಲಿ ಆಗಾಗ್ಗೆ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂಬುದು ಪಾಲಿಕೆ ಅಧಿಕಾರಿಗಳ ವಾದ. ಆದರೆ, ಈ ಮೇಲ್ಸೇತುವೆಯಿಂದಾ ನೂರಾರು ಮರಗಳ ಮಾರಣಹೋಮವಾಗುತ್ತದೆ, ಉತ್ತಮ ವಾತಾವರಣ ಹಾಳಾಗುತ್ತದೆ ಎಂಬುದು ಇಲ್ಲಿನ ನಿವಾಸಿಗಳ ವಾದ.

ಇತ್ತೀಚೆಗೆ ನಗರದ ಸುಮಾರು 2,000ಕ್ಕೂ ಹೆಚ್ಚು ಮಕ್ಕಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು, ಉದ್ದೇಶಿತ ಸ್ಯಾಂಕಿ ರೋಡ್ ಮೇಲ್ಸೇತುವೆ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.
ಪತ್ರದಲ್ಲಿ, " ಆತ್ಮೀಯ ಬೊಮ್ಮಾಯಿ ಅಂಕಲ್, ದಯವಿಟ್ಟು ನಮ್ಮ ಪರಿಸರವನ್ನು ರಕ್ಷಿಸಿ. ನಾವು ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣದಲ್ಲಿ ಕಲಿಯಲು ಮತ್ತು ಒಟ್ಟಿಗೆ ಆಡಲು ಬಯಸುತ್ತೇವೆ" ಎಂದು ಬರೆಯಲಲಾಗಿದೆ. ಕನ್ನಡ ಮತ್ತು ಆಂಗ್ಲಭಾಷೆಗಳಲ್ಲಿ ಪತ್ರ ಬರೆದು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications