ಬೆಂಗಳೂರು ಯುನಿಕಾರ್ನ್‌ ಲೋಗೋಗೆ ಸ್ಥಳ ಹುಡುಕಲು ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು, ಆಗಸ್ಟ್‌ 23: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರನ್ನು ಸ್ಟಾರ್ಟ್ಅಪ್ ರಾಜಧಾನಿಯಾಗಿ ಪ್ರತಿನಿಧಿಸಲು ಯುನಿಕಾರ್ನ್ ಅನ್ನು ತೋರಿಸುವ ಲೋಗೋಗೆ ಸೂಕ್ತ ಸ್ಥಳವನ್ನು ಹುಡುಕುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಯೂನಿಕಾರ್ನ್ ಎಂಬುದು ಖಾಸಗಿ ಕಂಪನಿಗೆ 1 ಬಿಲಿಯನ್ ಡಾಲರ್‌ (ರೂ. 7,900 ಕೋಟಿ) ಮೌಲ್ಯವನ್ನು ಹೊಂದಿರುವ ಪದವಾಗಿದೆ. 2021-22ರಲ್ಲಿ 53 ಭಾರತೀಯ ಸ್ಟಾರ್ಟ್‌ಅಪ್‌ಗಳು ಯುನಿಕಾರ್ನ್‌ಗಳಾಗಿ ಮಾರ್ಪಟ್ಟಿವೆ. ಕಂಪನಿಗಳ ಕುರಿತು ಒಳನೋಟಗಳನ್ನು ಒದಗಿಸುವ ವೇದಿಕೆಯಾದ ಕ್ರಂಚ್‌ಬೇಸ್ ಪ್ರಕಾರ ಅವುಗಳಲ್ಲಿ 19 ಬೆಂಗಳೂರಿನಲ್ಲಿ, 12 ಮುಂಬೈನಲ್ಲಿ ಮತ್ತು 12 ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (NCR) ಇವೆ.

ಬೆಂಗಳೂರು ಸುಮಾರು 5,000 ಸ್ಟಾರ್ಟಪ್‌ಗಳಿಗೆ ನೆಲೆಯಾಗಿದೆ. ಬೆಂಗಳೂರು ಇಡೀ ದೇಶದಲ್ಲಿ ಅತಿ ಹೆಚ್ಚು ಸ್ಟಾರ್ಟ್‌ಅಪ್‌ಗಳು ಮತ್ತು ಯುನಿಕಾರ್ನ್‌ಗಳನ್ನು ಹೊಂದಿರುವುದರಿಂದ, ಅದನ್ನು ಹೈಲೈಟ್ ಮಾಡಲು ಮತ್ತು ಪ್ರೋತ್ಸಾಹಿಸಲು ಯುನಿಕಾರ್ನ್ ಲೋಗೋವನ್ನು ಹಾಕಲು ನಗರದಲ್ಲಿ ಸೂಕ್ತ ಸ್ಥಳವನ್ನು ಗುರುತಿಸಬೇಕು" ಎಂದು ಬೊಮ್ಮಾಯಿ ಸಭೆಯಲ್ಲಿ ಹೇಳಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಿಎಂ ತತ್ವ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಹಣಕಾಸು) ಐಎಸ್ಎನ್ ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ತತ್ವ ಕಾರ್ಯದರ್ಶಿ ರಶ್ಮಿ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು. ಮೂಲಗಳ ಪ್ರಕಾರ, ವಿಧಾನಸೌಧ ಮತ್ತು ವಿಕಾಸಸೌಧದ ನಡುವೆ ಯುನಿಕಾರ್ನ್ ಲೋಗೋ ಬರುವ ಸಾಧ್ಯತೆಯಿದೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ಪೂರಕವಾಗಿ ಎರಡು ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಸಂಶೋಧನೆಗೆ ಹೆಚ್ಚು ಪ್ರೋತ್ಸಾಹ ನೀಡುವ ಆರ್ ಎಂಡ್ ಡಿ ಪಾಲಿಸಿ, ಹೆಚ್ಚು ಉದ್ಯೋಗವನ್ನು ಒದಗಿಸುವ ಉದ್ಯಮಗಳಿಗೆ ಹೆಚ್ಚು ಪ್ರೋತ್ಸಾಹಕಗಳನ್ನು ನೀತಿಗಳನ್ನು ಜಾರಿಗೆ ತರಲಾಗಿದೆ. ಈ ಎರಡೂ ನೀತಿಗಳ ಲಾಭಗಳನ್ನು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂಸ್ಥೆಗಳು ಪಡೆದುಕೊಳ್ಳಬಹುದಾಗಿದೆ

ಕೆಲವು ತಿಂಗಳುಗಳಲ್ಲಿ ಸಿದ್ಧ

ಕೆಲವು ತಿಂಗಳುಗಳಲ್ಲಿ ಸಿದ್ಧ

ಯುನಿಕಾರ್ನ್ ಲೋಗೋ ವಿನ್ಯಾಸದ ಪ್ರಕ್ರಿಯೆಯಲ್ಲಿದೆ ಮತ್ತು ಮುಂದಿನ ಕೆಲವು ತಿಂಗಳುಗಳಲ್ಲಿ ಸಿದ್ಧವಾಗಲಿದೆ ಎಂದು ಮೂಲಗಳು ತಿಳಿಸಿವೆ. ಫುಲ್ ಸ್ಟಾಕ್ ಫೈನಾನ್ಷಿಯಲ್ ಸೊಲ್ಯೂಷನ್ಸ್ ಕಂಪನಿಯು ಇದನ್ನು ವಿನ್ಯಾಸಗೊಳಿಸುತ್ತಿದ್ದು, ಒಂದೆರಡು ತಿಂಗಳಲ್ಲಿ ಸರ್ಕಾರ ನೀಡಿರುವ ಜಾಗದಲ್ಲಿ ಅಳವಡಿಸಲಾಗುತ್ತದೆ. ಈ ಲೋಗೋ ನಾಗರಿಕರಿಗೆ ಲಭ್ಯವಾಗಿರುತ್ತದೆ. ಇದು ನಗರದ ಆಕರ್ಷಣೆಯಾಗಿರಲಿದೆ ಎಂದು ಸರ್ಕಾರವು ಭಾವಿಸುತ್ತದೆ ಎಂದು ಮೂಲಗಳು ತಿಳಿಸಿವೆ.

 ಏಳು ಇಂಜಿನಿಯರಿಂಗ್ ಕಾಲೇಜು ಮೇಲ್ದರ್ಜೆಗೆ

ಏಳು ಇಂಜಿನಿಯರಿಂಗ್ ಕಾಲೇಜು ಮೇಲ್ದರ್ಜೆಗೆ

ಇದೇ ವೇಳೇ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ (ಯುವಿಸಿಇ) ಅಭಿವೃದ್ಧಿಗೆ ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸುವಂತೆ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು. ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಕೆಐಟಿ) ಆಗಿ ಮೇಲ್ದರ್ಜೆಗೇರಿಸುವ ಕುರಿತು ನಡೆದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು. ಯುವಿಸಿಇ ಅಧ್ಯಕ್ಷ ಬಿ ಮುತ್ತುರಾಮನ್ ಸಭೆಯಲ್ಲಿ ಉಪಸ್ಥಿತರಿದ್ದರು.

ಗುರಿಗಳನ್ನು ರೂಪಿಸಲು ಸೂಚನೆ

ಗುರಿಗಳನ್ನು ರೂಪಿಸಲು ಸೂಚನೆ

ಯುವಿಸಿಇ ಅಧ್ಯಕ್ಷ ಬಿ. ಮುತ್ತುರಾಮನ್ ಅವರೊಂದಿಗೆ ನಡೆದ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣದ ಸಭೆಯಲ್ಲಿ ಮಾತನಾಡಿದ ಅವರು, ನಿಗದಿತ ಸಮಯದಲ್ಲಿ ಅನುಷ್ಠಾನಗೊಳಿಸಬಹುದಾದ ಉತ್ತಮ ಪರಿಕಲ್ಪನೆಗಳನ್ನು ಒಳಗೊಂಡಿರುವ ಅಲ್ಪಾವಧಿ ಮತ್ತು ದೀರ್ಘಾವಧಿ ಗುರಿಗಳನ್ನು ರೂಪಿಸಲು ಸೂಚನೆ ನೀಡಿದರು.

ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್‌ ಸ್ಫೂರ್ತಿ

ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್‌ ಸ್ಫೂರ್ತಿ

ಯಶಸ್ಸನ್ನು ಸಾಧಿಸಲು ಸಾಧ್ಯವಿರುವಲ್ಲಿ ಉತ್ಕೃಷ್ಟತೆಯ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್‌ನ ಯಶಸ್ಸಿನ ಕಥೆಯು ಇತರರಿಗೆ ಸ್ಫೂರ್ತಿ ನೀಡಬೇಕು. ಕರ್ನಾಟಕ ತಂತ್ರಜ್ಞಾನ ಸಂಸ್ಥೆಗೆ ಆಯ್ಕೆಯಾದ ಪ್ರತಿಯೊಂದು ಸಂಸ್ಥೆಗಳಿಗೂ ಸಮಿತಿಗಳನ್ನು ರಚಿಸಬೇಕು. ಮೌಲ್ಯಗಳು ಮತ್ತು ನೈತಿಕತೆಯ ತಳಹದಿಯ ಮೇಲೆ ಈ ಸಂಸ್ಥೆಗಳನ್ನು ನಿರ್ಮಿಸಬೇಕು. ಈ ಸಂಸ್ಥೆಗಳು ದೂರಗಾಮಿ ಬದಲಾವಣೆಗಳನ್ನು ಮಾಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+