ರಾಣೇಬೆನ್ನೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಿಸಿದ ಸಿಎಂ ಬಿಎಸ್ವೈ
ಬೆಂಗಳೂರು, ನವೆಂಬರ್ 15: ರಾಣೇಬೆನ್ನೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ಬೆಳಗ್ಗೆ ಅಭ್ಯರ್ಥಿಯ ಹೆಸರನ್ನು ಸುದ್ದಿಗಾರರ ಮುಂದಿಟ್ಟರು.
ಬಿಜೆಪಿಯಿಂದ ಅರುಣ್ ಕುಮಾರ್ ಜಿ ಅವರು ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಈ ಕ್ಷೇತ್ರದ ಟಿಕೆಟ್ ಗಾಗಿ ಅನೇಕ ಮಂದಿ ಆಕಾಂಕ್ಷಿಗಳಿದ್ದರು. ಪ್ರಮುಖ ಆಕಾಂಕ್ಷಿಯಾಗಿದ್ದ ಪ್ರಜಾಕೀಯ ಪಕ್ಷದಿಂದ ಗೆದ್ದು ನಂತರ ರಾಜೀನಾಮೆ ನೀಡಿ, ಪಕ್ಷ ವಿಲೀನಗೊಳಿಸಿ ಕಾಂಗ್ರೆಸ್ ನಿಂದ ಅನರ್ಹ ಶಾಸಕ ಎನಿಸಿಕೊಂಡ ಆರ್ ಶಂಕರ್ ಕೂಡಾ ಒಬ್ಬರು.
"ಆರ್ ಶಂಕರ್ ಅವರೊಂದಿಗೆ ನಾನು ಮಾತನಾಡಿದ್ದೇನೆ. ಅವರು ಹಾಗೂ ಅವರ ಬೆಂಬಲಿಗರು, ರಾಣೇಬೆನ್ನೂರಿನಲ್ಲಿ ಯಾರೇ ಅಭ್ಯರ್ಥಿಯಾಗಲಿ ಅವರ ಪರ ಪ್ರಚಾರಕ್ಕೆ ನಿಲ್ಲಲಿದ್ದಾರೆ. ಶಂಕರ್ ಅವರಿಗೆ ಸೂಕ್ತ ಸಮಯದಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದೇನೆ. ನನ್ನ ಜೀವನದಲ್ಲಿ ನಾನು ಯಾರಿಗಾದರೂ ಭರವಸೆಯನ್ನು ನೀಡಿದರೆ, ನಾನು ಕುರ್ಚಿಗಂಟಿಕೊಂಡವನಲ್ಲ, ಭರವಸೆಯನ್ನು ಈಡೇರಿಸುವಂತವನು" ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಆರ್ ಶಂಕರ್ ಅವರನ್ನು ಎಂಎಲ್ಸಿ ಮಾಡಿ ಮಂತ್ರಿ ಮಾಡುತ್ತೇನೆ ಎಂದು ಬಿ.ಎಸ್ ಯಡಿಯೂರಪ್ಪ ಅವರು ನಿನ್ನೆ ಅನರ್ಹ ಶಾಸಕರನ್ನು ಬಿಜೆಪಿಗೆ ಸೇರಿಸಿಕೊಂಡ ವೇದಿಕೆಯಲ್ಲೇ ಘೋಷಿಸಿದ್ದರು. ಆದರೆ ಎರಡು ಬಾರಿ ಮಂತ್ರಿಗಿರಿ ಅನುಭವಿಸಿರುವ ಆರ್ ಶಂಕರ್ ಅವರು ಚುನಾವಣೆ ಸ್ಪರ್ಧಿಸಿಯೇ ತೀರುವುದಾಗಿ ತಮ್ಮ ಬೆಂಬಲಿಗರು ಮುಂದೆ ಹೇಳಿಕೊಂಡಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications