Get Updates
Get notified of breaking news, exclusive insights, and must-see stories!

ಅಕ್ರಮ ಗಣಿಗಾರಿಕೆ ತಡೆಯಲು ಬರಲಿದೆ ಡ್ರೋನ್ ಕಣ್ಗಾವಲು

ಬೆಂಗಳೂರು, ಮೇ 29 : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಶುಕ್ರವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಸಿ ವರ್ಗದ ಗಣಿ ಗುತ್ತಿಗೆಗಳನ್ನು ಸರ್ವೋಚ್ಛ ನ್ಯಾಯಾಲಯವು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಈ ಮೊದಲೇ ಗಣಿಗಾರಿಕೆ ಮಾಡಿರುವ ಸುಮಾರು 800 ಮಿಲಿಯನ್ ಟನ್ ಅದಿರು ಮಾರಾಟವಾಗದೇ ಉಳಿದುಕೊಂಡಿದ್ದು, ಇದನ್ನು ಮಾರಾಟ ಮಾಡಲು ಇರುವ ತಾಂತ್ರಿಕ ಮೆಟ್ರಿಕ್ತೊಂದರೆಗಳ ನಿವಾರಣೆಗೆ ಮಹಾಲೇಖಪಾಲರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಸೂಚಿಸಿದರು.

''ರಾಜ್ಯದಲ್ಲಿ ಖನಿಜ ಪರವಾನಗಿ ಇಲ್ಲದೆ, ಅಕ್ರಮ ಗಣಿಗಾರಿಕೆಗಳನ್ನು ಮಾಡುತ್ತಿರುವುದನ್ನು ತಡೆಗಟ್ಟಲು ಹೆಚ್ಚೆಚ್ಚು ಡ್ರೋನ್ ಸರ್ವೆ ಕೈಗೊಳ್ಳಬೇಕು. ಬೇಕಾದರೆ ಇದಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುತ್ತೇವೆ'' ಎಂದು ಮುಖ್ಯಮಂತ್ರಿ ತಿಳಿಸಿದರು.

ಖನಿಜಾನ್ವೇಷಣೆಗೆ ಸೂಚನೆ

ಖನಿಜಾನ್ವೇಷಣೆಗೆ ಸೂಚನೆ

ಅರಣ್ಯ ಪ್ರದೇಶದಲ್ಲಿ ಕಬ್ಬಿಣದ ಅದಿರಿನ ಖನಿಜಾನ್ವೇಷಣೆಗೆ ಅಧಿಕಾರಿಗಳು ಶೀಘ್ರವಾಗಿ ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಬೇಕು. ನಂತರ ಖನಿಜಾನ್ವೇಷಣೆ ಕಾರ್ಯ ಕೈಗೊಳ್ಳುವಂತೆ ಮುಖ್ಯಮಂತ್ರಿ ತಿಳಿಸಿದರು.

ಕೋವಿಡ್ 19 ಸೋಂಕು ತಡೆಗಟ್ಟಲು

ಕೋವಿಡ್ 19 ಸೋಂಕು ತಡೆಗಟ್ಟಲು

ಗಣೆಬಾಧಿತ ಪ್ರದೇಶಗಳ ಅಭಿವೃದ್ಧಿ ಮತ್ತು ಜನರ ಜೀವನ ಮಟ್ಟ ಉತ್ತಮ ಪಡಿಸಲು ಗುತ್ತಿಗೆದಾರರಿಂದ ರಾಜಧನದ ಶೇಕಡಾ 10 ರಷ್ಟು ಮತ್ತು 30 ರಷ್ಟು ಅನ್ವಯವಾಗುವಂತೆ ಜಿಲ್ಲಾ ಪ್ರತಿಷ್ಠಾನ ನಿಧಿಗೆ ಈವರೆಗೆ ವಂತಿಗೆ 28 ಕೋಟಿ ರೂ ಸಂಗ್ರಹವಾಗಿದ್ದು, ಭಾರತ ಸರ್ಕಾರದ ನಿರ್ದೇಶನದಂತೆ ಕೋವಿಡ್ 19 ಸೋಂಕು ತಡೆಗಟ್ಟಲು ಈ ಮೊತ್ತವನ್ನು ವಿನಿಯೋಗಿಸಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ .ಪಾಟೀಲ್ ತಿಳಿಸಿದರು.

45 ದಶಲಕ್ಷ ಮೆಟ್ರಿಕ್ ಮರಳಿನ ಬೇಡಿಕೆ

45 ದಶಲಕ್ಷ ಮೆಟ್ರಿಕ್ ಮರಳಿನ ಬೇಡಿಕೆ

ರಾಜ್ಯದಲ್ಲಿ ಅಂದಾಜು 45 ದಶಲಕ್ಷ ಮೆಟ್ರಿಕ್ ಮರಳಿನ ಬೇಡಿಕೆ ಇದ್ದು, ಸದ್ಯ 38 ದಶಲಕ್ಷ ಮಟ್ರಿಕ್ ಟನ್ ಪೂರೈಕೆ ಮಾಡಲಾಗುತ್ತಿದೆ. ಹೊಸ ಮರಳು ನೀತಿಯ ಅನುಷ್ಠಾನದಿಂದ ಸರ್ಕಾರಕ್ಕೆ ಹೆಚ್ಚಿನ ರಾಜಧನ ಸಂಗ್ರಹವಾಗಲಿದೆ ಎಂದು ಸಚಿವರು ತಿಳಿಸಿದರು. ಕೆಎಂಎಂಸಿಆರ್ ನಿಯಮಾವಳಿಗಳ ತಿದ್ದುಪಡಿ ನಂತರ ಬಾಕಿ ಇರುವ ಅರ್ಹ ಅರ್ಜಿಗಳಿಗೆ ಗಣಿಗುತ್ತಿಗೆಗಳ ಮಂಜೂರಾತಿ ಮತ್ತು ಹರಾಜು ಮೂಲಕ ಕಟ್ಟಡಕಲ್ಲು ಗಣಿಗುತ್ತಿಗೆಗೆಗಳ ಮಂಜೂರಾತಿ ನೀಡಲಾಗುವುದು ಎಂದು ಸಿ.ಸಿ .ಪಾಟೀಲ್ ತಿಳಿಸಿದರು.

ಪರಿಷ್ಕರಣೆ ಪ್ರಕ್ರಿಯೆ ಜಾರಿಯಲ್ಲಿದೆ

ಪರಿಷ್ಕರಣೆ ಪ್ರಕ್ರಿಯೆ ಜಾರಿಯಲ್ಲಿದೆ

ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮ 2020ರ ಜಾರಿಗೊಳಿಸಲು ಕ್ರಮವಹಿಸಲಾಗುತ್ತಿದ್ದು, ಕಲ್ಲು ಗಣಿ ಗುತ್ತಿಗೆ ಮಂಜೂರಾತಿ ಮತ್ತು ಪರವಾನಗಿ ವಿತರಣಾ ನಿಯಮಗಳ ಸರಳೀಕರಣ ಹಾಗೂ ಉಪ ಖನಿಜಗಳ ಮೇಲಿನ ರಾಜಧನ ಪರಿಷ್ಕರಣೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ. ಮಹೇಶ್ವರ ರಾವ್, ನಿರ್ದೇಶಕ ಶಿವಶಂಕರ್ ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+