ಅಕ್ರಮ ಗಣಿಗಾರಿಕೆ ತಡೆಯಲು ಬರಲಿದೆ ಡ್ರೋನ್ ಕಣ್ಗಾವಲು
ಬೆಂಗಳೂರು, ಮೇ 29 : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಶುಕ್ರವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಸಿ ವರ್ಗದ ಗಣಿ ಗುತ್ತಿಗೆಗಳನ್ನು ಸರ್ವೋಚ್ಛ ನ್ಯಾಯಾಲಯವು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಈ ಮೊದಲೇ ಗಣಿಗಾರಿಕೆ ಮಾಡಿರುವ ಸುಮಾರು 800 ಮಿಲಿಯನ್ ಟನ್ ಅದಿರು ಮಾರಾಟವಾಗದೇ ಉಳಿದುಕೊಂಡಿದ್ದು, ಇದನ್ನು ಮಾರಾಟ ಮಾಡಲು ಇರುವ ತಾಂತ್ರಿಕ ಮೆಟ್ರಿಕ್ತೊಂದರೆಗಳ ನಿವಾರಣೆಗೆ ಮಹಾಲೇಖಪಾಲರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಸೂಚಿಸಿದರು.
''ರಾಜ್ಯದಲ್ಲಿ ಖನಿಜ ಪರವಾನಗಿ ಇಲ್ಲದೆ, ಅಕ್ರಮ ಗಣಿಗಾರಿಕೆಗಳನ್ನು ಮಾಡುತ್ತಿರುವುದನ್ನು ತಡೆಗಟ್ಟಲು ಹೆಚ್ಚೆಚ್ಚು ಡ್ರೋನ್ ಸರ್ವೆ ಕೈಗೊಳ್ಳಬೇಕು. ಬೇಕಾದರೆ ಇದಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುತ್ತೇವೆ'' ಎಂದು ಮುಖ್ಯಮಂತ್ರಿ ತಿಳಿಸಿದರು.

ಖನಿಜಾನ್ವೇಷಣೆಗೆ ಸೂಚನೆ
ಅರಣ್ಯ ಪ್ರದೇಶದಲ್ಲಿ ಕಬ್ಬಿಣದ ಅದಿರಿನ ಖನಿಜಾನ್ವೇಷಣೆಗೆ ಅಧಿಕಾರಿಗಳು ಶೀಘ್ರವಾಗಿ ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಬೇಕು. ನಂತರ ಖನಿಜಾನ್ವೇಷಣೆ ಕಾರ್ಯ ಕೈಗೊಳ್ಳುವಂತೆ ಮುಖ್ಯಮಂತ್ರಿ ತಿಳಿಸಿದರು.

ಕೋವಿಡ್ 19 ಸೋಂಕು ತಡೆಗಟ್ಟಲು
ಗಣೆಬಾಧಿತ ಪ್ರದೇಶಗಳ ಅಭಿವೃದ್ಧಿ ಮತ್ತು ಜನರ ಜೀವನ ಮಟ್ಟ ಉತ್ತಮ ಪಡಿಸಲು ಗುತ್ತಿಗೆದಾರರಿಂದ ರಾಜಧನದ ಶೇಕಡಾ 10 ರಷ್ಟು ಮತ್ತು 30 ರಷ್ಟು ಅನ್ವಯವಾಗುವಂತೆ ಜಿಲ್ಲಾ ಪ್ರತಿಷ್ಠಾನ ನಿಧಿಗೆ ಈವರೆಗೆ ವಂತಿಗೆ 28 ಕೋಟಿ ರೂ ಸಂಗ್ರಹವಾಗಿದ್ದು, ಭಾರತ ಸರ್ಕಾರದ ನಿರ್ದೇಶನದಂತೆ ಕೋವಿಡ್ 19 ಸೋಂಕು ತಡೆಗಟ್ಟಲು ಈ ಮೊತ್ತವನ್ನು ವಿನಿಯೋಗಿಸಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ .ಪಾಟೀಲ್ ತಿಳಿಸಿದರು.

45 ದಶಲಕ್ಷ ಮೆಟ್ರಿಕ್ ಮರಳಿನ ಬೇಡಿಕೆ
ರಾಜ್ಯದಲ್ಲಿ ಅಂದಾಜು 45 ದಶಲಕ್ಷ ಮೆಟ್ರಿಕ್ ಮರಳಿನ ಬೇಡಿಕೆ ಇದ್ದು, ಸದ್ಯ 38 ದಶಲಕ್ಷ ಮಟ್ರಿಕ್ ಟನ್ ಪೂರೈಕೆ ಮಾಡಲಾಗುತ್ತಿದೆ. ಹೊಸ ಮರಳು ನೀತಿಯ ಅನುಷ್ಠಾನದಿಂದ ಸರ್ಕಾರಕ್ಕೆ ಹೆಚ್ಚಿನ ರಾಜಧನ ಸಂಗ್ರಹವಾಗಲಿದೆ ಎಂದು ಸಚಿವರು ತಿಳಿಸಿದರು. ಕೆಎಂಎಂಸಿಆರ್ ನಿಯಮಾವಳಿಗಳ ತಿದ್ದುಪಡಿ ನಂತರ ಬಾಕಿ ಇರುವ ಅರ್ಹ ಅರ್ಜಿಗಳಿಗೆ ಗಣಿಗುತ್ತಿಗೆಗಳ ಮಂಜೂರಾತಿ ಮತ್ತು ಹರಾಜು ಮೂಲಕ ಕಟ್ಟಡಕಲ್ಲು ಗಣಿಗುತ್ತಿಗೆಗೆಗಳ ಮಂಜೂರಾತಿ ನೀಡಲಾಗುವುದು ಎಂದು ಸಿ.ಸಿ .ಪಾಟೀಲ್ ತಿಳಿಸಿದರು.

ಪರಿಷ್ಕರಣೆ ಪ್ರಕ್ರಿಯೆ ಜಾರಿಯಲ್ಲಿದೆ
ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮ 2020ರ ಜಾರಿಗೊಳಿಸಲು ಕ್ರಮವಹಿಸಲಾಗುತ್ತಿದ್ದು, ಕಲ್ಲು ಗಣಿ ಗುತ್ತಿಗೆ ಮಂಜೂರಾತಿ ಮತ್ತು ಪರವಾನಗಿ ವಿತರಣಾ ನಿಯಮಗಳ ಸರಳೀಕರಣ ಹಾಗೂ ಉಪ ಖನಿಜಗಳ ಮೇಲಿನ ರಾಜಧನ ಪರಿಷ್ಕರಣೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ. ಮಹೇಶ್ವರ ರಾವ್, ನಿರ್ದೇಶಕ ಶಿವಶಂಕರ್ ಉಪಸ್ಥಿತರಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications