Get Updates
Get notified of breaking news, exclusive insights, and must-see stories!

ಶಾಸಕ ರೇಣುಕಾಚಾರ್ಯಗೆ ಸಿಎಂ ಬಿಎಸ್ವೈ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು, ಏಪ್ರಿಲ್ 26: ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.

ಶಾಸಕ ರೇಣುಕಾಚಾರ್ಯ ಅವರು ಸಾಮಾಜಿಕ‌ ಅಂತರ‌ ಕಾಯ್ದುಕೊಳ್ಳದೇ ಆಶಾ ಕಾರ್ಯಕರ್ತೆಯರ ಸಭೆ‌ ನಡೆಸಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ವಿಡಿಯೋ ನೋಡಿ ಇಂದು ಶಾಸಕ ರೇಣುಕಾಚಾರ್ಯಗೆ ಕರೆ ಮಾಡಿದ್ದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಸಭೆಯಲ್ಲಿ ಸಾಮಾಜಿಕ ಕಾಯ್ದುಕೊಳ್ಳದೇ ಏನು‌ ಮಾಡುತ್ತಿದ್ದೀಯ ನೀನು‌? ಅಂತ ಪ್ರಶ್ನೆ ಮಾಡಿದ್ದಾರೆ.

CM BS Yediyurappa Warned To MLA Renukacharya

ಕೊರೊನಾ ವೈರಸ್ ವ್ಯಾಪಕವಾಗಿ ಹರಡಿರುವ ಈ ಸಂದರ್ಭದಲ್ಲಿ ಇಡೀ ‌ದೇಶವೇ ಸಾಮಾಜಿಕ‌ ಅಂತರದ ಬಗ್ಗೆ ಮಾತನಾಡುತ್ತಿದ್ದರೆ, ನೀನು‌ ಮಾತ್ರ ಅದನ್ನು ಕಾಪಾಡಿಕೊಳ್ಳದೇ ಸಭೆ ಮಾಡಿದ್ದೀಯಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀನು ಒಬ್ಬ ಶಾಸಕನಾಗಿ ಜವಾಬ್ದಾರಿ ಬೇಡವೇ ಅಂತ ಪ್ರಶ್ನೆ ಮಾಡಿದ್ದಲ್ಲದೇ, ಇದೇ ಕೊನೆಯ ಎಚ್ಚರಿಕೆ ಇನ್ನೊಮ್ಮೆ‌ ಈ ರೀತಿಯ ಘಟನೆ ಮರುಕಳಿಸಿದರೆ ಸಹಿಸುವುದಿಲ್ಲ ಅಂತ ಎಚ್ಚರಿಕೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+