Get Updates
Get notified of breaking news, exclusive insights, and must-see stories!

ಸಿ.ಎಂ ಚೇಂಜ್‌: ಹೈಕಮಾಂಡ್ ಮೆಸೇಜ್‌ ಇದೆ ಎಂದ ರಾಮಲಿಂಗಾರೆಡ್ಡಿ...

ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿ.ಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆಯೇ ಎನ್ನುವ ಬಗ್ಗೆಯೇ ಜೋರು ಚರ್ಚೆ ಶುರುವಾಗಿದೆ. ಮುಖ್ಯಮಂತ್ರಿ ಬದಲಾವಣೆಯಿಂದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ವರೆಗೆ ಕಾಂಗ್ರೆಸ್‌ನಲ್ಲಿ ಎಲ್ಲಾ ತರದ ಚರ್ಚೆಗಳು ನಡೆದಿದ್ದು. ಕಾಂಗ್ರೆಸ್‌ ಹೈಕಮಾಂಡ್ ಇನ್ನಿಲ್ಲದಂತೆ ಮುಜುಗರಕ್ಕೆ ಒಳಗಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಹೇಳಿದರೂ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಚರ್ಚೆ ನಿಂತಿಲ್ಲ.

ಇಲ್ಲಿಯವರೆಗೆ ಕರ್ನಾಟಕ ಸಚಿವ ಮಂಡಲದ ಶೇ 90%ರಷ್ಟು ಸಚಿವರು ನಾನು ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿ ಎಂದು ಹೇಳಿದ್ದಾರೆ.

CM change Ramalinga Reddy says there is a message from the high command

ಇದೀಗ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಹ ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಮಾತನಾಡಿದ್ದಾರೆ. ಮುಂದಿನ ಮುಖ್ಯಮಂತ್ರಿ ವಿಷಯ ಜೋರಾಗಿ ಚರ್ಚೆಯಾಗುತ್ತಿರುವ ನಡುವೆ ಅವರು ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ. ರಾಜ್ಯದಲ್ಲಿ ಬಹುತೇಕ ಸಚಿವರು, ಹಿರಿಯರು ನಾನೇಕೆ ಮುಖ್ಯಮಂತ್ರಿಯಾಗಬಾರದು. ನಾನು ಸಹ ಮುಖ್ಯಮಂತ್ರಿ ಆಕಾಂಕ್ಷಿ. ಅವಕಾಶ ಸಿಕ್ಕರೆ ನಾನೂ ಸಹ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದಾರೆ. ಆದರೆ, ರಾಮಲಿಂಗಾರೆಡ್ಡಿ ಅವರು ಮಾತ್ರ ರಾಜ್ಯ ಕಾಂಗ್ರೆಸ್‌ ಸರ್ಕಾರವು ಶೇ 100ರಷ್ಟು ಸುಭದ್ರವಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಖಡಕ್‌ ಆಗಿ ಉತ್ತರ ನೀಡಿದ್ದಾರೆ.

ಹೇಳಿಕೆ ನೀಡದಂತೆ ಸೂಚಿಸಲಾಗಿದೆ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಂದಿನ ಅವಧಿಯ ವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ರಾಜ್ಯದ ಜನರಿಗೆ ಯಾವುದೇ ರೀತಿಯ ಗೊಂದಲ ಬೇಡ ಎಂದಿದ್ದಾರೆ. ಇನ್ನು ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಗಳನ್ನು ನೀಡಬಾರದು ಎಂದು ಈಗಾಗಲೇ ಸೂಚನೆ ಬಂದಿದೆ. ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ಯಾವುದೇ ಸಚಿವರು ಹಾಗೂ ಶಾಸಕರು ಹೇಳಿಕೆಗಳನ್ನು ಕೊಡಬಾರದು ಎಂದು ಸೂಚನೆ ನೀಡಲಾಗಿದೆ ಎಂದೂ ಅವರು ಹೇಳಿದ್ದಾರೆ. ಈ ಮೂಲಕ ಸಿ.ಎಂ ಬದಲಾವಣೆಯ ಬಗ್ಗೆ ಹೈಕಮಾಂಡ್‌ನಿಂದ ಸೂಚನೆ ಬಂದಿರುವುದಾಗಿಯೂ ಅದನ್ನು ಉಲ್ಲಂಘನೆ ಮಾಡಬಾರದು ಎನ್ನುವ ವಿಷಯವು ತಿಳಿದುಬಂದಿದೆ.

CM change Ramalinga Reddy says there is a message from the high command

ಸರಣಿ ಹೇಳಿಕೆ ಗೊಂದಲದ ಗೂಡು

ರಾಜ್ಯದಲ್ಲಿ ಸಿ.ಎಂ ಚೇಂಜ್‌ ಆಗಲಿದ್ದಾರೆಯೇ ಎಂದು ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ರಾಜ್ಯದ ಹಲವು ಸಚಿವರು ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದಾರೆ. ಕೆಲವೇ ಕೆಲವರಷ್ಟೇ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಂದುವರಿಯಲಿ ಎಂದಿದ್ದಾರೆ. ಹಲವರು ನಾನು ಸಹ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿದ್ದೇ ಹೆಚ್ಚು. ವಿರೋಧ ಪಕ್ಷಕ್ಕಿಂತ ಆಡಳಿತ ಪಕ್ಷದಲ್ಲೇ ಹೆಚ್ಚು ಚರ್ಚೆಯಾಗ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+