ಬಿಪ್ಯಾಕ್ ಸಲಹೆಗಳನ್ನು ಕಾಲಮಿತಿಯೊಳಗೆ ಜಾರಿಗೊಳಿಸಲು ಎಚ್ಡಿಕೆ ಸೂಚನೆ
ಬೆಂಗಳೂರು, ಜೂನ್ 16: ಬೆಂಗಳೂರನ್ನು ಸ್ವಚ್ಛವಾಗಿಡಬೇಕಾದಲ್ಲಿ, ಪ್ಲಾಸ್ಟಿಕ್ ಹಾಗೂ ತ್ಯಾಜ್ಯದಿಂದ ಮುಕ್ತಿ ಪಡೆಯುವುದು ಹೇಗೆ ಎನ್ನುವುದರ ಕುರಿತು ಬಿಪ್ಯಾಕ್ ನೀಡಿರುವ ಅಭಿಪ್ರಾಯವನ್ನು ಕಾಲಾವಧಿ ಒಳಗೆ ಪೂರ್ಣಗೊಳಿಸುವಂತೆ ಎಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಶನಿವಾರ ಬಿ ಪ್ಯಾಕ್ ಕಚೇರಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ಬಿ ಪ್ಯಾಕ್ ಅಧ್ಯಕ್ಷೆ ಕಿರಣ್ ಮಜುಂದಾರ್, ಉಪಾಧ್ಯಕ್ಷ ಮೋಹನ್ ದಾಸ್ ಪೈ, ಸಿಇಓ ರೇವತಿ ಅಶೋಕ್, ಆರ್ ಕೆ ಮಿಶ್ರಾ, ಆನಂದ ಗುಂಡೂರಾವ್ ಅವರಿಂದ ಬೆಂಗಳೂರು ಅಭಿವೃದ್ದಿ ಕುರಿತು ಮಾಹಿತಿ ಪಡೆದರು.
ಬೆಂಗಳೂರು ಅಭಿವೃದ್ದಿಗೆ ಸಂಬಂಧಿಸಿದಂತೆ ಈಗಾಗಲೇ ಚಾಲ್ತಿಯಲ್ಲಿರುವ ಯೋಜನೆಗಳು, ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್, ವೈಟ್ ಟಾಪಿಂಗ್, ಕಸ ವಿಲೇವಾರಿ ಮತ್ತು ಮೆಟ್ರೋ ಯೋಜನೆ ಕುರಿತಂತೆ ಮುಖ್ಯಮಂತ್ರಿಗಳಿಗೆ ಬಿ ಪ್ಯಾಕ್ ತಂಡ ತನ್ನ ನೋಟವನ್ನು ಹಂಚಿಕೊಂಡಿತು.

ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಬೇಕು. ಪೋಸ್ಟರ್ ಫ್ಲೆಕ್ಸ್ ರಹಿತವಾಗಿಸಬೇಕು, ಕಸ ವಿಲೇವಾರಿಗೆ ಆಧುನಿಕ ತಂತ್ರಜ್ಞಾನ ಬಳಸಬೇಕು ಎಂದು ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತಾ ಬಿ ಪ್ಯಾಕ್ ತಂಡ ತಿಳಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು. ಬೆಂಗಳೂರು ನಗರಾಭಿವೃದ್ದಿ ಸಚಿವರಾಗಿರುವ ಉಪ ಮುಖ್ಯಮಂತ್ರಿಗಳ ಜೊತೆ ಈ ಬಗ್ಗೆ ಚರ್ಚಿಸಿ ಬೆಂಗಳೂರು ಅಭಿವೃದ್ದಿಗೆ ಇರುವ ಹಲವು ಏಜೆನ್ಸಿಗಳ ಸಭೆ ಕರೆಯುವುದಾಗಿ ತಿಳಿಸಿದರು. ಅವಶ್ಯವಿರುವ ಎಲ್ಲಾ ಕಾರ್ಯ ಒಂದು ವರ್ಷದೊಳಗೆ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications