ಬಿಪ್ಯಾಕ್ ಸಲಹೆಗಳನ್ನು ಕಾಲಮಿತಿಯೊಳಗೆ ಜಾರಿಗೊಳಿಸಲು ಎಚ್ಡಿಕೆ ಸೂಚನೆ
ಬೆಂಗಳೂರು, ಜೂನ್ 16: ಬೆಂಗಳೂರನ್ನು ಸ್ವಚ್ಛವಾಗಿಡಬೇಕಾದಲ್ಲಿ, ಪ್ಲಾಸ್ಟಿಕ್ ಹಾಗೂ ತ್ಯಾಜ್ಯದಿಂದ ಮುಕ್ತಿ ಪಡೆಯುವುದು ಹೇಗೆ ಎನ್ನುವುದರ ಕುರಿತು ಬಿಪ್ಯಾಕ್ ನೀಡಿರುವ ಅಭಿಪ್ರಾಯವನ್ನು ಕಾಲಾವಧಿ ಒಳಗೆ ಪೂರ್ಣಗೊಳಿಸುವಂತೆ ಎಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಶನಿವಾರ ಬಿ ಪ್ಯಾಕ್ ಕಚೇರಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ಬಿ ಪ್ಯಾಕ್ ಅಧ್ಯಕ್ಷೆ ಕಿರಣ್ ಮಜುಂದಾರ್, ಉಪಾಧ್ಯಕ್ಷ ಮೋಹನ್ ದಾಸ್ ಪೈ, ಸಿಇಓ ರೇವತಿ ಅಶೋಕ್, ಆರ್ ಕೆ ಮಿಶ್ರಾ, ಆನಂದ ಗುಂಡೂರಾವ್ ಅವರಿಂದ ಬೆಂಗಳೂರು ಅಭಿವೃದ್ದಿ ಕುರಿತು ಮಾಹಿತಿ ಪಡೆದರು.
ದೊಡ್ಡಬಿದರಕಲ್ಲು ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಪರಮೇಶ್ವರ್ ಭೇಟಿ
ಬೆಂಗಳೂರು ಅಭಿವೃದ್ದಿಗೆ ಸಂಬಂಧಿಸಿದಂತೆ ಈಗಾಗಲೇ ಚಾಲ್ತಿಯಲ್ಲಿರುವ ಯೋಜನೆಗಳು, ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್, ವೈಟ್ ಟಾಪಿಂಗ್, ಕಸ ವಿಲೇವಾರಿ ಮತ್ತು ಮೆಟ್ರೋ ಯೋಜನೆ ಕುರಿತಂತೆ ಮುಖ್ಯಮಂತ್ರಿಗಳಿಗೆ ಬಿ ಪ್ಯಾಕ್ ತಂಡ ತನ್ನ ನೋಟವನ್ನು ಹಂಚಿಕೊಂಡಿತು.
ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಬೇಕು. ಪೋಸ್ಟರ್ ಫ್ಲೆಕ್ಸ್ ರಹಿತವಾಗಿಸಬೇಕು, ಕಸ ವಿಲೇವಾರಿಗೆ ಆಧುನಿಕ ತಂತ್ರಜ್ಞಾನ ಬಳಸಬೇಕು ಎಂದು ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತಾ ಬಿ ಪ್ಯಾಕ್ ತಂಡ ತಿಳಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು. ಬೆಂಗಳೂರು ನಗರಾಭಿವೃದ್ದಿ ಸಚಿವರಾಗಿರುವ ಉಪ ಮುಖ್ಯಮಂತ್ರಿಗಳ ಜೊತೆ ಈ ಬಗ್ಗೆ ಚರ್ಚಿಸಿ ಬೆಂಗಳೂರು ಅಭಿವೃದ್ದಿಗೆ ಇರುವ ಹಲವು ಏಜೆನ್ಸಿಗಳ ಸಭೆ ಕರೆಯುವುದಾಗಿ ತಿಳಿಸಿದರು. ಅವಶ್ಯವಿರುವ ಎಲ್ಲಾ ಕಾರ್ಯ ಒಂದು ವರ್ಷದೊಳಗೆ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.