ತೆಂಗು ಬೆಳೆ-ನಾರಿನ ಉದ್ಯಮ ಪುನಶ್ಚೇತನಕ್ಕೆ ಕ್ರಿಯಾ ಯೋಜನೆ
ಬೆಂಗಳೂರು, ಆಗಸ್ಟ್ 3: ರಾಜ್ಯದ ತೆಂಗಿನ ನಾರಿನ ಉದ್ಯಮದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವರವಾದ ಪ್ರಸ್ತಾವನೆ ಸಲ್ಲಿಸುವಂತೆ ಎಚ್.ಡಿ. ಕುಮಾರಸ್ವಾಮಿ ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ತೆಂಗಿನ ನಾರಿನ ಮಹಾಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದ ಸುಮಾರು 10 ಜಿಲ್ಲೆಗಳಲ್ಲಿ ತೆಂಗು ಬೆಳೆ ವ್ಯಾಪಕವಾಗಿದ್ದು, ತೆಂಗಿನ ನಾರು ಸ್ಥಳೀಯವಾಗಿ ಲಭ್ಯವಿರುವುದರಿಂದ ತೆಂಗಿನ ನಾರಿನ ಉತ್ಪನ್ನಗಳ ಉದ್ಯಮಗಳಿಗೆ ವಿಫುಲ ಅವಕಾಶವಿದೆ. ಇದು ಪರಿಸರ ಸ್ನೇಹಿ ಉತ್ಪನ್ನಗಳಾಗಿವೆ ಅಲ್ಲದೆ, ರೈತರಿಗೆ ತೆಂಗಿನ ನಾರಿಗೆ ಆದಾಯವೂ ದೊರೆಯುತ್ತದೆ.
ಜೊತೆಗೆ ಗ್ರಾಮೀಣಪ್ರದೇಶದಲ್ಲಿ ವಿಶೇಷವಾಗಿ ಮಹಿಳೆಯರಿಗೆ ಹೇರಳ ಉದ್ಯೋಗಾವಕಾಶವೂ ಇರುವುದರಿಂದ ಈ ಉದ್ಯಮಕ್ಕೆ ಉತ್ತೇಜನ ನೀಡುವುದು ಸೂಕ್ತವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.

ಪ್ರಸ್ತಾವನೆ ಸಲ್ಲಿಸುವಾಗ ಸೃಷ್ಟಿಯಾಗುವ ಉದ್ಯೋಗಾವಕಾಶ, ತರಬೇತಿಯ ಅಗತ್ಯತೆ, ಮಾರುಕಟ್ಟೆ ಅವಕಾಶಗಳು, ಇತರ ರಾಜ್ಯಗಳಲ್ಲಿ ಈ ಉದ್ದಿಮೆಯ ಕಾರ್ಯನಿರ್ವಹಣೆ ಇವೆಲ್ಲವುಗಳನ್ನೂ ಪರಿಶೀಲಿಸಿ ತೆಂಗಿನ ನಾರಿನ ಉತ್ಪನ್ನಗಳ ಉದ್ಯಮ ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಅಗತ್ಯ ಸೌಲಭ್ಯ ಮೊದಲಾದ ಎಲ್ಲ ವಿಷಯಗಳ ಕುರಿತು ಸಮಗ್ರವಾಗಿ ಅಧ್ಯಯನ ನಡೆಸಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಇದಲ್ಲದೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಈ ಉದ್ಯಮಕ್ಕೆ ನೆರವು ಪಡೆಯಲು ಇರುವ ಅವಕಾಶಗಳನ್ನು ಸಹ ಪರಿಶೀಲಿಸುವಂತೆ ತಿಳಿಸಿದರು.ಸದ್ಯ ಈ ಎರಡು ಸಂಸ್ಥೆಗಳು ತೆಂಗಿನ ನಾರು, ಹುರಿ, ಮ್ಯಾಟ್, ಮ್ಯಾಟಿಂಗ್, ರಬ್ಬರೈಸ್ಡ್ ಕಾಯರ್ ಹಾಸಿಗೆ, ದಿಂಬು, ಕಾಯರ್ಕಾಂಪೊಸಿಟ್ ಬೋರ್ಡ್ಗಳಿಂದ ಶಾಲಾ ಡೆಸ್ಕ್, ಟೇಬಲ್ ಇದ್ಯಾದಿಗಳ ಉತ್ಪಾದನೆ ನಡೆಯುತ್ತಿದೆ.
ಜೊತೆಗೆ ಕಾಯರ್ ಭೂವಸ್ತ್ರವನ್ನು ರಸ್ತೆ ನಿರ್ಮಾಣ, ರಸ್ತೆಗಳ ಎಂಬ್ಯಾಂಕ್ಮೆಂಟ್, ನದಿ/ಕೆರೆಗಳ ದಂಡೆ ರಕ್ಷಣೆ, ಕೃಷಿ ಹೊಂಡಗಳಲ್ಲಿ ಲೋಕೋಪಯೋಗಿ, ನೀರಾವರಿ, ಅರಣ್ಯ ಕೃಷಿ, ತೋಟಗಾರಿಕೆ ಇಲಾಖೆಗಳ ವಿವಿಧ ಯೋಜನೆಗಳಲ್ಲಿ ಬಳಸಬಹುದಾಗಿರುತ್ತದೆ. ಇವುಗಳ ಗುಣಮಟ್ಟದ ಕುರಿತು ಪ್ರಮಾಣೀಕರಣವನ್ನೂ ಪಡೆಯಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ಈ ಹಿನ್ನೆಲೆಯಲ್ಲಿ ವಿವರವಾದ ಪ್ರಸ್ತಾವನೆ ಹಾಗೂ ತೆಂಗಿನ ನಾರಿನ ಉತ್ಪನ್ನಗಳನ್ನು ಬಳಸಬಹುದಾದ ವಿವಿಧ ಇಲಾಖೆಗಳೊಂದಿಗೆ ಚರ್ಚಿಸಲು ಮತ್ತೊಂದು ಸಭೆ ಶೀಘ್ರವೇ ಕರೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಸಣ್ಣ ಕೈಗಾರಿಕಾ ಸಚಿವ ಶ್ರೀನಿವಾಸ್, ಶಾಸಕ ಸಿ.ಎನ್. ಬಾಲಕೃಷ್ಣ, ಮಧ್ಯಮ, ಸಣ್ಣ ಹಾಗೂ ಅತಿಸಣ್ಣ ಕೈಗಾರಿಕೆಗಳ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕ್ರೂಪ್ ಕೌರ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ನಿರ್ದೇಶಕರಾದ ಡಾ. ಬಿ.ಆರ್. ಮಮತಾ ಮೊದಲಾದವರು ಹಾಜರಿದ್ದರು.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಸರ್ಪೇಸಿ ಕಾಯ್ದೆ ಸಂಕಷ್ಟ: ಕಾಫಿ ಬೆಳೆಗಾರರ ಪರ ಕುಮಾರಸ್ವಾಮಿ ಮನವಿ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications