ಬಡವರ ಬಂಧು ಯೋಜನೆ: ಬೀದಿಬದಿ ವರ್ತಕರೊಂದಿಗೆ ಸಿಎಂ ವಿಡಿಯೋ ಸಂಭಾಷಣೆ
ಬೆಂಗಳೂರು, ಸೆಪ್ಟೆಂಬರ್ 4: ಮಧ್ಯವರ್ತಿಗಳು ಹಾಗೂ ಮೀಟರ್ ಬಡ್ಡಿ ದಂಧೆಯನ್ನು ತಪ್ಪಿಸಲು ಸರ್ಕಾರವು ಬಡವರ ಬಂಧು ಎನ್ನುವ ಯೋಜನೆಯನ್ನು ಜಾರಿಗೊಳಿಸುತ್ತಿದೆ ಇದರ ಕುರಿತು ಬೀದಿಬದಿ ವ್ಯಾಪಾರಿಗಳೊಂದಿಗೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ವಿಡಿಯೋ ಸಂಭಾಷಣೆ ನಡೆಸಿದರು.
ಈ ಯೋಜನೆ ಜಾರಿ ಕುರಿತು ಬೀದಿಬದಿ ವ್ಯಾಪಾರಿಗಳ ಜತೆ ಸಭೆ ನಡೆಸಲು ಸಚಿವ ಬಂಡೆಪ್ಪ ಕಾಂಶೆಂಪೂರ್ ಅವರು ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ತೆರಳಿದ್ದರು, ಅಲ್ಲಿನ ವರ್ತಕರ ಜತೆಗೆ ಮಾತುಕತೆ ನಡೆಸಿದರು.
ಅದೇ ಸಮಯದಲ್ಲಿ ಸಿಎಂ ಕೂಡ ವಿಡಿಯೋ ಕಾಂನ್ಫೆರೆನ್ಸ್ ಮೂಲಕ ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿ ಅವರ ಕಷ್ಟಗಳಿಗೆ ಸ್ಪಂದಿಸಿದರು. ಮೀಟರ್ ಬಡ್ಡಿ ದಂಧೆ ಹಾಗೂ ಮಧ್ಯವರ್ತಿಗಳ ಹಾವಳಿಯಿಂದಾಗಿ ತಾವು ಅನುಭವಿಸುತ್ತಿರುವ ಕಷ್ಟಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.

ಮೀಟರ್ ಬಡ್ಡಿ ದಂಧೆ ತಪ್ಪಿಸಲು ಮೊಬೈಲ್ ಅಪ್ಲಿಕೇಷನ್ ಮೂಲಕ ಧನ ಸಹಾಯ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ, ಜತೆಗೆ ಸರ್ಕಾರವು ದಿನದ ಬಡ್ಡಿ ರಹಿತ ಸಾಲವನ್ನು ನೀಡಲು ಮುಂದಾಗಿದೆ. ಇದರ ಉಪಯೋಗವನ್ನು ವ್ಯಾಪಾರಿಗಳು ಪಡೆದುಕೊಳ್ಳಬೇಕು ಎಂದರು.
ಕೆಲವೇ ದಿನಗಳಲ್ಲಿ 'ಬಡವರ ಬಂಧು ಯೋಜನೆ'ಗೆ ಚಾಲನೆ ನೀಡಲಿದ್ದೇವೆ. ಈ ಯೋಜನೆಯನ್ನು ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೆ ತರಲಿದ್ದೇವೆ. ಈ ಯೋಜನೆ ಕಾರ್ಯರೂಪಕ್ಕೆ ತರಲು ಬ್ಯಾಂಕ್ ಗಳ ಜೊತೆ ಚರ್ಚೆ ನಡೆಸಲಾಗುತ್ತದೆ. ಮುಂದಿನ ದಿನಗಳಲ್ಲಿ ವ್ಯಾಪಾರಿಗಳಿಗೆ ಬಡ್ಡಿ ರಹಿತ ಸಾಲ ಕೊಡುತ್ತೇವೆ.
-
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಸರ್ಪೇಸಿ ಕಾಯ್ದೆ ಸಂಕಷ್ಟ: ಕಾಫಿ ಬೆಳೆಗಾರರ ಪರ ಕುಮಾರಸ್ವಾಮಿ ಮನವಿ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು












Click it and Unblock the Notifications