ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಕೋಮು ವಿಚಾರಗಳಿಗೆ ಪ್ರಚೋದನೆ: ಡಿಕೆ ಶಿವಕುಮಾರ್
ಬೆಂಗಳೂರು, ಮೇ 09: ಉದ್ದೇಶಪೂರ್ವಕವಾಗಿ ಅಜಾನ್ ವಿಚಾರವನ್ನು ಕೆದಕಿ, ಸಮುದಾಯಗಳ ನಡುವೆ ಜಗಳ ಹಚ್ಚುವ ಕೆಲಸ ರಾಜ್ಯದಲ್ಲಿ ನಡೆಯುತ್ತಿದೆ. ಇದರಿಂದ ಸರ್ಕಾರದ ವೈಫಲ್ಯವು ಎದ್ದು ಕಾಣುತ್ತಿದೆ. ಇದನ್ನು ನಿಯಂತ್ರಿಸದಿದ್ದರೆ ರಾಜ್ಯದಲ್ಲಿ ಅಶಾಂತಿ, ಕೋಮು ಸಂಘರ್ಷ ಹೆಚ್ಚಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಜಾನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಮಾನಿಸಿದೆ. ಈಗಾಗಲೇ ಪೊಲೀಸರು ಕೂಡ ನೊಟೀಸ್ ಜಾರಿ ಮಾಡಿದ್ದಾರೆ. ಈ ವಿಚಾರ ಕುರಿತು ನಮ್ಮ ಕಾಂಗ್ರೆಸ್ ಪಕ್ಷದ ನಾಯಕರ ತಂಡ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿಗಳ ಜವಾಬ್ದಾರಿಯಾಗಿದೆ ಎಂದರು.
ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಸೂಚಿಸಿದ ಶಿವಕುಮಾರ್, ಬೆಂಗಳೂರಿನಲ್ಲಿ ಮತ್ತೊಂದು ಕೋಮುಗಲಭೆಗೆ ಸಿದ್ಧತೆ ನಡೆದಿತ್ತು. ಈ ವಿಚಾರದಲ್ಲಿ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾಂಗ್ರೆಸ್ ಅಜೆಂಡಾ ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ಎಂಬ ಹೇಳಿಕೆ ಬಗ್ಗೆ ಉತ್ತರಿಸಿದ ಅವರು, "ದಿನ ಬೆಳಗಾದರೆ ಸರ್ಕಾರದ ಅಕ್ರಮ, ಭ್ರಷ್ಟಾಚಾರಗಳು ಬೆಳಕಿಗೆ ಬರುತ್ತಿವೆ. ನಿನ್ನೆ ಪತ್ರಿಕೆಯಲ್ಲಿ ಯಾವ ಸರ್ಕಾರಿ ಹುದ್ದೆಗೆ ಎಷ್ಟೆಷ್ಟು ದರ ನಿಗದಿಯಾಗಿದೆ ಎಂದು ವರದಿಯಾಗಿದೆ. ಇಷ್ಟೊಂದು ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಲು ಆಗುತ್ತಿಲ್ಲ. ಜನ ಹಾದಿ-ಬೀದಿಯಲ್ಲಿ ಉಗಿಯುತ್ತಿದ್ದು, ಮೊದಲು ಅವರು ತಮ್ಮ ಮುಖವನ್ನು ತೊಳೆದುಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ," ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನಡುವೆ ಹೊಂದಾಣಿಕೆ ಇಲ್ಲ ಎಂಬ ಕಟೀಲ್ ಅವರ ಮಾತಿನ ಬಗ್ಗೆ ಕೇಳಿದ ಪ್ರಶ್ನೆಗೆ, "'ಅವರ ಪಕ್ಷದಲ್ಲಿ ಆಂತರಿಕ ಕಚ್ಛಾಟ, ಮಂತ್ರಿ ಬದಲಾವಣೆ, ನಾಯಕತ್ವ ಬದಲಾವಣೆ ಸೇರಿದಂತೆ ಅನೇಕ ಹುಳುಕುಗಳಿವೆ. ಅವರು ಮೊದಲು ತಮ್ಮ ಮನೆಯ ಸಮಸ್ಯೆಗಳನ್ನು ನೋಡಿಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ," ಎಂದು ತಿರುಗೇಟು ನೀಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications