ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಮಗಳ ಗರ್ಭಪಾತ ಮಾಡಿಸಿದರಾ?
ಬೆಂಗಳೂರು, ಡಿಸೆಂಬರ್ 3: ಕಾಂಗ್ರೆಸ್ ಮುಖಂಡ ಯೋಜನಾ ಆಯೋಗದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರ ವಿರುದ್ಧ ತಮ್ಮ ಪುತ್ರಿ ಇಫಾ ಅವರಿಗೆ ಗರ್ಭಪಾತ ಮಾಡಿಸಿರುವ ಆರೋಪ ಕೇಳಿ ಬಂದಿರುವುದು ಮಾಧ್ಯಮದಲ್ಲಿ ವರದಿಯಾಗಿದೆ.
ಸಿ.ಎಂ. ಇಬ್ರಾಹಿಂ ಅವರು ಪುತ್ರಿ ನಾಲ್ಕುವರೆ ತಿಂಗಳ ಗರ್ಭಿಣಿಗೆ ಇಫಾಗೆ ಕುಡಿಯುವ ಜ್ಯೂಸ್ ನಲ್ಲಿ ಗರ್ಭಪಾತದ ಮಾತ್ರೆ ಬೆರೆಸಿ ಕೊಟ್ಟಿರುವುದಾಗಿ ಸ್ವತಃ ಆಕೆಯೇ ಆರೋಪಿಸಿದ್ದು ವರದಿಯಲ್ಲಿ ಕೇಳಿಬಂದಿದೆ.[ಸಿಎಂ ಇಬ್ರಾಹಿಂನ ಕಾಂಗ್ರೆಸ್ ನಿಂದ ಉಚ್ಚಾಟಿಸಿ: ಪೂಜಾರಿ]

ಏಳು ತಿಂಗಳ ಹಿಂದೆ ಇಬ್ರಾಹಿಂ ವಿರೋಧವಿದ್ದರೂ ಪುತ್ರಿ ಇಫಾ ಅವರು ಇಬ್ರಾಹಿ ಸಹೋದರ ಪುತ್ರನ ಜೊತೆ ಪ್ರೇಮ ವಿವಾಹವಾಗಿದ್ದರು. ನಾಲ್ಕುವರೆ ತಿಂಗಳ ನಂತರ ಗರ್ಭಿಣಿಯಾದ ಇಫಾ ಮನೆಗೆ ಬಂದಾಗ ಕಾಂಗ್ರೆಸ್ ಮುಖಂಡ ಮಗಳಿಗೆ ಜ್ಯೂಸಿನಲ್ಲಿ ಗರ್ಭಪಾತದ ಮಾತ್ರೆ ಬೆರಸಿಕೊಟ್ಟಿರುವುದಾಗಿ ಸ್ವತಃ ಮಗಳೇ ತಿಳಿಸಿರುವುದು ಇಬ್ರಾಹಿಂಗೆ ಉರುಳಾಗಿ ಪರಿಣಮಿಸಿದೆ.

ಸೋಮವಾರ ಮುಂಜಾನೆ ಇಫಾ ತಾಯಿ ಇಪಾಗೆ ಹಣ್ಣಿನ ರಸ ಕುಡಿಸಿದ್ದರು. ಜ್ಯೂಸ್ ಕುಡಿದ ನಂತರ ಇಫಾಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ನಂತರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಾಗ ವೈದ್ಯರು ಗರ್ಭಪಾತ ಮಾಡಿರುವುದು ತಿಳಿದುಬಂದಿದೆ. ಹೀಗಾಗಿ ಇಫಾ ತವರು ಮನೆಯಲ್ಲಿಯೇ ಹಣ್ಣಿನ ರಸ ಕುಡಿಸಿ ಗರ್ಭಪಾತ ಮಾಡಿಸಿರುವುದಾಗಿ ಆರೋಪ ಮಾಡಿದ್ದಾರೆ. ಅಲ್ಲದೆ ಅಪ್ಪನಿಗೆ ತನ್ನ ಪ್ರೇಮವಿವಾಹದ ಬಗ್ಗೆ ಮೊದಲಿನಿಂದಲೂ ವಿರೋಧವಿದ್ದು ಈಗ ಅವರೇ ಮಾಡಿಸಿದ್ದಾರೆ ಎಂದು ಇಫಾ ಮಾಧ್ಯಮದ ಮುಂದೆ ಆರೋಪಿಸಿದ್ದಾರೆ.
ಇನ್ನು ಈ ಸಂಬಂಧ ಇಬ್ರಾಹಿಂ ಅವರು ಯಾವುದೇ ಉತ್ತರ ನೀಡಿಲ್ಲ ಎನ್ನಲಾಗಿದೆ. ಅದರೆ ಮಗಳ ಆರೋಪದ ಬಿಸಿ ತುಪ್ಪ ನುಂಗಲೂ ಆಗಿದೆ ಉಗಿಯಲೂ ಆಗದ ಸ್ಥಿತಿ ಅವರದಾಗಿದೆ.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?












Click it and Unblock the Notifications