CM Ibrahim: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾ ವಿರುದ್ಧ ಕಾನೂನು ಹೋರಾಟ: ಸಿಎಂ ಇಬ್ರಾಹಿಂ ಪ್ರತಿಕ್ರಿಯೆ
ಬೆಂಗಳೂರು, ಅಕ್ಟೋಬರ್ 19: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಕೆಳಗಿಳಿಸಿ ಆ ಸ್ಥಾನಕ್ಕೆ ಎಚ್ಡಿ ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಮೈತ್ರಿ ಕುರಿತು ಮಾತನಾಡಲು ಕರೆಯಿಸಿ ಈ ರೀತಿ ರಾಜ್ಯಾಧ್ಯಕ್ಷರ ಘೋಷಣೆ ಮಾಡುವುದು ಸರಿಯಲ್ಲ. ಈ ವಿಚಾರವನ್ನು ರಾಜ್ಯ ಚುನಾವಣೆ ಆಯೋಗ ಮತ್ತು ನ್ಯಾಯಾಲಯದ ಗಮನಕ್ಕೆ ತರುತ್ತೇನೆ, ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇನೆ ಎಂದು ಸಿಎಂ ಇಬ್ರಾಹಿಂ ಗುಡುಗಿದರು.
ಜೆಡಿಎಸ್ಗೆ ನೂತನ ರಾಜ್ಯಾಧ್ಯಕ್ಷ ಘೋಷಣೆ ಕಾರ್ಯಕ್ರಮದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ ಇಬ್ರಾಹಿಂ ಅವರು, ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡರ ವಿರುದ್ಧ ಅಸಮಾಧಾನ ಹೊರ ಹಾಕಿದರು.

ದೇವೇಗೌಡರನ್ನು ನಾನು ತಂದೆಯ ಸಮಾನ ಎಂದು ಭಾವಿಸಿದ್ದೆ. ಅವರಿಗಾಗಿ ನಾಲ್ಕು ವರ್ಷ ವಿಧಾನಪರಿಷತ್ ಸದಸ್ಯ ಅವಧಿ ಮುಗಿಯುವ ಮೊದಲೇ ಬಿಟ್ಟು ಬಂದೆ. ಈ ಮಗನಿಗೆ ಎಂತಹ ಪ್ರೀತಿ ತೋರಿಸಿದ್ದೀರಿ ನೀವು. ಎಷ್ಟು ಜನರ ಮನೆ ಹಾಳು ಮಾಡಬೇಕು ಎಂದುಕೊಂಡಿದ್ದೀರಿ ಎಂದು ಅವರು ಕಿಡಿ ಕಾರಿದರು.
ನಾನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದೇ ಈ ಒಮ್ಮೆಲೆ ನನ್ನನ್ನು ಕೆಳಗೆ ಇಳಿಸಲು ಆಗಲ್ಲ. ಇದರ ವಿರುದ್ಧ ಹೋರಾಟ ಮಾಡುತ್ತೇವೆ. ರಾಜ್ಯಾಧ್ಯಕ್ಷಕ್ಕೆ ಕೋರ್ಟ್ ಮೂಲಕ ತಡೆ (ಸ್ಟೇ) ತರುತ್ತೇನೆ ಎಂದು ಅವರು ತಿಳಿಸಿದರು.
ಸಭೆ ಕರೆದು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು
ಎಚ್ಡಿ ದೇವೇಗೌಡರೇ ಬುಧವಾರ ತಿಪ್ಪೇಸ್ವಾಮಿ ಅವರಿಂದ ಕರೆ ಮಾಡಿಸಿದರು. ಮೈತ್ರಿ ಕುರಿತು ಮಾತನಾಡೋಣ ಎಂದು ಕರೆಯಿಸಿ. ಇದೀಗ ನೂತನ ರಾಜ್ಯಾಧ್ಯಕ್ಷರನ್ನು ಘೋಷಣೆ ಮಾಡಿದ್ದಾರೆ, ಇದು ಸರಿಯಲ್ಲ. ಅಧಿಕಾರ ಇದ್ದ ದೇವೇಗೌಡರು ಸಭೆ ಕರೆದ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದು ಅವರು ಅಭಿಪ್ರಾಯಪಟ್ಟರು.

ಪುತ್ರ ವ್ಯಾಮೋಹ: ಇದು ಕುಟುಂಬದ ಪಕ್ಷ
ದೇವೇಗೌಡರೇ ನಿಮ್ಮ ಪುತ್ರ ಎಚ್ಡಿ ಕುಮಾರಸ್ವಾಮಿ ಅವರ ಸಲುವಾಗಿ ಬೇರೆಯವರ ಮಕ್ಕಳನ್ನು ಬಲಿ ಕೊಡುತ್ತಿದ್ದೀರಿ. ಹಾಗಾದರೆ ನಿಮಗೆ ಪುತ್ರ ವ್ಯಾಮೋಹ ಇದೆ ಎಂದಾಯಿತು. ನನಗೆ ಈ ನಿರ್ಣಯ ಖುಷಿ ಕೊಟ್ಟಿದೆ. ದೇವರು ಮತ್ತು ಮತದಾರರು ನನ್ನ ಜೊತೆಗಿದ್ದಾರೆ. ನೀವು ಏಕಾಎಕಿ ಇಂತಹ ನಿರ್ಣಯ ಕೈಗೊಂಡಿರುವುದು ತಪ್ಪು. ಇದು ನೂರಕ್ಕೆ ನೂರರಷ್ಟು ಜೆಡಿಎಸ್ ಕುಟುಂಬದ ಪಕ್ಷ ಎಂಬುದು ಸಾಬೀತಾಯಿತು ಎಂದು ಪಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಜನತಾದಳ ನಮ್ಮದೇ. ಕಾಂಗ್ರೆಸ್ ಸೇರ್ಪಡೆಗೆ ಇನ್ನೂ ಡೈವರ್ಸ್ ಆಗಿಲ್ಲ. ನಾನು ಎಲ್ಲಿಗೆ ಹೋದರೂ ಹೋಲ್ ಸೆಲ್ ಆಗೇ ಹೋಗುತ್ತೇನೆ. ಈ ಮೂಲಕ ಸಂದರ್ಭ ಬಂದರೆ ಇತರ ಸದಸ್ಯರನ್ನು ಜೊತೆಗೆ ಕರೆದುಕೊಂಡು ಪಕ್ಷ ಬಿಡುವ ಮುನ್ಸೂಚನೆ ನೀಡಿದರು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್












Click it and Unblock the Notifications