ಶಿಮ್ಲಾ ಆಸ್ಪತ್ರೆಯಲ್ಲಿರುವ ಮೈಸೂರು ಮಹಿಳೆಯ ನೆರವಿಗೆ ನಿಂತ ಎಚ್ಡಿಕೆ
ಬೆಂಗಳೂರು, ಜುಲೈ 24: ಹಿಮಾಚಲ ಪ್ರದೇಶದ ಶಿಮ್ಲಾ ಆಸ್ಪತ್ರೆಯಲ್ಲಿರುವ ಮೈಸೂರಿನ ಪದ್ಮಾ ಎಂಬ ಮಹಿಳೆಯೊಬ್ಬರನ್ನು ವಾಪಸ್ ಮೈಸೂರಿಗೆ ಕರೆತರುವ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮೈಸೂರು ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ.
ಶಿಮ್ಲಾದಲ್ಲಿರುವ ಹಿಮಾಚಲ ಹಾಸ್ಪಿಟಲ್ ಆಫ್ ಮೆಂಟಲ್ ಹೆಲ್ತ್ ಅಂಡ್ ರಿಹೆಬಿಲಿಟೇಶನ್ ನಲ್ಲಿ ಕಳೆದ ಎರಡು ವರ್ಷದಿಂದ ತಂಗಿರುವ ಮಹಿಳೆಯೊಬ್ಬರಿಗೆ ಭಾಷೆಯ ಕಾರಣದಿಂದ ಬೇರೆಯವರೊಂದಿಗೆ ಸಂವಹನ ನಡೆಸಲು ಸಾಧ್ಯವಾಗುತ್ತಿಲ್ಲ. ಆಕೆಗೆ ಕನ್ನಡವಲ್ಲದೆ ಬೇರೆ ಭಾಷೆ ಮಾತನಾಡಲು ಸಾಧ್ಯವಾಗದ ಕಾರಣ ಎರಡು ವರ್ಷಗಳಿಂದ ಇಲ್ಲಿಯೇ ಇದ್ದಾರೆ.
ಕರ್ನಾಟಕ ಸರ್ಕಾರದ ನೆರವು ಬೇಡುತ್ತಿರುವ ಶಿಮ್ಲಾದಲ್ಲಿರುವ ಮೈಸೂರು ಮಹಿಳೆ
CM HD Kumaraswamy has directed the DC, Mysuru, to bring back a woman from Mysuru district, who was found in a Mental Health & Rehabilitation hospital in Shimla.
— CM of Karnataka (@CMofKarnataka) July 23, 2018
The mentally ill,destitute woman had unknowingly reached HimachalPradesh and was undergoing treatment there since 2yrs
ಮಾಧ್ಯಮಗಳಲ್ಲಿ ಈ ಸುದ್ದಿಯನ್ನು ನೋಡಿದ ಎಚ್ಡಿಕೆ, ಮಹಿಳೆಯನ್ನು ವಾಪಸ್ ಕರೆತರುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರಲ್ಲದೆ, ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರಿಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಹಿಮಾಚಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈಕೆ ಈಗ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮೂಲತಃ ಮೈಸೂರಿನವರಾದ ಪದ್ಮಾ, ಕಳೆದ ಎರಡು ವರ್ಷಗಳಿಂದ ಹಿಮಾಚಲ ಪ್ರದೇಶದಲ್ಲಿದ್ದಾರೆ. ಅವರು ಅಲ್ಲಿಗೆ ಹೋಗಿದ್ದು ಹೇಗೆ ಇತ್ಯಾದಿ ಮಾಹಿತಿಗಳು ಲಭ್ಯವಿಲ್ಲ. ಅವರಿಗೆ ಕನ್ನಡ ಬಿಟ್ಟು ಬೇರೆ ಭಾಷೆ ಬಾರದ ಕಾರಣ ಅವರಿಗೆ ಸಂವಹನ ನಡೆಸುವುದಕ್ಕೆ ಸಾಧ್ಯವಾಗುತ್ತಿಲ್ಲ.