ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಸರ ಪ್ರೇಮಿಗಳ ಮನವಿಗೆ ಸಿಎಂ ಸ್ಪಂದನೆ, ಬದುಕಿದ 800 ಮರಗಳು

|
Google Oneindia Kannada News

ಬೆಂಗಳೂರು, ಜೂನ್ 07: ಕೊಡಗಿನ ಕೆ.ನಿಡುಗಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 800 ಮರಗಳನ್ನು ಕಡಿಯಲು ನೀಡಿದ್ದ ಅರಣ್ಯ ಇಲಾಖೆ ನೀಡಿದ್ದ ಅನುಮತಿಯನ್ನು ನಿರಾಕರಿಸಲು ಸಿಎಂ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರೆಸಾರ್ಟ್‌ ಒಂದರ ನಿರ್ಮಾಣಕ್ಕಾಗಿ 800 ಮರಗಳನ್ನು ಕಡಿದು ಹಾಕಲು ಅರಣ್ಯ ಇಲಾಖೆಯೇ ಅನುಮತಿ ನೀಡಿದೆ ಎನ್ನಲಾಗಿತ್ತು. ಇದಕ್ಕೆ ಪರಿಸರ ಪ್ರೇಮಿಗಳು ರಾಜ್ಯದಾದ್ಯಂತ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಈಗ ಇದಕ್ಕೆ ಕುಮಾರಸ್ವಾಮಿ ಬ್ರೇಕ್ ಹಾಕಿದ್ದಾರೆ.

ಕೊಡಗು : ಭೂ ಕುಸಿತದ ಭೀತಿ, ಹೋಂ ಸ್ಟೇ ಬುಕ್ಕಿಂಗ್ ಸ್ಥಗಿತಕೊಡಗು : ಭೂ ಕುಸಿತದ ಭೀತಿ, ಹೋಂ ಸ್ಟೇ ಬುಕ್ಕಿಂಗ್ ಸ್ಥಗಿತ

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ, ಕೊಡಗಿನಲ್ಲಿ 800 ಮರಗಳನ್ನು ಕಡಿಯುವ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರವಾದ ವರದಿ ಹಿನ್ನೆಲೆಯಲ್ಲಿ ಈಗಲೇ ಮರಗಳನ್ನು ಕಡಿಯುವುದನ್ನು ನಿಲ್ಲಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

CM Kumaraswamy instructed to not cut 800 trees in Kodagu

ಅಲ್ಲದೆ ಮರಗಳನ್ನು ಕಡಿಯಲು ಕಾರಣ ಇನ್ನಿತರೆ ವಿಷಯಗಳ ಬಗ್ಗೆ ಶೀಘ್ರವೇ ಮುಖ್ಯಮಂತ್ರಿ ಕಚೇರಿಗೆ ವರದಿ ನೀಡುವಂತೆಯೂ ಅವರು ಸೂಚನೆ ನೀಡಿದ್ದಾರೆ.

ಕೊಡಗಿನಲ್ಲಿ ಆತಂಕದ ನಡುವೆಯೇ ಗದ್ದೆಗಿಳಿದ್ದಾರೆ ರೈತರುಕೊಡಗಿನಲ್ಲಿ ಆತಂಕದ ನಡುವೆಯೇ ಗದ್ದೆಗಿಳಿದ್ದಾರೆ ರೈತರು

ಕೆಲವು ತಿಂಗಳ ಹಿಂದಷ್ಟೆ ಕೊಡಗು ಪ್ರಕೃತಿ ವಿನಾಶಕ್ಕೆ ಗುರಿಯಾಗಿತ್ತು, ಇದಕ್ಕೆ ಅಲ್ಲಾಗುತ್ತಿರುವ ಅರಣ್ಯ ನಾಶವೇ ಕಾರಣ ಎಂದು ಪರಿಸರ ತಜ್ಞರು ಎಚ್ಚರಿಸಿದ್ದರು. ಹೀಗಿದ್ದಾಗಿಯೂ ಮರಗಳನ್ನು ಕಡಿಯಲು ಮುಂದಾಗಿದ್ದು ಭಾರಿ ಆಕ್ರೋಶ ಹುಟ್ಟುಹಾಕಿತ್ತು.

ಮುಂಗಾರಿನ ಆತಂಕ: ಜನಕ್ಕೆ ಧೈರ್ಯ ತುಂಬಿದ ಕೊಡಗು ಜಿಲ್ಲಾಡಳಿತಮುಂಗಾರಿನ ಆತಂಕ: ಜನಕ್ಕೆ ಧೈರ್ಯ ತುಂಬಿದ ಕೊಡಗು ಜಿಲ್ಲಾಡಳಿತ

ಆದರೆ ಕೂಡಲೇ ಎಚ್ಚೆತ್ತುಕೊಂಡಿರುವ ಕುಮಾರಸ್ವಾಮಿ ಅವರು ಮರಗಳನ್ನು ಕಡಿಯುವುದನ್ನು ನಿಲ್ಲಿಸುವಂತೆ ಹೇಳಿದ್ದಾರೆ.

English summary
CM Kumaraswamy instructed to officers to do not cut 800 trees in Kodagu. He orderd to give full report on the issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X