ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಲುಗಾಡಲು ಆರಂಭವಾದ ಸರ್ಕಾರ, ಎಚ್‌ಡಿಕೆ-ಕೆ.ಸಿ.ವೇಣುಗೋಪಾಲ್ ಭೇಟಿ

|
Google Oneindia Kannada News

ಬೆಂಗಳೂರು, ಜನವರಿ 15: ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು, ಮೈತ್ರಿ ಸರ್ಕಾರಕ್ಕೆ ಅಲುಗಾಡುವ ಅನುಭವ ಆರಂಭವಾಗಿದೆ.

ಶಾಸಕರಾದ ಆರ್.ಶಂಕರ್ ಮತ್ತು ಎಚ್.ನಾಗೇಶ್ ಅವರುಗಳು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಬೆನ್ನಲ್ಲೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದಾರೆ.

ಬೆಂಬಲ ವಾಪಸ್ ಪಡೆದ ಇಬ್ಬರು ಶಾಸಕರು ಹೇಳಿದ್ದೇನು? ಬೆಂಬಲ ವಾಪಸ್ ಪಡೆದ ಇಬ್ಬರು ಶಾಸಕರು ಹೇಳಿದ್ದೇನು?

ನಿನ್ನೆ ತಡರಾತ್ರಿ ತುರ್ತಾಗಿ ಬೆಂಗಳೂರಿಗೆ ಬಂದಿಳಿದ ವೇಣುಗೋಪಾಲ್ ಅವರು ಇಂದು ಬೆಳಿಗ್ಗೆಯಿಂದ ಕಾಂಗ್ರೆಸ್‌ನ ಹಲವು ಸಚಿವರು, ಮುಖಂಡರ ಜೊತೆ ಸತತ ಸಭೆ ನಡೆಸಿದ್ದರು. ಈಗ ಕುಮಾರಸ್ವಾಮಿ ಅವರ ಜೊತೆ ಸಭೆ ನಡೆಸುತ್ತಿದ್ದಾರೆ.

ಸರ್ಕಾರ ಉಳಿಸಿಕೊಳ್ಳಲು ಈಗಿರುವ ಕೆಲವು ಸಚಿವರು ರಾಜೀನಾಮೆ ನೀಡಿ ಅತೃಪ್ತರಿಗೆ ಅವಕಾಶ ಮಾಡಿಕೊಡಬೇಕಾಗುತ್ತದೆ, ಹಾಗಾಗಿ ಈಗಿನ ಸಭೆಯಲ್ಲಿ ಇದೇ ವಿಷಯ ಚರ್ಚೆ ಆಗುವ ಸಾಧ್ಯತೆ ಇದೆ.

CM Kumaraswamy met congress in charge KC Venugopal

ಜೆಡಿಎಸ್‌ನ ಕೆಲವರು ಹಾಗೂ ಕಾಂಗ್ರೆಸ್‌ನ ಕೆಲವರಿಂದ ರಾಜೀನಾಮೆ ಪಡೆದು ಅತೃಪ್ತ ಶಾಸಕರಿಗೆ ಅವಕಾಶ ಕೊಡುವ ಬಗ್ಗೆ ವೇಣುಗೋಪಾಲ್ ಹಾಗೂ ಕುಮಾರಸ್ವಾಮಿ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಬ್ರೇಕಿಂಗ್ ನ್ಯೂಸ್ : ಇಬ್ಬರು ಶಾಸಕರಿಂದ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ಬ್ರೇಕಿಂಗ್ ನ್ಯೂಸ್ : ಇಬ್ಬರು ಶಾಸಕರಿಂದ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್

ಇದೇ ದಿನ ವೇಣುಗೋಪಾಲ್ ಅವರು ದೇವೇಗೌಡ ಅವರನ್ನು ಸಹ ಭೇಟಿ ಆಗಲಿದ್ದು, ರಾಜ್ಯ ಕಾಂಗ್ರೆಸ್ ಮುಖಂಡರು ವೇಣುಗೋಪಾಲ್, ದೇವೇಗೌಡ ಹಾಗೂ ಕುಮಾರಸ್ವಾಮಿ ಅವರುಗಳು ಸಭೆ ನಡೆಸಲಿದ್ದಾರೆ.

Operation ಕಮಲ ಯಶಸ್ಸಾಗಲು ಸಾಧ್ಯವಿಲ್ಲ ಅನ್ನೋದಿಕ್ಕೆ ಇಲ್ಲಿವೆ 4 ಕಾರಣಗಳು Operation ಕಮಲ ಯಶಸ್ಸಾಗಲು ಸಾಧ್ಯವಿಲ್ಲ ಅನ್ನೋದಿಕ್ಕೆ ಇಲ್ಲಿವೆ 4 ಕಾರಣಗಳು

ಯಾವುದೇ ಬೆಲೆ ತೆತ್ತಾದರೂ ಸರ್ಕಾರವನ್ನು ಉಳಿಸಿಕೊಳ್ಳಲೇ ಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಕೊಟ್ಟಿದ್ದು, ಹೀಗಾಗಿ ಕಾಂಗ್ರೆಸ್ ಮುಖಂಡರು ಸರ್ಕಾರವನ್ನು ಉಳಿಸಿಕೊಳ್ಳಲು ಸರ್ವ ಪ್ರಯತ್ನವನ್ನೂ ಮಾಡುತ್ತಿದ್ದಾರೆ.

English summary
CM Kumaraswamy met congress in charge KC Venugopal they having meeting and discussing about present situation. Congress high command told state congress that government should not fall.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X