ಫಲಿತಾಂಶದ ಬಗ್ಗೆ ಆತಂಕ, ಮತ್ತೆ ಜ್ಯೋತಿಷಿಗಳ ಮೊರೆ ಹೋದ ಕುಮಾರಸ್ವಾಮಿ
Recommended Video
ಬೆಂಗಳೂರು, ಮೇ 10: ಹೋಮ, ಹವನ, ದೇವಸ್ಥಾನಗಳ ಭೇಟಿ ಬಳಿಕ ಇದೀಗ ಸಿಎಂ ಕುಮಾರಸ್ವಾಮಿ ಅವರು ಜ್ಯೋತಿಷಿಗಳ ಮೊರೆ ಹೋಗಿದ್ದಾರೆ. ಹೀಗೆ ಜ್ಯೋತಿಷಿಗಳ ಬಳಿ ಹೋಗುವುದು ಅವರಿಗೆ ಹೊಸದಲ್ಲದಿದ್ದರೂ ಲೋಕ ಫಲಿತಾಂಶ ಮುಂದಿದ್ದಾಗ ಮಾಡಿರುವ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಕುಮಾರಸ್ವಾಮಿ ಅವರು ಇಂದು ತಮ್ಮ ನಂಬಿಕೆಯ ಜ್ಯೋತಿಷಿ ದ್ವಾರಕನಾಥ ಅವರನ್ನು ಭೇಟಿ ಮಾಡಿದ್ದಾರೆ. ಬೆಳಿಗ್ಗೆ ಹೈಕೋರ್ಟ್ ಹೊಸ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರ ಪ್ರಮಾಣವಚನ ಕಾರ್ಯಕ್ರಮ ಮುಗಿಸಿ ಕೂಡಲೇ, ಆರ್.ಟಿ.ನಗರದಲ್ಲಿರುವ ದ್ವಾರಕಾನಾಥ್ ಅವರ ಮನೆಗೆ ಭೇಟಿ ನೀಡಿದರು.
ಮಂಡ್ಯ ಚುನಾವಣೆ ಬಗ್ಗೆ ಆತಂಕಗೊಂಡಿರುವ ಕುಮಾರಸ್ವಾಮಿ ಅವರು ಆ ಬಗ್ಗೆ ಮಾತನಾಡಲು, ಹಾಗೂ ಸರ್ಕಾರಕ್ಕೆ ಮತ್ತೆ ಅಸ್ಥಿರತೆಯ ಭೀತಿ ಉಂಟಾಗಿರುವ ಕಾರಣದಿಂದಾಗಿ ಕುಮಾರಸ್ವಾಮಿ ಅವರು ಅಚಾನಕ್ ಆಗಿ ಜ್ಯೋತಿಷಿಗಳನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.
ಮಂಡ್ಯ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸುವ ಮೊದಲೂ ಸಹ ಕುಮಾರಸ್ವಾಮಿ ಅವರು ದ್ವಾರಕಾನಾಥ್ ಅವರನ್ನು ಭೇಟಿಯಾಗಿದ್ದರು. ಅವರ ಸಲಹೆ ಪಡೆದ ನಂತರವೇ ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಡ್ಯ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿತ್ತು. ಆದರೆ ಅಲ್ಲಿ ಅವರಿಗೆ ಭಾರಿ ಪೈಪೋಟಿಯೇ ಎದುರಾಗಿತ್ತು.

ಈಗಾಗಲೇ ಇವಿಎಂನಲ್ಲಿ ಭವಿಷ್ಯ ಭದ್ರ
ಮೇ 23 ರಂದು ಫಲಿತಾಂಶ ಇದ್ದು, ಅಂದು ನಿಖಿಲ್ ಕುಮಾರಸ್ವಾಮಿ ಭವಿಷ್ಯ ನಿರ್ಧಾರವಾಗಲಿದೆ. ಆ ಬಗ್ಗೆಯೇ ಚರ್ಚಿಸಲು ಕುಮಾರಸ್ವಾಮಿ ಅವರು ದ್ವಾರಕಾನಾಥ್ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಈಗಾಗಲೇ ಮಂಡ್ಯ ಕ್ಷೇತ್ರದ ಅಭ್ಯರ್ಥಿಗಳಾದ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅವರ ಭವಿಷ್ಯ ಇವಿಎಂ ಮಷೀನ್ಗಳಲ್ಲಿ ಭದ್ರವಾಗಿದೆ.

ಮಾಧ್ಯಮಗಳಿಗೆ ನಿಷೇಧ
ಕುಮಾರಸ್ವಾಮಿ ಅವರು ದ್ವಾರಕಾನಾಥ್ ಅವರ ಮನೆಗೆ ಭೇಟಿ ನೀಡಿದ ಸಂದರ್ಭ ಅದನ್ನು ಚಿತ್ರೀಕರಿಸಲು ಮುಂದಾದ ಮಾಧ್ಯಮಗಳಿಗೆ ಪೊಲೀಸರು ತಡೆ ಒಡ್ಡಿದ ಘಟನೆ ಸಹ ನಡೆದಿದೆ. ಈ ಸಂದರ್ಭ ಕೆಲವು ಪೊಲೀಸರು ಮತ್ತು ಮಾಧ್ಯಮದವರ ನಡುವೆ ಮಾತಿನ ಚಕಮಕಿ ನಡೆದಿದೆ.

ಕೆಲವು ದಿನಗಳ ಹಿಂದೆ ಹೋಮ, ಹವನ
ಕುಮಾರಸ್ವಾಮಿ ಅವರು ಕೆಲವು ದಿನಗಳ ಹಿಂದಷ್ಟೆ ಹಲವು ಹೋಮ ಹವನಗಳನ್ನು ಸಹ ನೆರವೇರಿಸಿದ್ದರು, ಈ ಹವನಗಳು ಸರ್ಕಾರದ ಉಳಿವು ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ಜಯಕ್ಕಾಗಿ ಮಾಡಲಾಗಿದ್ದವು ಎಂದು ಹೇಳಲಾಗಿತ್ತು, ಅಂದೂ ಸಹ ಮಾಧ್ಯಮಗಳಿಗೆ ಪೂರ್ಣ ನಿರ್ಭಂದ ಹೇರಲಾಗಿತ್ತು.

ಫಲಿತಾಂಶದ ದಿನ ಹತ್ತಿರವಾದಷ್ಟೂ ಹೆಚ್ಚುತ್ತಿದೆ ಆತಂಕ
ಫಲಿತಾಂಶದ ದಿನ ಹತ್ತಿರವಾಗುತ್ತಿದ್ದಂತೆ ಸರ್ಕಾರಕ್ಕೆ ಅಸ್ಥಿರತೆಯ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ನಡೆದ ಕೆಲವು ಘಟನಾವಳಿಗಳು ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಆತಂಕ ತಂದಿವೆ, ಜೊತೆಗೆ ಮಂಡ್ಯ ಲೋಕಸಭೆ ಚುನಾವಣೆ ಬಗ್ಗೆ ಬಂದಿರುವ ಗುಪ್ತಚರ ವರದಿಗಳು ಸಹ ಕುಮಾರಸ್ವಾಮಿ ಅವರ ನಿದ್ದೆಗೆಡಿಸಿವೆ ಎನ್ನಲಾಗಿದೆ. ಹಾಗಾಗಿ ಅವರು ಜ್ಯೋತಿಷಿಗಳ ಮೊರೆ ಹೋಗಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications