Get Updates
Get notified of breaking news, exclusive insights, and must-see stories!

'ಅಂಬಾರಿ ಉತ್ಸವ ಬಸ್ಸಿನಲ್ಲಿ ಮುಂದಿನ ಬಾಂಬ್ ಸ್ಫೋಟ': ಸಿದ್ದರಾಮಯ್ಯ ಸೇರಿ ಸಂಪುಟ ಸಚಿವರಿಗೆ ಬೆದರಿಕೆ ಪತ್ರ!

ಬೆಂಗಳೂರು, ಮಾರ್ಚ್ 05: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯದ ಇತರ ಹಲವು ಸಚಿವರಿಗೆ ಮಾರ್ಚ್ 05 ರ ಮಂಗಳವಾರ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯದ ಗೃಹ ಸಚಿವ ಜಿ ಪರಮೇಶ್ವರ ಸೇರಿದಂತೆ ಪ್ರಮುಖರಿಗೆ ಬೆದರಿಕೆ ಕಳುಹಿಸಲಾಗಿದೆ.

ಎಎನ್‌ಐ ಪ್ರಕಾರ, ಶಾಹಿದ್ ಖಾನ್ ಎಂಬ ವ್ಯಕ್ತಿ ಈ ಇಮೇಲ್ ಕಳುಹಿಸಿದ್ದು, ಶನಿವಾರ ಮಧ್ಯಾಹ್ನ 2:48 ಕ್ಕೆ ಬೆಂಗಳೂರಿನಲ್ಲಿ ಸ್ಫೋಟ ಸಂಭವಿಸಲಿದೆ ಎಂದು ಬೆದರಿಕೆ ಹಾಕಿದ್ದಾರೆ. [email protected] ಎಂಬ ಇಮೇಲ್ ವಿಳಾಸವನ್ನು ಬಳಸಿಕೊಂಡು ಇಮೇಲ್ ಕಳುಹಿಸಲಾಗಿದೆ.

CM Siddaramaiah and Several Cabinet Ministers Received a Bomb Threat Mail

"ಸಿನಿಮಾ ಟ್ರೇಲರ್ ಬಗ್ಗೆ ನಿಮ್ಮ ಅಭಿಪ್ರಾಯವೇನು..? ನೀವು ನಮಗೆ 2.5 ಮಿಲಿಯನ್ ಡಾಲರ್ ನೀಡದಿದ್ದರೆ, ನಾವು ಕರ್ನಾಟಕದಾದ್ಯಂತ ಬಸ್ಸುಗಳು, ರೈಲುಗಳು, ದೇವಸ್ಥಾನಗಳು, ಹೋಟೆಲ್‌ಗಳು ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ದೊಡ್ಡ ಸ್ಫೋಟಗಳನ್ನು ಮಾಡುತ್ತೇವೆ" ಎಂದು ಬೆದರಿಕೆ ಹಾಕಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

"ನಾವು ನಿಮಗೆ ಇನ್ನೂ ಒಂದು ಟ್ರೈಲರ್ ತೋರಿಸಲು ಬಯಸುತ್ತೇವೆ. ನಾವು ಮುಂದೆ ಅಂಬಾರಿ ಉತ್ಸವ ಬಸ್‌ನಲ್ಲಿ ಸ್ಫೋಟಿಸಲಿದ್ದೇವೆ. ಅಂಬಾರಿ ಉತ್ಸವ ಬಸ್ ಸ್ಫೋಟದ ನಂತರ ನಾವು ಸಾಮಾಜಿಕ ಮಾಧ್ಯಮಗಳಲ್ಲಿ ನಮ್ಮ ಬೇಡಿಕೆಗಳನ್ನು ಎತ್ತುತ್ತೇವೆ. ನಿಮಗೆ ಕಳುಹಿಸಿದ ಈ ಮೇಲ್‌ನ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ಮುಂದಿನ ಸ್ಫೋಟದ ಬಗ್ಗೆ ನಾವು ಟ್ವೀಟ್ ಮಾಡುತ್ತೇವೆ" ಎಂದು ಇಮೇಲ್‌ನಲ್ಲಿ ತಿಳಿಸಲಾಗಿದೆ.

ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಗೃಹ ಸಚಿವರು ಮತ್ತು ಬೆಂಗಳೂರಿನ ಉನ್ನತ ಪೊಲೀಸರನ್ನು ಗುರಿಯಾಗಿಸಿಕೊಂಡು ರೆಸ್ಟೋರೆಂಟ್‌ಗಳು, ದೇವಸ್ಥಾನಗಳು, ಬಸ್‌ಗಳು ಅಥವಾ ರೈಲುಗಳಂತಹ ಜನನಿಬಿಡ ಸ್ಥಳಗಳಲ್ಲಿ ಸ್ಫೋಟ ಸಂಭವಿಸಲಿದೆ ಎಂದು ಇಮೇಲ್ ಬೆದರಿಕೆ ಹಾಕಿದೆ ಎಂದು ವರದಿ ತಿಳಿಸಿದೆ.

ವರದಿಯ ಪ್ರಕಾರ, ನಗರದಲ್ಲಿ ಬಾಂಬ್ ದಾಳಿ ಮಾಡದಂತೆ ಇರಲು $2.5 ಮಿಲಿಯನ್ ಡಾಲರ್ ಅಥವಾ ಸರಿಸುಮಾರು 20 ಕೋಟಿ ರೂಪಾಯಿ ಬೇಡಿಕೆಯಿಡಲಾಗಿದೆ. ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಾರ್ಚ್ 1 ರಂದು ಬೆಂಗಳೂರಿನ ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟ ಸಂಭವಿಸಿದ ಕೆಲವೇ ದಿನಗಳ ನಂತರ ಬಾಂಬ್ ಬೆದರಿಕೆ ಮೇಲ್ ಕಳುಹಿಸಲಾಗಿದೆ. ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಕನಿಷ್ಠ 10 ಜನರು ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಹಿಸಿಕೊಂಡಿದೆ. "ಕಳೆದ ಕೆಲವು ವರ್ಷಗಳಲ್ಲಿ ಕೊಯಮತ್ತೂರು ಮತ್ತು ಮಂಗಳೂರಿನಲ್ಲಿ ಇದೇ ರೀತಿಯ ಸ್ಫೋಟಗಳು ನಡೆದಿರುವುದರಿಂದ ನಾವು ಐಎಸ್ ಕಾರ್ಯಕರ್ತರ ಪಾತ್ರ ಸೇರಿದಂತೆ ಎಲ್ಲಾ ಸಂಭಾವ್ಯ ದೃಷ್ಟಿಕೋನಗಳನ್ನು ಪರಿಶೀಲಿಸುತ್ತಿದ್ದೇವೆ" ಎಂದು ಎನ್‌ಐಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯಲ್ಲಿ ಸುಮಾರು 10 ಮಂದಿ ಗಾಯಗೊಂಡಿದ್ದಾರೆ. ಘಟನೆಯ ತನಿಖೆಗೆ 7-8 ತಂಡಗಳನ್ನು ರಚಿಸಲಾಗಿದೆ. ಹಲವು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗಿದೆ.

ಇನ್ನು, ಈ ಹಿಂದೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಮೊಹಮ್ಮದ್ ರಸೂಲ್ ಕದ್ದಾರೆ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿಯ ಸುರಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+