ದೀಪಕ್ ಕೊಲೆ: ಕರಾವಳಿ ಸಚಿವರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ
Recommended Video
ಬೆಂಗಳೂರು, ಜನವರಿ 04: ಮಂಗಳೂರಿನ ಕಾಟಿಪಳ್ಳದಲ್ಲಿ ಬುಧವಾರ (ಜನವರಿ 3) ನಡೆದ ದೀಪಕ್ ಕೊಲೆ ಸೇರಿದಂತೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಭಾಗದ ಸಚಿವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ದೀಪಕ್ ರಾವ್ ಕೊಲೆ ಪ್ರಕರಣ: ರಮಾನಾಥ ರೈ-ಶೋಭಾ ಕರಂದ್ಲಾಜೆ ಜಟಾಪಟಿ
ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಸರಣಿ ಕೊಲೆ ಬಗ್ಗೆ ಆ ಭಾಗದ ಸಚಿವ ಯುಟಿ ಖಾದರ್ ಸೇರಿದಂತೆ ಹಲವರ ಜತೆ ಗುರುವಾರ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರು ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಸಚಿವ ಯುಟಿ ಖಾದರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ
ಪದೇ-ಪದೇ ಇಂತಹ ಘಟನೆಗಳು ನಿಮ್ಮ ಜಿಲ್ಲೆಯಲ್ಲಿ ನಡೆದರೆ ಹೇಗೆ?, ಈ ಬಗ್ಗೆ ಹೈಕಮಾಂಡ್ ವರದಿ ಕೇಳುತ್ತಿದೆ. ಇದೇ ವಿಚಾರವನ್ನು ಚುನಾವಣೆಯಲ್ಲಿ ಬಿಜೆಪಿ ಬಳಸಿಕೊಳ್ಳುತ್ತಿದೆ. ಯಾವುದೇ ಕಾರಣಕ್ಕೂ ಕೋಮುಗಲಭೆ ಭುಗಿಲೇಳಬಾರದು ಎಂದು ಸಿದ್ದರಾಮಯ್ಯ ಅವರು ಯುಟಿ ಖಾದರ್ ಗೆ ಖಡಕ್ ಸೂಚನೆ ನೀಡಿದರು.
ದೀಪಕ್ ದೇಹ ಗೌಪ್ಯವಾಗಿ ಮನೆಗೆ ಶಿಫ್ಟ್, ಶವಯಾತ್ರೆಗೆ ಬಿಗಿಪಟ್ಟು
ನಿಮ್ಮ-ನಿಮ್ಮ ಕ್ಷೇತ್ರಗಳಲ್ಲಿ ಹಿಡಿತ ಇಟ್ಟುಕೊಳ್ಳಿ. ಚುನಾವಣಾ ಸಮಯದಲ್ಲಿ ಇಂತಹ ಘಟನೆ ನಡೆದರೆ ಕಷ್ಟ ಎಂದು ಕರಾವಳಿ ಭಾಗದ ಸಚಿವ ಹಾಗೂ ಕಾಂಗ್ರೆಸ್ ಸಚಿವರಿಗೆ ಸೂಕ್ಷ್ಮವಾಗಿ ತಿಳಿ ಹೇಳಿದರು.