ಮಹಿಳಾ ಮೀಸಲಾತಿ 2024, 2029 ಹಾಗೂ 2034 ರಲ್ಲೂ ಜಾರಿ ಆಗಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜಾತಿ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ "ಮಹಿಳಾ ಮೀಸಲಾತಿ" ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರಿಗೆ ಮೀಸಲಾತಿ ಕೊಡಬೇಕು ಎನ್ನುವ ಪ್ರಾಮಾಣಿಕ ಕಾಳಜಿ ಬಿಜೆಪಿಗೆ ಇದ್ದಿದ್ದರೆ ಇಷ್ಟೊಂದು ಅಡೆತಡೆಗಳನ್ನು ಹಾಕುತ್ತಿರಲಿಲ್ಲ. ನರೇಂದ್ರ ಮೋದಿಯವರು ಜಾರಿ ಮಾಡಿರುವ ಮಹಿಳಾ ಮೀಸಲಾತಿ ಕಾಯ್ದೆ ಜಾರಿ ಆಗಿದೆ. ಇದಕ್ಕೆ ಇನ್ನು 15 ವರ್ಷ ಮಾತ್ರ ಆಯಸ್ಸು. ಆದರೆ, ಜಾತಿ ಜನಗಣತಿ ಮತ್ತು ಡೀಲಿಮಿಟೇಷನ್ ಎನ್ನುವ ಎರಡು ಕೊಕ್ಕೆ ಹಾಕಿಟ್ಟಿದ್ದಾರೆ. ಇವರೆಡೂ ಮುಗಿಯುವ ವೇಳೆಗೆ 15 ವರ್ಷ ಆಗಿರತ್ತೆ. ಹೀಗಾಗಿ ಮಹಿಳಾ ಮೀಸಲಾತಿ ಕಾಯ್ದೆಗೆ ಜಾರಿ ಆಗುವ ಮೊದಲೇ ಅದರ ಆಯಸ್ಸೇ ಮುಗಿದು ಹೋಗಿರುತ್ತದೆ. ಇದು ಮಹಿಳೆಯರಿಗೆ ಮಾಡಿರುವ ಪರಮ ವಂಚನೆ ಎಂದು ಟೀಕಿಸಿದರು.
ಮಹಿಳೆಯರಿಗೆ ವಂಚನೆ ಮಾಡಲು ಕಳುಹಿಸಿದ್ದಾ?
ಮಹಿಳಾ ಮೀಸಲಾತಿ ಜಾರಿ ಮಾಡುವುದಕ್ಕೆ ದೇವರೇ ನನ್ನನ್ನು ಕಳುಹಿಸಿದ್ದು ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಮೊನ್ನೆ ಹೇಳಿದರು. ಈಗ ನೋಡಿದ್ರೆ ಮಹಿಳೆಯರಿಗೆ ಈ ರೀತಿ ವಂಚನೆ ಆಗಿದೆ. ಮಹಿಳೆಯರಿಗೆ ವಂಚನೆ ಮಾಡಿ ಅಂತನಾ ದೇವರು ನಿಮ್ಮನ್ನು ಕಳುಹಿಸಿದ್ದು ಎಂದು ಮುಖ್ಯಮಂತ್ರಿ ಗಳು ವ್ಯಂಗ್ಯವಾಗಿ ಪ್ರಶ್ನೆ ಮಾಡಿದರು.
ಮಹಿಳಾ ಮೀಸಲಾತಿ ಬಿಲ್ ಸಿದ್ದಪಡಿಸಿದ್ದು ಕಾಂಗ್ರೆಸ್. ಕಾಂಗ್ರೆಸ್ ಯಾವತ್ತೂ ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಇದೆ. ಮಹಿಳಾ ಮೀಸಲಾತಿಯಲ್ಲೂ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಮೀಸಲಾತಿ ಇರಬೇಕು ಎನ್ನುವುದಕ್ಕೆ ನನ್ನ ಪೂರ್ಣ ಬೆಂಬಲ ಇದೆ. ಅದರಲ್ಲೂ ಶೇ 33 ಮಾತ್ರವಲ್ಲ, ಶೇ 50 ರಷ್ಟು ಮೀಸಲಾತಿಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದರು.
ಈಗ ಮೋದಿಯವರು ಜಾರಿ ಮಾಡಿದ್ದೇನೆ ಎನ್ನುತ್ತಿರುವ ಈ ಮಹಿಳಾ ಮೀಸಲಾತಿ 2024 ರಲ್ಲೂ ಜಾರಿ ಆಗುವುದಿಲ್ಲ. 2029 ರಲ್ಲೂ ಜಾರಿ ಆಗುವುದಿಲ್ಲ. 2034 ರಲ್ಲೂ ಜಾರಿ ಆಗುವುದಿಲ್ಲ. ಅಷ್ಟೊತ್ತಿಗೆ ಕಾಯ್ದೆಯ ಆಯಸ್ಸೇ ಮುಗಿದಿರುತ್ತದೆ ಎಂದು ಬಿಜೆಪಿಯ ತಂತ್ರವನ್ನು ವಿವರಿಸಿದರು.
ಅವಕಾಶ ಸಿಕ್ಕಾಗ ಮಹಿಳೆಯರು ಎಲ್ಲರಿಗಿಂತ ಮುಂದೆ ಇರುತ್ತಾರೆ
ಮಹಿಳೆಯರೂ ಶೂದ್ರರ ರೀತಿ ಶಿಕ್ಷಣದಿಂದ ಸಂಪೂರ್ಣ ವಂಚಿತರಾಗಿದ್ದರು. ಮಹಿಳೆಯರ ಹೋರಾಟ ಮತ್ತು ಸಂವಿಧಾನದ ಕಾರಣಕ್ಕೆ ಶಿಕ್ಷಣದಲ್ಲಿ ಅವಕಾಶ ದೊರೆಯಿತು. ಅವಕಾಶ ಸಿಕ್ಕಾಗ ಪುರುಷರಿಗಿಂತ ಶಿಕ್ಷಣದಲ್ಲಿ ಮುಂದಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಹಿಳಾ ಮೀಸಲಾತಿ ಜಾರಿ ಆಗಿಬಿಟ್ಟಿತು ಎಂದು ಸುಳ್ಳು ನಂಬಿಕೊಂಡು ಸುಳ್ಳು ಚಪ್ಪಾಳೆ ಹೊಡಿಬೇಡಿ. ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು, ನೀವೆಲ್ಲಾ ಹೋರಾಟ ಮುಂದುವರೆಸಬೇಕು ಎಂದು ಕರೆ ನೀಡಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ












Click it and Unblock the Notifications