ಬಕ್ರೀದ್ ಹಬ್ಬವು ನಮ್ಮೆಲ್ಲರನ್ನೂ ಒಗ್ಗೂಡಿಸಲಿ: ಸಿದ್ದರಾಮಯ್ಯ
ಬೆಂಗಳೂರು, ಸೆಪ್ಟೆಂಬರ್ 02 : ತ್ಯಾಗದ ಹಬ್ಬ ಎಂದೇ ಎಲ್ಲೆಡೆ ಜನಪ್ರಿಯವಾಗಿರುವ ಬಕ್ರೀದ್ ಹಬ್ಬದ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಹಾಗೂ ವಿಶೇಷವಾಗಿ ರಾಜ್ಯದ ಎಲ್ಲಾ ಮುಸಲ್ಮಾನ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.
ಬಕ್ರೀದ್ ಹಬ್ಬವು ನಮ್ಮೆಲ್ಲರನ್ನೂ ಒಗ್ಗೂಡಿಸಲಿ. ಕೋಮು ಸೌಹಾರ್ಧತೆ ಮೂಡಿಸಲು ಪ್ರೇರಣೆ ಹಾಗೂ ಸ್ಫೂತಿಯನ್ನು ನೀಡುವ ಮೂಲಕ ಸಮೃದ್ಧ ಕರ್ನಾಟಕವನ್ನು ರೂಪಿಸಲು ಹಾಗೂ ಬಲಿಷ್ಠ ಭಾರತವನ್ನು ನಿರ್ಮಿಸಲು ಬಕ್ರೀದ್ ನ ಸಡಗರ ಮತ್ತು ಸಂಭ್ರಮ ನಮ್ಮೆಲ್ಲರಿಗೂ ಶಕ್ತಿಯನ್ನೀಯಲಿ ಎಂದು ಸಿದ್ದರಾಮಯ್ಯ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ನಿಷ್ಮಲ್ಮಶ ಭಕ್ತಿಗೆ ಅಲ್ಲಾಹ್ ನ ಅನುಗ್ರಹ ಇದ್ದೇ ಇರುತ್ತದೆ ಎಂಬುದನ್ನು ಬಲವಾಗಿ ಪ್ರತಿಪಾದಿಸುವುದರ ಸಂಕೇತವಾಗಿರುವ ಬಕ್ರೀದ್ ಹಬ್ಬವು ತ್ಯಾಗದ ಶ್ರೇಷ್ಠತೆಯನ್ನು ಸಾಬೀತುಪಡಿಸುತ್ತದೆ. ಬಹುಶಃ ಈ ಹಿನ್ನೆಲೆಯಲ್ಲಿಯೇ, ಬಕ್ರೀದ್ ಹಬ್ಬದ ಸುಸಂದರ್ಭವನ್ನು ಪವಿತ್ರ ಹಜ್ ಯಾತ್ರೆಗೆ ಅತ್ಯುತ್ತಮ ಕಾಲ ಎಂದು ಬಣ್ಣಿಸುತ್ತಾರೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಾಡಿನ ಜನತೆಗೆ ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬದ ಶುಭಾಶಯಗಳು. pic.twitter.com/ci1ydVeQa5
— CM of Karnataka (@CMofKarnataka) September 2, 2017
ಬಂಧು-ಮಿತ್ರರು, ನೆರೆ-ಹೊರೆಯವರು ಹಾಗೂ ಬಡವರು-ಕಡುಬಡವರೊಂದಿಗೆ ಹಬ್ಬದೂಟವನ್ನು ಸವಿದು ಸಂಭ್ರಮಿಸಲು ವಿಶೇಷ ವೇದಿಕೆಯಾಗಲಿರುವ ಬಕ್ರೀದ್ ಹಬ್ಬವು ಬಡವ-ಬಲ್ಲಿದ ಎಂಬ ಬೇಧ-ಭಾವವಿಲ್ಲದೆ ಎಲ್ಲರೊಂದಿಗೆ ಸುಮಧುರ ಬಾಂಧವ್ಯವನ್ನು ಬೆಸೆಯಲು ಮಾನವೀಯ ಸ್ಪರ್ಶ ಕಲ್ಪಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಂದೇಶ ಹೇಳಿದ್ದಾರೆ.
-
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ












Click it and Unblock the Notifications