ಲಾಲ್ಬಾಗ್ನಲ್ಲಿ ಮೈಸೂರು ಅರಮನೆ ನೋಡಿ
ಬೆಂಗಳೂರು, ಆ.8: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜಧಾನಿ ಬೆಂಗಳೂರಿನ ಲಾಲ್ ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭಗೊಂಡಿದೆ.
ಲಾಲ್ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಈ ಬಾರಿ ದ್ವಿಶತಕದ ಸಂಭ್ರಮ. ಹೀಗಾಗಿ ವಿಶ್ವ ವಿಖ್ಯಾತ ಮೈಸೂರು ಜಗನ್ಮೋಹನ ಅರಮನೆಯ ಪ್ರತಿರೂಪವನ್ನು ಹೂವಿನಲ್ಲಿ ರಚಿಸಿರುವುದು ಈ ಬಾರಿಯ ವಿಶೇಷ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು. ಆ.8ರಿಂದ 17ರವರೆಗೆ ಬೆಳಗ್ಗೆ 9ರಿಂದ ಸಂಜೆ 6 ಗಂಟೆಯ ತನಕ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಅರಮನೆಯನ್ನು ಸುಮಾರು ಮೂರು ಲಕ್ಷಕ್ಕೂ ಅಧಿಕ ಉತ್ಕೃಷ್ಟ ಡಚ್ತಳಿಯ ಗುಲಾಬಿ ಹೂಗಳನ್ನು ಬಳಸಿ ಅಲಂಕರಿಸಲಾಗಿದೆ. ಈ ಅರಮನೆ 45 ಅಡಿ ಉದ್ದ, 27 ಅಡಿ ಎತ್ತರ ಹಾಗೂ 12 ಅಡಿ ಅಗಲವಿದೆ. 25 ಮಂದಿ ವಿಶೇಷ ಪರಿಣತರ ತಂಡ ಸುಮಾರು 15 ದಿನಗಳ ಕಾಲ ಶ್ರಮಿಸಿ ಹೂವಿನಲ್ಲಿ ಮೈಸೂರು ಅರಮನೆ ನಿರ್ಮಿಸಿದ್ದಾರೆ.
ಅರಮನೆಗೆ ಹೊಂದಿಕೊಂಡತೆ ಪುಷ್ಪಾಲಂಕೃತ, ಶ್ರೀ ಚಾಮುಂಡಿ ದೇವಿಯ ಅಂಬಾರಿಯನ್ನು ಹೊತ್ತ ಆನೆ ಮತ್ತು ದಸರಾ ಮೆರವಣಿಗೆಯ ಪ್ರತಿರೂಪದ ಗಜಪಡೆ,ಅಶ್ವಪಡೆ, ಸೇನಾಪಡೆಯನ್ನು ಹೂಗಳಿಂದ ನಿರ್ಮಿಸಲಾಗಿದೆ.

ದ್ವಿಶತಕದ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಲಾಲ್ ಬಾಗ್ ಇತಿಹಾಸ ನೆನಪಿಸುವ 200 ಛಾಯಾಚಿತ್ರಗಳ ಪ್ರದರ್ಶನವನ್ನು ಈ ಬಾರಿ ಆಯೋಜಿಸಲಾಗಿದೆ.
ಸಸ್ಯ ತೋಟಕ್ಕೆ ಭೇಟಿ ನೀಡಿರುವ ಗಣ್ಯಾತಿಗಣ್ಯರ ಅವಿಸ್ಮರಣೀಯ ಸನ್ನಿವೇಶಗಳ ಹಾಗೂ ಅತಿ ವಿರಳ ಛಾಯಚಿತ್ರಗಳ ಸಂಚಯವವು ಚಿತ್ರ ರಸಿಕರ ಛಾಯರಸಿಕರ ಕಣ್ಮನ ಸೆಳೆಯಲಿವೆ.

ಪ್ರವೇಶ ಶುಲ್ಕ: ಪ್ರದರ್ಶನಕ್ಕೆ ಆಗಮಿಸುವ ಜನರು ಸಾಮಾನ್ಯ ದಿನಗಳಲ್ಲಿ 40 ರೂ., ರಜಾ ದಿನಗಳಲ್ಲಿ 50 ರೂ. ಪ್ರವೇಶ ಶುಲ್ಕ ಪಾವತಿ ಮಾಡಬೇಕಾಗಿದೆ. ಎಲ್ಲಾ ದಿನಗಳಲ್ಲಿ 12 ವರ್ಷದೊಳಗಿನ ಮಕ್ಕಳಿಗೆ 10 ರೂ. ಶುಲ್ಕ. ಪ್ರದರ್ಶನಕ್ಕೆ ಆ.13 ಹಾಗೂ 14 ರಂದು ಶಾಲಾ ಮಕ್ಕಳಿಗೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಲಾಲ್ಬಾಗ್ನಲ್ಲಿರುವ ಸುಂದರ ಮೈಸೂರು ಅರಮನೆಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications