ಲಾಲ್ಬಾಗ್ನಲ್ಲಿ ಮೈಸೂರು ಅರಮನೆ ನೋಡಿ
ಬೆಂಗಳೂರು, ಆ.8: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜಧಾನಿ ಬೆಂಗಳೂರಿನ ಲಾಲ್ ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭಗೊಂಡಿದೆ.
ಲಾಲ್ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಈ ಬಾರಿ ದ್ವಿಶತಕದ ಸಂಭ್ರಮ. ಹೀಗಾಗಿ ವಿಶ್ವ ವಿಖ್ಯಾತ ಮೈಸೂರು ಜಗನ್ಮೋಹನ ಅರಮನೆಯ ಪ್ರತಿರೂಪವನ್ನು ಹೂವಿನಲ್ಲಿ ರಚಿಸಿರುವುದು ಈ ಬಾರಿಯ ವಿಶೇಷ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು. ಆ.8ರಿಂದ 17ರವರೆಗೆ ಬೆಳಗ್ಗೆ 9ರಿಂದ ಸಂಜೆ 6 ಗಂಟೆಯ ತನಕ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಅರಮನೆಯನ್ನು ಸುಮಾರು ಮೂರು ಲಕ್ಷಕ್ಕೂ ಅಧಿಕ ಉತ್ಕೃಷ್ಟ ಡಚ್ತಳಿಯ ಗುಲಾಬಿ ಹೂಗಳನ್ನು ಬಳಸಿ ಅಲಂಕರಿಸಲಾಗಿದೆ. ಈ ಅರಮನೆ 45 ಅಡಿ ಉದ್ದ, 27 ಅಡಿ ಎತ್ತರ ಹಾಗೂ 12 ಅಡಿ ಅಗಲವಿದೆ. 25 ಮಂದಿ ವಿಶೇಷ ಪರಿಣತರ ತಂಡ ಸುಮಾರು 15 ದಿನಗಳ ಕಾಲ ಶ್ರಮಿಸಿ ಹೂವಿನಲ್ಲಿ ಮೈಸೂರು ಅರಮನೆ ನಿರ್ಮಿಸಿದ್ದಾರೆ.
ಅರಮನೆಗೆ ಹೊಂದಿಕೊಂಡತೆ ಪುಷ್ಪಾಲಂಕೃತ, ಶ್ರೀ ಚಾಮುಂಡಿ ದೇವಿಯ ಅಂಬಾರಿಯನ್ನು ಹೊತ್ತ ಆನೆ ಮತ್ತು ದಸರಾ ಮೆರವಣಿಗೆಯ ಪ್ರತಿರೂಪದ ಗಜಪಡೆ,ಅಶ್ವಪಡೆ, ಸೇನಾಪಡೆಯನ್ನು ಹೂಗಳಿಂದ ನಿರ್ಮಿಸಲಾಗಿದೆ.

ದ್ವಿಶತಕದ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಲಾಲ್ ಬಾಗ್ ಇತಿಹಾಸ ನೆನಪಿಸುವ 200 ಛಾಯಾಚಿತ್ರಗಳ ಪ್ರದರ್ಶನವನ್ನು ಈ ಬಾರಿ ಆಯೋಜಿಸಲಾಗಿದೆ.
ಸಸ್ಯ ತೋಟಕ್ಕೆ ಭೇಟಿ ನೀಡಿರುವ ಗಣ್ಯಾತಿಗಣ್ಯರ ಅವಿಸ್ಮರಣೀಯ ಸನ್ನಿವೇಶಗಳ ಹಾಗೂ ಅತಿ ವಿರಳ ಛಾಯಚಿತ್ರಗಳ ಸಂಚಯವವು ಚಿತ್ರ ರಸಿಕರ ಛಾಯರಸಿಕರ ಕಣ್ಮನ ಸೆಳೆಯಲಿವೆ.

ಪ್ರವೇಶ ಶುಲ್ಕ: ಪ್ರದರ್ಶನಕ್ಕೆ ಆಗಮಿಸುವ ಜನರು ಸಾಮಾನ್ಯ ದಿನಗಳಲ್ಲಿ 40 ರೂ., ರಜಾ ದಿನಗಳಲ್ಲಿ 50 ರೂ. ಪ್ರವೇಶ ಶುಲ್ಕ ಪಾವತಿ ಮಾಡಬೇಕಾಗಿದೆ. ಎಲ್ಲಾ ದಿನಗಳಲ್ಲಿ 12 ವರ್ಷದೊಳಗಿನ ಮಕ್ಕಳಿಗೆ 10 ರೂ. ಶುಲ್ಕ. ಪ್ರದರ್ಶನಕ್ಕೆ ಆ.13 ಹಾಗೂ 14 ರಂದು ಶಾಲಾ ಮಕ್ಕಳಿಗೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಲಾಲ್ಬಾಗ್ನಲ್ಲಿರುವ ಸುಂದರ ಮೈಸೂರು ಅರಮನೆಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications