16 ಕೋಟಿ ವೆಚ್ಚದಲ್ಲಿ ಕೆಂಪೇಗೌಡ ಬಡಾವಣೆ ಅಭಿವೃದ್ಧಿಗೆ ಸಿಎಂ ಚಾಲನೆ
ಬೆಂಗಳೂರು, ಮಾರ್ಚ್ 05: ನಾಡ ಪ್ರಭು ಕೆಂಪೇಗೌಡ ಬದಾವಣೆಗೆ ಎರಡು ಹಂತಗಳಲ್ಲಿ ನೀರು, ಒಳಚರಂಡಿ ಮತ್ತು ವಿದ್ಯುತ್ ಸೌಲ್ಯ ಕಲ್ಪಿಸುವ ರೂ 16000 ಕೋಟಿ ವೆಚ್ಚದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಂಕು ಸ್ಥಾಪನೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳು ವಿಶ್ವೇಶ್ವರಯ್ಯ ಬಡಾವಣೆಯಿಂದ ಮಾಗಡಿ ಮುಖ್ಯ ರಸ್ತೆ ಸಂಪರ್ಕಿಸುವ 150 ಅಡಿ ರಸ್ತೆ, ಮಾಗಡಿ ರಸ್ತೆಯಿಂದ ಏರೋಹಳ್ಳಿ ಮಾರ್ಗವಾಗಿ ತುಮಕೂರು ಮೂಖ್ಯ ರಸ್ತೆ ಸಂಪರ್ಕ ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.
ಮಾಗಡಿ ರಸ್ತೆ, ನೈಸ್ ರಸ್ತೆ, ಜಂಕ್ಷನ್ ಬಳಿ ಗೊಲ್ಲರಹಟ್ಟಿಯಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯ ಮಂತ್ರಿಯವರು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ಬಯಸಿದವರಿಗೆ ಈಗಾಗಲೆ 5000 ನಿವೇಶನಗಳನ್ನು ಹಂಚಿದ್ದೇವೆ. ಭೂಮಿ ಕಳೆದುಕೊಂಡವರಿಗೆ 2000 ನಿವೇಶನ ಹಂಚಿದ್ದೇವೆ ಎರಡನೇ ಹಂತದಲ್ಲಿ 5000 ನಿವೇಶನಗಳನ್ನು ಅಪೇಕ್ಷಿಸಿದವರಿಗೆ ಮತ್ತು 3000 ನಿವೇಶನಗಳನ್ನು ಭೂಮಿ ಕಳೆದುಕೊಂಡವರಿಗೆ ನೀಡಲಾಗುತ್ತದೆ.

ಜಪಾನ್ನಿಂದ ನೆರವು
ಬಡಾವಣೆಗೆ ಮೂಲ ಸೌರ್ಕಗಳ ಅಗತ್ಯವಿದ್ದು ನೀರು, ಒಳಚರಂಡಿ ಹಾಗೂ ವಿದ್ಯುತ್ ಸೌಕರ್ಯ ಒದಗಿಸುವ ಕೆಲಸವನ್ನೂ ಸಹ ಕೈಗೊಳ್ಳಲಾಗುತ್ತದೆ ಅದಕ್ಕೆ ಇಂದು ಚಾಲನೆ ನೀಡಲಾಗಿದೆ. ಮುಂದಿನ 20-30 ವರ್ಷಗಳಲ್ಲಿ ನಗರಕ್ಕೆ ಕುಡಿಯುವ ನೀರಿಗೆ ಸಮಸ್ಯೆಯಾಗದಿರಲಿ ಎಂಬ ದೂರಗಾಮಿ ಚಿಂತನೆಯಿಂದ ಜಪಾನ್ ಅಂತರ ರಾಷ್ಟ್ರೀಯ ಸಹಕಾರ ಸಂಸ್ಥೆಯ ಆರ್ಥಿಕ ನೆರವಿನಿಂದ ನಗರಕ್ಕೆ ಹೆಚ್ಚಿನ ಕಾವೇರಿ ನೀರನ್ನು ತರುವ ಯೋಜನೆ ಕೈಗೊಳ್ಳಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

30 ಲಕ್ಷ ಕುಟುಂಬಕ್ಕೆ ಗ್ಯಾಸ್
ರಾಜ್ಯದ 4 ಕೋಟಿ ಬಡ ಜನರಿಗೆ ತಲಾ 7 ಕೆಜಿ ಅಕ್ಕಿಯನ್ನು ಪ್ರತಿತಿಂಗಳು ನೀಡಿದ ಹೆಗ್ಗಳಿಗೆ ಕರ್ನಾಟಕ ಸರ್ಕಾರದ್ದಾಗಿದೆ ಈ ಸೌಕರ್ಯ ದೇಶದ ಬೇರೆ ಯಾವುದೇ ರಾಜ್ಯ ನೀಡಿಲ್ಲ. ಅದೇ ರೀತಿ ಅನಿಲ ಭಾಗ್ಯ ಯೋಜನೆಯಡಿ 30 ಲಕ್ಷ ಕುಟುಂಬಗಳಿಗೆ ತಲಾ ರೂ 4254 ವೆಚ್ಚದಲ್ಲಿ ಗ್ಯಾಸ್ ಸೌಲಭ್ಯ ಕಲ್ಪಿಸಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.

ಎಪಿಎಲ್ ಕಾರ್ಡ್ದಾರರಿಗೂ ಸೌಲಭ್ಯ
ಸರ್ವರಿಗೂ ಆರೋಗ್ಯ ಸೇವೆ ಕಾರ್ಯಕ್ರಮದಡಿಯಲ್ಲಿ ಒಂದು ಕೋಟಿ ನಲವತ್ತಮೂರು ಲಕ್ಷ ಬಿಪಿಎಲ್ ಕಾರ್ಡು ಹೊಂದಿದವರಿಗೆ ಸರ್ಕಾರಿ ಆಸ್ಪತ್ರೆ, ಸರ್ಕಾರಿ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ರೆಫರ್ ಮಾಡಲಾದ ರೋಗಿಗಳಿಗೆ ಉಚಿತ ಶಸ್ತ್ರಚಿಕಿತ್ಸೆ ಒದಗಿಸುವ ವಿನೂತನ ಯೋಜನೆಯನ್ನು ಜಾರಿ ಮಾಡಲಾಗಿದೆ, ಬಡತನದ ರೇಖೆಗಿಂತ ಮೇಲಿರುವವರಿಗೆ ಈ ಯೋಜನೆಯಡಿ ಶೇ 30ರಷ್ಟು ವೆಚ್ಚವನ್ನು ಸರ್ಕಾರ ಭರಿಸಲಿದ್ದು ಉಳಿಕೆ ಹಣವನ್ನು ಸಂಬಂಧಿಸಿದವರು ಭರಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಮೆಟ್ರೋ ವಿಸ್ತರಣೆ
ಬೆಳೆಯುತ್ತಿರುವ ನಗರದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ ಪ್ರಯತ್ನವಾಗಿ ಮೊದಲ ಹಂತದಲ್ಲಿ 42 ಕಿ ಮೀ ಮೆಟ್ತೋ ಮಾರ್ಗ ಕಾರ್ಯಾರಂಭ ಮಾಡಿದ್ದು ಎರಡನೇ ಹಂತದ 72 ಕಿ ಮೀ ಕಾಮಗಾರಿ ಪ್ರಗತಿಯಲ್ಲಿದೆ .2025ರ ವೇಳೆಗೆ 260 ಕಿಮೀ ಮೆಟ್ರೋ ಮಾರ್ಗ ನಿರ್ಮಿಸುವ ಗುರಿಹೊಂದಲಾಗಿದೆ ಎಂದರು.

ಇನ್ನೂ ಹಲವರು ಭಾಗಿ
ಪ್ರಾಸ್ತಾವಿಕ ಭಾಷಣ ಮಾಡಿದ ಯಶವಂತಪುರ ವಿಧಾನಸಭಾಕ್ಷೇತ್ರದ ಶಾಸಕರಾದ ಶ್ರೀ ಎಸ್ ಟಿ ಸೋಮಶೇಖರ್ಗೌಡ ಅವರು ವಿವಿಧ ಅಭಿವೃಧ್ದಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ಅಭಿವೃದ್ಧಿ ಮತ್ತು ಯೋಜನಾ ಸಚಿವರಾದ ಶ್ರೀ ಕೆ.ಜೆ ಜಾರ್ಜ್, ಲೋಕೋಪಯೋಗಿ ಸಚಿವ ಡಾ.ಹೆಚ್ ಸಿ ಮಹದೇವಪ್ಪ , ಶಾಸಕರಾದ ಭೈರತಿ ಬಸವರಾಜು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಶಾಸಕರಾದ ಶ್ರೀ ವೆಂಕಟೇಶ್,ಪೂಜ್ಯ ಮಹಾ ಪೌರರಾದ ಶ್ರೀ ಸಂಪತ್ ರಾಜು , ಹಿರಯ ಅಧೀಕಾರಗಳು ಪಾಲ್ಗೊಂಡಿದ್ದರು . ಇದೇ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳು ವಿವಿಧ ಯೋಜನೆ ಫಲಾನುಭವಿಗಳಿಗೆ ಹಕ್ಕು ಪತ್ತ ವಿತರಣೆ ಮಾಡಿದರು
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications