ಸಿಎಂ ಸಿದ್ದರಾಮಯ್ಯರಿಗೆ ಗೌರವ ಡಾಕ್ಟರೇಟ್ ಆಸೆ!
ಬೆಂಗಳೂರು, ಮಾರ್ಚ್ 27: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಗೌರವ ಡಾಕ್ಟರೇಟ್ ಪದವಿ ಪಡೆಯುವ ಆಸೆ ಇದೆ ಎನ್ನುವುದು ಇದೀಗ ಬಹಿರಂಗಗೊಂಡಿದೆ. ಬೆಂಗಳೂರು ವಿವಿಯ ಗೌರವ ಡಾಕ್ಟರೇಟ್ ಪಡೆಯುವವರ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರ ಹೆಸರು ಇನ್ನೇನು ಸೇರುವ ಸಾಧ್ಯತೆ ಕಂಡು ಬಂದಿದೆ.
ಬೆಂಗಳೂರು ವಿವಿಯ ಗೌರವ ಡಾಕ್ಟರೇಟ್ ಪಡೆಯಲು ಪ್ರಭಾವಿಗಳ ಹೆಸರಿರುವ ಅರ್ಜಿಗಳ ಪಟ್ಟಿಯಲ್ಲಿದ್ದ ಸಿಎಂ ಹೆಸರಿನ ಅರ್ಜಿಯೇ ಇದಕ್ಕೆ ನಿದರ್ಶನ. ಆದರೆ, ಸಿಎಂಗೆ ಗೌರವ ಡಾಕ್ಟರೇಟ್ ಪದವಿ ನೀಡಬೇಕೆ ಬೇಡವೇ ಎನ್ನುವ ಗೊಂದಲಕ್ಕೆ ಸಿಲುಕಿರುವ ವಿವಿ ಈ ಬಾರಿ ಗೌರವ ಡಾಕ್ಟರೇಟ್ ಪದವಿಯನ್ನು ನೀಡುವುದೇ ಬೇಡ ಎನ್ನುವ ನಿರ್ಧಾರಕ್ಕೆ ಬಂದಿದೆ.

ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗದ್ದ ವೇಳೆ ಅಮೆರಿಕಾದ ಮಿಚಿಗನ್ ನ ಸಗಿನಾವ್ ವ್ಯಾಲಿಸ್ಟೇಟ್ ಯೂನಿ ವರ್ಸಿಟಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿತ್ತು. ಇದೀಗ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯರಿಗೂ ಗೌರವ ಡಾಕ್ಟ ರೇಟ್ ಪಡೆಯಬೇಕು ಎನ್ನುವ ಬಯಕೆಯಾಗಿರುವಂತಿದೆ.
ಅದಕ್ಕೆ ಯಡಿಯೂರಪ್ಪನವರೇ ಸ್ಫೂರ್ತಿಯೋ ಏನೋ ಗೊತ್ತಿಲ್ಲ. ಆದರೆ ವಿವಿಗಳು ನೀಡುವ ಗೌರವ ಡಾಕ್ಟರೇಟ್ ಪದವಿಯ ನಿರೀಕ್ಷೆಯಲ್ಲಿದ್ದು, ಇನ್ಮುಂದೆ ಡಾಕ್ಟರ್ ಸಿದ್ದರಾಮಯ್ಯ ಆಗಬೇಕು ಎನ್ನುವ ಕನಸನ್ನಿಟ್ಟುಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು ವಿವಿಯ 51ನೇ ಘಟಿಕೋತ್ಸವದಲ್ಲಿ ಈ ಬಾರಿ ನೀಡುವ ಗೌರವ ಡಾಕ್ಟರೇಟ್ ಪದವಿ ಪಡೆದುಕೊಳ್ಳಬೇಕು ಎಂದು ಸಿಎಂ ಚಿಂತನೆ ನಡೆಸಿದ್ದರೇ ಎನ್ನುವ ಅನುಮಾನಕ್ಕೆ ಇಂಬು ಕೊಡುವಂತೆ ಅವರ ಹೆಸರಿನ ಅರ್ಜಿ ಗೌರವ ಡಾಕ್ಟರೇಟ್ ಆಕಾಂಕ್ಷಿಗಳ ಅರ್ಜಿಯೊಂದಿಗೆ ಲಭ್ಯವಾಗಿದೆ.
ಒಟ್ಟು 30 ಪ್ರಭಾವಿಗಳ ಅರ್ಜಿಗಳಲ್ಲಿ ಸಿಎಂ ಸಿದ್ದರಾಮಯ್ಯನವರ ಹೆಸರಿನ ಅರ್ಜಿ ಇದ್ದು, ಯಾರು ಈ ಪ್ರಯತ್ನ ನಡೆಸಿದ್ದಾರೆ ಎನ್ನುವುದು ಬಹಿರಂಗಗೊಂಡಿಲ್ಲ. ಆದರೆ, ಬೆಂಗಳೂರು ವಿವಿ ಮಾತ್ರ ಸಿಎಂ ಹಾಗೂ ಪ್ರಭಾವಿಗಳ ಹೆಸರನ್ನು ನೋಡಿ
ಕಂಗಾಲಾಗಿದೆ. ಸಿಎಂಗೆ ಗೌರವ ಡಾಕ್ಟರೇಟ್ ಪದವಿ ನೀಡಬೇಕೆ, ಬೇಡವೇ ಎನ್ನುವ ಗೊಂದಲಕ್ಕೆ ಸಿಲುಕಿದೆ.
ಪ್ರಭಾವಿಗಳನ್ನು ಕಡೆಗಣಿಸಿ ವಿರೋಧ ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಸಿಎಂಗೆ ನೀಡಿ ಉಳಿದವರನ್ನು ಬಿಡುವಂತೆಯೂ ಇಲ್ಲ. ಈ ಗೊಂದಲಕ್ಕೆ ಸಿಲುಕಿರುವ ವಿವಿ ಈ ವಿಷಯದ ಕುರಿತು ಸಿಂಡಿಕೇಟ್ ಸಭೆ ನಡೆಸಿ ಚರ್ಚೆ ನಡೆಸಿದೆ. ಪ್ರಭಾವಿಗಳ ವಿರೋಧ ಕಟ್ಟಿಕೊಳ್ಳುವ ಉಸಾಬರಿಯೇ ಬೇಡ. ಒತ್ತಡಕ್ಕೆ ಮಣಿದು ವಿವಿಯನ್ನು ಒತ್ತೆ ಇಡುವುದೂ ಬೇಡ. ಈ ಬಾರಿ ಯಾರಿಗೂ
ಗೌರವ ಡಾಕ್ಟರೇಟ್ ನೀಡುವುದೇ ಬೇಡ ಎನ್ನುವ ನಿರ್ಧಾರಕ್ಕೆ ಬಂದಿದೆ.
ಮುಂದಿನ ವರ್ಷದಿಂದ ವಿವಿ ಗೌರವ ಡಾಕ್ಟರೇಟ್ ಪದವಿಗೆ ರಾಜ್ಯಪಾಲರು ವ್ಯಕ್ತಿಗಳನ್ನು ಆಯ್ಕೆ ಮಾಡುತ್ತಾರೆ. ಈ ಬಾರಿ ನಾವು ಸುಮ್ಮನಿದ್ದರೆ ಎಲ್ಲವೂ ಸರಿಹೋಗುತ್ತದೆ ಎನ್ನುವ ನಿರ್ಧಾರ ಕೈಗೊಂಡಿದ್ದಾರೆ. ಇದರಿಂದಾಗಿ ಈ ಬಾರಿ ಗೌರವ
ಡಾಕ್ಟರೇಟ್ ಪದವಿ ಪಡೆದುಕೊಳ್ಳಬೇಕು ಎನ್ನುವ ಪ್ರಯತ್ನವನ್ನು ಪರೋಕ್ಷವಾಗಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications