ಸಿಎಂ ಸಿದ್ದರಾಮಯ್ಯ ಅವರಿಗೆ ಹೊಸ ಬಂಗಲೆ ನಿರ್ಮಾಣ!
ಬೆಂಗಳೂರು, ನ.03: ತಾಜ್ ವೆಸ್ಟ್ ಎಂಡ್ ಹೋಟೆಲ್ ಪಕ್ಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಾಗಿ ಹೊಸ ಬಂಗಲೆ ನಿರ್ಮಾಣ ಮಾಡುವ ಉದ್ದೇಶವಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಆದರೆ, ಈ ಯೋಜನೆ ಇನ್ನು ಚರ್ಚೆಯ ಹಂತದಲ್ಲಿದೆ ಎಂದಿದ್ದಾರೆ.
ಸಚಿವರ ನಾಲ್ಕು ವಸತಿಗೃಹಗಳ ಜಾಗದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಮತ್ತು ಗೃಹ ಕಚೇರಿ ನಿರ್ಮಾಣ ಮಾಡುವ ಉದ್ದೇಶ ಇದೆ ಎಂದು ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
'ಸಿಐಡಿ ಕಚೇರಿ ಇರುವ ಕಾರ್ಲಟನ್ ಹೌಸ್ ಪಾರಂಪರಿಕ ಕಟ್ಟಡದ ಬಳಿ ಸಿಎಂಗಾಗಿ ಮನೆ ನಿರ್ಮಾಣದ ಬಗ್ಗೆ ಮಾತುಕತೆ ನಡೆಸಲಾಗಿತ್ತು. ಆದರೆ, ಪಾರಂಪರಿಕ ಕಟ್ಟಡದ ಬಳಿ ಮನೆ ನಿರ್ಮಿಸುವುದು ಬೇಡ ಎನ್ನುವ ತೀರ್ಮಾನಕ್ಕೆ ಬರಲಾಗಿದೆ' ಎಂದು ಸಚಿವರು ತಿಳಿಸಿದರು.

ಎಲ್ಲಾ ಜನಪ್ರತಿನಿಧಿಗಳಿಗೂ ಮನೆ: 33 ಸಚಿವರು, ವಿಧಾನಸಭಾಧ್ಯಕ್ಷರು, ಸಭಾಪತಿ ಮತ್ತು ಉಭಯ ಸದನಗಳ ಪ್ರತಿಪಕ್ಷ ನಾಯಕರಿಗೆ ವಸತಿ ಗೃಹಗಳನ್ನು ನಿರ್ಮಿಸುವ ಉದ್ದೇಶ ಇದೆ. ಎಷ್ಟು ಸಚಿವರಿಗೆ ಮನೆಗಳ ಕೊರತೆ ಇದೆ ಎಂಬುದನ್ನು ಪರಿಶೀಲಿಸಿ, ನಂತರ ಈ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಇದಕ್ಕೂ ಜಾಗ ಹುಡುಕುತ್ತಿದ್ದೇವೆ' ಎಂದು ಮಹದೇವಪ್ಪ ಹೇಳಿದರು.
ನಗರದ ಆನಂದರಾವ್ ವೃತ್ತದ ಸಮೀಪ ಇರುವ 7 ಎಕರೆ ಜಾಗದಲ್ಲಿ ದೆಹಲಿಯ ವಿಜ್ಞಾನ ಭವನದ ಮಾದರಿಯಲ್ಲಿ ವಿವಿಧ ಇಲಾಖೆಗಳ ಕಚೇರಿಗಳಿಗೆ ಕಟ್ಟಡ ನಿರ್ಮಿಸಲಾಗುವುದು. ಸಭಾಂಗಣ ನಿರ್ಮಿಸುವ ಉದ್ದೇಶವೂ ಇದೆ. ಇದಕ್ಕೆ 150 ಕೋಟಿ ರು ವೆಚ್ಚವಾಗುವ ಸಾಧ್ಯತೆ ಇದೆ ಎಂದರು. (ಒನ್ ಇಂಡಿಯಾ ಸುದ್ದಿ)
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications