ಮೇ ತಿಂಗಳಿನಿಂದ ಸಬ್ ಅರ್ಬನ್ ರೈಲು ಕಾಮಗಾರಿ ಶುರು?
ಸಬ್ ಅರ್ಬನ್ ರೈಲು ಯೋಜನೆಗೆ ರಾಜ್ಯ ಸರ್ಕಾರವು ಈಗಾಗಲೇ ಶೇ. 50 ರ ಯೋಜನಾ ವೆಚ್ಚವನ್ನು ನೀಡಲು ಸಮ್ಮತಿಸಿದ್ದು, ಮೇ ತಿಂಗಳಿನಲ್ಲಿ ಸಬ್ ಅರ್ಬನ್ ರೈಲು ಯೋಜನೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು
ಬೆಂಗಳೂರು, ಮಾರ್ಚ್ 26: ಸಬ್ ಅರ್ಬನ್ ರೈಲು ಯೋಜನೆಗೆ ರಾಜ್ಯ ಸರ್ಕಾರವು ಈಗಾಗಲೇ ಶೇ. 50 ರ ಯೋಜನಾ ವೆಚ್ಚವನ್ನು ನೀಡಲು ಸಮ್ಮತಿಸಿದ್ದು, ಮೇ ತಿಂಗಳಿನಲ್ಲಿ ಸಬ್ ಅರ್ಬನ್ ರೈಲು ಯೋಜನೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಯಮ್ಯ ಹೇಳಿದರು.
ಬಹುವರ್ಷಗಳ ಬೇಡಿಕೆಯಾದ ಹಾಸನ-ಬೆಂಗಳೂರು ರೈಲು ಮಾರ್ಗಕ್ಕೆ ಭಾನುವಾರದಂದು ಹಸಿರು ನಿಶಾನೆ ತೋರಿಸಿದ ಬೆನ್ನಲ್ಲೇ ಮಾತನಾಡಿದ ಸಿದ್ದರಾಮಯ್ಯ, ಬಹುದಿನಗಳ ಬೇಡಿಕೆಯ ಸಬ್ ಅರ್ಬನ್ ರೈಲಿಗೆ ಮೇ ತಿಂಗಳಲ್ಲಿ ಶಂಕುಸ್ಥಾಪನೆ ನೆರವೇರಿಸಲು ರೈಲ್ವೆ ಸಚಿವರು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಿದರು. ಇದೇ ವೇಳೆ ಹಾಸನ-ಮಂಗಳೂರು ನಡುವಿನ ರೈಲು ಮಾರ್ಗವನ್ನು ಬ್ರಾಡ್ಗೇಜ್ಗೆ ಮೇಲ್ದರ್ಜೆಗೇರಿಸುವಂತೆ ಮನವಿ ಮಾಡಿದರು.[ಹಾಸನ- ಬೆಂಗಳೂರು ರೈಲಿನ ವೇಳಾಪಟ್ಟಿ]
ರಾಜ್ಯ ಸರ್ಕಾರ ಸಬ್ ಅರ್ಬನ್ ರೈಲಿಗೆ ಈಗಾಗಲೇ ಶೇ. 50 ರ ಯೋಜನಾ ವೆಚ್ಚವನ್ನು ನೀಡಲು ಸಮ್ಮತಿಸಿದ್ದು, ಅತಿ ಶೀಘ್ರವೇ ಸಬ್ಅರ್ಬನ್ ರೈಲು ಯೋಜನೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರ ಶೇ. 50 ರಷ್ಟು ಹಣ ನೀಡುವುದು ಸ್ವಾಗತಾರ್ಹ, ಬೆಂಗಳೂರು ಜನರ ಬಹುದಿನಗಳ ಬೇಡಿಕೆಯಾದ ಸಬ್ ಅರ್ಬನ್ ರೈಲು ಯೋಜನೆಗೆ ಬೇಕಾದ ಅಗತ್ಯ ನೆರವು ಒದಗಿಸುವುದಾಗಿ ರೈಲ್ವೆ ಸಚಿವ ಸುರೇಶ್ ಪ್ರಭು ಪ್ರತಿಕ್ರಿಯಿಸಿದರು.
Woohoo, #ChukuBukuBeku is a success. pic.twitter.com/zf74sA0tbu
— Abhishek Upadhya (@_logik) February 19, 2017
2018ರ ಫೆಬ್ರವರಿಯಲ್ಲಿ ಗೊಮ್ಮಟೇಶ್ವರಮೂರ್ತಿಯ ಮಹಾಮಸ್ತಕಾಭಿಷೇಕ ನಡೆಯಲಿದ್ದು, ದೇಶದ ವಿವಿಧೆಡೆಯಿಂದ ಲಕ್ಷಾಂತರ ಮಂದಿ ಯಾತ್ರಾರ್ಥಿಗಳು ಆಗಮಿಸುವ ಹಿನ್ನೆಲೆಯಲ್ಲಿ ವಿಶೇಷ ರೈಲು ಓಡಿಸುವಂತೆ ಇದೇ ವೇಳೆ ಅವರು ಮನವಿ ಮಾಡಿದರು.

ಬೇರೆ ನಗರಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ
ಬೆಂಗಳೂರಿನಲ್ಲಿನ ರೈಲು ನಿಲ್ದಾಣಗಳ ಮೂಲಕ ಬೇರೆ ನಗರಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದ್ದು, ಒಟ್ಟು 204 ಕಿ.ಮೀ. ಉದ್ದದ 15 ಮಾರ್ಗಗಳು ಇದರಲ್ಲಿ ಬರಲಿವೆ. ಯೋಜನೆಯ ವೆಚ್ಚ 8.5 ಸಾವಿರ ಕೋಟಿ ರೂ. ಎಂದು ಅಂದಾಜಿಸಲಾಗಿದೆ.ರಾಜ್ಯ ಭೂ ಸಾರಿಗೆ ನಿರ್ದೇಶನಾಲಯದ ಪ್ರಸ್ತಾವನೆಯಂತೆ ಯೋಜನೆಗೆ ರಾಜ್ಯ ಸರ್ಕಾರ 2013ರಲ್ಲೇ ಅನುಮೋದನೆ ನೀಡಲಾಗಿದೆ. ಪ್ರಸ್ತುತ ಯೋಜನೆಯಂತೆ ಮಂಡ್ಯ, ತುಮಕೂರಿಗೂ ರೈಲು ಸಂಪರ್ಕ ಸಿಗಲಿದೆ

ಮನವಿ ಸಲ್ಲಿಸಿದ್ದ ಸಚಿವ ಅನಂತ ಕುಮಾರ್
ಬೆಂಗಳೂರಿನ ನಗರಾಭಿವೃದ್ಧಿಯ ಅಧ್ಯಯನ ವರದಿ ಪಡೆದು, ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಕೇಂದ್ರ ಸರ್ಕಾರದ ಜತೆ ಒಪ್ಪಂದ ಕೇಂದ್ರ ಸರ್ಕಾರದ ಜತೆ ಒಪ್ಪಂದ ಮಾಡಿಕೊಂಡಿರುವ ಕರ್ನಾಟಕ ಸರ್ಕಾರ ಪ್ರಸ್ತುತ ರಾಮನಗರ ಹಾಗೂ ವೈಟ್ ಫೀಲ್ಡ್ ಮಾರ್ಗದ ಯೋಜನೆಗೆ ಶೇ 80ರಷ್ಟು ಯೋಜನಾ ವೆಚ್ಚವನ್ನು ಭರಿಸುತ್ತಿದೆ. ರಾಜ್ಯದಲ್ಲಿ ಇನ್ನೂ 13ಕ್ಕೂ ಅಧಿಕ ವಿದ್ಯುತ್ ಚಾಲಿತ ಮೆಮು ರೈಲಿಗಾಗಿ ಮನವಿ ಸಲ್ಲಿಸಲಾಗಿದೆ.

ನೈಋತ್ಯ ರೈಲ್ವೆ ಬಿಡುಗಡೆ
* ಬೆಳಗ್ಗೆ 8.45ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ(KRS)ದಿಂದ ಹೊರಟು 9.40ಕ್ಕೆ ವೈಟ್ಫೀಲ್ಡ್ ತಲುಪುತ್ತದೆ.
* ವೈಟ್ಫೀಲ್ಡ್ನಿಂದ 10.30ಕ್ಕೆ ಹೊರಡುವ ರೈಲು 11.10ಕ್ಕೆ ಕೆಎಸ್ಆರ್ ರೈಲು ನಿಲ್ದಾಣಕ್ಕೆ ತಲುಪಲಿದೆ.
* ಎರಡನೇ ರೈಲು 11.20 am ಕ್ಕೆ ಕೆಎಸ್ ಆರ್ ತೊರೆದು 1.45pm ಗೆ ಕುಪ್ಪಂ ಸೇರಲಿದೆ. * 2.45 pmಗೆ ಕುಪ್ಪಂ ಬಿಟ್ಟು 5.20 pm.ಕ್ಕೆ ಕೆಎಸ್ ಆರ್ ಸೇರಲಿದೆ.

ತಪ್ಪಲಿದೆ ಟ್ರಾಫಿಕ್ ಸಮಸ್ಯೆ
ಬೈಯಪ್ಪನಹಳ್ಳಿ-ವೈಟ್ಫೀಲ್ಡ್ ನಡುವೆ ಫೆಬ್ರವರಿ ವೇಳೆಗೆ ಮೆಟ್ರೋ ಮಾರ್ಗ ವಿಸ್ತರಣಾ ಕಾಮಗಾರಿ ಆರಂಭವಾಗಲಿದೆ. ಇದಕ್ಕಾಗಿ ಬಿಎಂಆರ್ಸಿಎಲ್ ತಯಾರಿ ನಡೆಸಿದೆ. ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ರಸ್ತೆಗಳನ್ನು ವಿಸ್ತರಿಸುವ ಕಾಮಗಾರಿಯೂ ನಡೆಯಲಿದೆ. ಹೀಗಾಗಿ ಈ ಭಾಗದಲ್ಲಿ ವಾಹನದಟ್ಟಣೆ ಸಮಸ್ಯೆ ಹೆಚ್ಚಾಗಲಿದೆ. ಈ ಸಮಸ್ಯೆಯಿಂದ ಪಾರಾಗಲು ಈ ಭಾಗದ ಜನರಿಗೆ ರಾಮನಗರ-ಕುಪ್ಪಂ ಮೆಮು ರೈಲು ಅನುಕೂಲಕರ. ಸಬ್ ಅರ್ಬನ್ ಬಂದ ಮೇಲೆ ಟ್ರಾಫಿಕ್ ಸಮಸ್ಯೆ ಇಲ್ಲವಾಗುತ್ತದೆ.
|
ಸಬ್ ಅರ್ಬನ್ ಗಾಗಿ ಹೋರಾಟ
ನಾಗರಿಕರ ಸಂಘಟನೆಗಳು, ಸರ್ಕಾರೇತರ ಸಂಸ್ಥೆಗಳು #Chukubukkubeku ಎಂಬ ಅಭಿಯಾನ ಆರಂಭಿಸಿ, ಹೋರಾಟ ನಡೆಸುತ್ತಾ ಬಂದಿದ್ದಾರೆ. ಸಬ್ ಅರ್ಬನ್ ರೈಲಿನ ಬಗ್ಗೆ ರಾಜ್ಯ ಬಜೆಟ್ ನಲ್ಲೂ ಪ್ರಸ್ತಾವನೆ ಕೇಳಿ ಬಂದಿತ್ತು. ಈಗ ಬಹುತೇಕ ಕಾಮಗಾರಿ ಸಿದ್ಧತೆ ನಡೆದಿದೆ. ಇದಕ್ಕಾಗಿ ಪ್ರತ್ಯೇಕ ಹಳಿ ಅಗತ್ಯವಿಲ್ಲ ಎಂಬುದು ತಜ್ಞರ ಅಭಿಪ್ರಾಯ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications