ಎಚ್ ವೈ ಮೇಟಿ ರಾಸಲೀಲೆ ಪ್ರಕರಣ ಸಿಐಡಿ ತನಿಖೆಗೆ
ಹುಲ್ಲಪ್ಪ ಯಮುನಪ್ಪ ಮೇಟಿ ಅವರ ರಾಸಲೀಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ. ಅಬಕಾರಿ ಸಚಿವ ಎಚ್ ವೈ ಮೇಟಿ ಅವರು ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗೀಕರಿಸಲಾಗಿದೆ.
ಬೆಂಗಳೂರು, ಡಿಸೆಂಬರ್ 14: ಹುಲ್ಲಪ್ಪ ಯಮುನಪ್ಪ ಮೇಟಿ ಅವರ ರಾಸಲೀಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ.
ಮೇಟಿ ರಾಜೀನಾಮೆ ನೀಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಅವರು, ವಿಡಿಯೋವನ್ನು ನಾನು ಮೊದಲೇ ನೋಡಿದ್ದೆ ಎಂಬುದು ಸುಳ್ಳು, ನಾನು ವಿಡಿಯೋ ನೋಡಿಲ್ಲ. ಮೇಟಿಯವರು ಸ್ವಯಂಪ್ರೇರಿತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ಅಂಗೀಕರಿಸುವಂತೆ ರಾಜ್ಯಪಾಲರಿಗೆ ಕಳುಹಿಸಿದ್ದೇನೆ ಎಂದು ತಿಳಿಸಿದರು.[ಈ ಪ್ರಕರಣದಲ್ಲಿ ನನ್ನದ್ದೇನೂ ತಪ್ಪಿಲ್ಲ : ಎಚ್ ವೈ ಮೇಟಿ]
ಅಬಕಾರಿ ಸಚಿವ ಎಚ್ ವೈ ಮೇಟಿ ಅವರ ರಾಜೀನಾಮೆಯನ್ನು ಸಿದ್ದರಾಮಯ್ಯ ಅವರ ನಂತರ ರಾಜ್ಯಪಾಲ ವಜುಭಾಯಿ ವಾಲ ಕೂಡಾ ಅಂಗೀಕರಿಸಿದ್ದಾರೆ.[ವಿಡಿಯೋ ಬಹಿರಂಗ: ಸಚಿವ ಎಚ್ ವೈ ಮೇಟಿ ರಾಜೀನಾಮೆ]
ಮೇಟಿ ರಾಜೀನಾಮೆ ನೀಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಅವರು, ವಿಡಿಯೋವನ್ನು ನಾನು ಮೊದಲೇ ನೋಡಿದ್ದೆ ಎಂಬುದು ಸುಳ್ಳು, ನಾನು ವಿಡಿಯೋ ನೋಡಿಲ್ಲ. ಮೇಟಿಯವರು ಸ್ವಯಂಪ್ರೇರಿತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. [ರಾಜೀನಾಮೆಯನ್ನು ಅಂಗೀಕರಿಸುವಂತೆ ರಾಜ್ಯಪಾಲರಿಗೆ ಕಳುಹಿಸಿದ್ದೇನೆ ಎಂದು ತಿಳಿಸಿದರು. [ಮೇಟಿ ಸಿಡಿ ಆಯ್ತು, ಇನ್ನೆರಡು ಸಿಡಿ ಯಾವ ಶಾಸಕರದ್ದು ?]
ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರ ನಿಮಗೆ ಗೊತ್ತಿತ್ತು ಎಂದು ಕೇಳಿದ್ದಕ್ಕೆ, ಈ ಸುದ್ದಿ ಸಂಪೂರ್ಣ ಸುಳ್ಳು. ಯಾವ ವಿಡಿಯೋವನ್ನು ನಾನು ನೋಡಿಲ್ಲ. ಮೊನ್ನೆಯೇ ನಾನು ವಿಡಿಯೋ ಬಿಡುಗಡೆಯಾದರೆ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದೆ ಎಂದು ತಿಳಿಸಿದರು.