Bengaluru Opposition Meet: ನಾಳೆ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ, ಸಿದ್ಧತೆ ಪರಿಶೀಲಿಸಿದ ಸಿದ್ದರಾಮಯ್ಯ, ಪರಮೇಶ್ವರ್
ಬೆಂಗಳೂರು, ಜುಲೈ. 16: ಬಿಹಾರದ ಪಾಟ್ನಾದಲ್ಲಿ ನಡೆದ ವಿಪಕ್ಷ ನಾಯಕರ ಮೊದಲ ಸಭೆಯ ಯಶಸ್ಸಿನ ಬೆನ್ನಲ್ಲೇ ಬೆಂಗಳೂರಿನಲ್ಲಿ ಎರಡನೇ ಸಭೆ ನಡೆಸಲಾಗುತ್ತಿದೆ. ಜುಲೈ 17 ರಂದು ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಪ್ರಾರಂಭವಾಗಲಿರುವ ಸಮಾವೇಶದ ಸಿದ್ಧತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ರಾಜ್ಯ ಗೃಹ ಸಚಿವ ಪರಮೇಶ್ವರ್ ಪರಿಶೀಲಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ ಎರಡನೇ ಏಕತಾ ಸಭೆಯಲ್ಲಿ ಭಾಗವಹಿಸುವಂತೆ ವಿಪಕ್ಷಗಳ ಉನ್ನತ ನಾಯಕರನ್ನು ಆಹ್ವಾನಿಸಿದ್ದಾರೆ. ಇದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೂನ್ 23 ರಂದು ಪಾಟ್ನಾದಲ್ಲಿ ನಡೆಸಿದ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದನ್ನು ವಿರೋಧ ಪಕ್ಷದ ನಾಯಕರಿಗೆ ಬರೆದ ಪತ್ರದಲ್ಲಿ ನೆನಪಿಸಿದ್ದಾರೆ.

ನಮ್ಮ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಧಕ್ಕೆ ತರುವ ಹಲವಾರು ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಲು ಸರ್ವಾನುಮತದ ಒಪ್ಪಂದಕ್ಕೆ ಬಂದಿದ್ದರಿಂದ ಸಭೆಯು ಉತ್ತಮ ಯಶಸ್ಸನ್ನು ಕಂಡಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಮ್ಮ ಆಹ್ವಾನ ಪತ್ರಿಕೆಯಲ್ಲಿ ತಿಳಿಸಿದ್ದಾರೆ.
ಜುಲೈ 17 ರಿಂದ 18 ರವರೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆದಿರುವ ಎರಡನೇ ಪ್ರತಿಪಕ್ಷದ ಏಕತೆಯ ಸಭೆಯಲ್ಲಿ ಕನಿಷ್ಠ 24 ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಮೂಲಗಳ ಪ್ರಕಾರ, 2024 ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ವಿರುದ್ಧದ ಒಗ್ಗಟ್ಟನ್ನು ತೋರಿಸಿರುವ ವಿರೋಧ ಪಕ್ಷಗಳ ಪ್ರಯತ್ನಗಳಿಗೆ ಎಂಟು ಹೊಸ ಪಕ್ಷಗಳು ತಮ್ಮ ಬೆಂಬಲವನ್ನು ನೀಡಿವೆ.
ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಸೋಮವಾರದಿಂದ ನಡೆಯಲಿರುವ ಕೇಂದ್ರದ ವಿರೋಧ ಪಕ್ಷಗಳ ನಾಯಕರ ಸಭೆಯ ಪೂರ್ವ ಸಿದ್ದತೆಗಳನ್ನು ಪರಿಶೀಲಿಸಿದೆ.
— Siddaramaiah (@siddaramaiah) July 15, 2023
ಕರ್ನಾಟಕ ಉಸ್ತುವಾರಿಗಳಾದ @rssurjewala, ಗೃಹ ಸಚಿವರಾದ @DrParameshwara ಅವರು ಸೇರಿದಂತೆ ಹಲವು ನಾಯಕರು ಈ ವೇಳೆ ನನ್ನೊಂದಿಗಿದ್ದರು. pic.twitter.com/iRWUgL667Y
"ಕಳೆದ ತಿಂಗಳು ಬಿಹಾರದ ಪಾಟ್ನಾದಲ್ಲಿ ನಡೆದ ಬೃಹತ್ ಪ್ರತಿಪಕ್ಷಗಳ ಸಭೆಯ ನಂತರ, ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಲಿರುವ ಎರಡನೇ ಸಭೆಯಲ್ಲಿ 24 ರಾಜಕೀಯ ಪಕ್ಷಗಳ ಉನ್ನತ ನಾಯಕರು ಭಾಗವಹಿಸಲಿದ್ದಾರೆ" ಎಂದು ಮೂಲಗಳು ತಿಳಿಸಿವೆ.

"ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK), ಕೊಂಗು ದೇಸ ಮಕ್ಕಳ್ ಕಚ್ಚಿ (KDMK), ವಿದುತಲೈ ಚಿರುತೈಗಲ್ ಕಚ್ಚಿ (VCK), ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP), ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML), ಕೇರಳ ಕಾಂಗ್ರೆಸ್ (ಜೋಸೆಫ್), ಮತ್ತು ಕೇರಳ ಕಾಂಗ್ರೆಸ್ (ಮಣಿ) ಸಭೆ ಸೇರಲಿರುವ ಹೊಸ ರಾಜಕೀಯ ಪಕ್ಷಗಳಲ್ಲಿ ಸೇರಿವೆ" ಎಂದು ಮೂಲಗಳು ಮಾಹಿತಿ ನೀಡಿವೆ.
"ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ" ಎಂದು ಹೇಳಿದ್ದಾರೆ. ವಿಶೇಷವೆಂದರೇ, ವಿಪಕ್ಷಗಳಿಗೆ ಬೆಂಬಲ ನೀಡಲು ಸಿದ್ಧವಾಗಿರುವ ಕೆಡಿಎಂಕೆ ಮತ್ತು ಎಂಡಿಎಂಕೆ ಈ ಹಿಂದೆ 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಮಿತ್ರಪಕ್ಷಗಳಾಗಿದ್ದವು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications