ಹ್ಯಾರೀಸ್ ಪುತ್ರನ ಹಲ್ಲೆ ಪ್ರಕರಣ ಬಗ್ಗೆ ಸಿದ್ದರಾಮಯ್ಯರಿಂದ ಟ್ವೀಟ್
ಬೆಂಗಳೂರು, ಫೆಬ್ರವರಿ 18: ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ ಹ್ಯಾರೀಸ್ ಅವರ ಪುತ್ರ, ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ನಲಪಾಡ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಆರೋಪಿಗಳ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಬೆಂಗಳೂರು ನಿವಾಸಿ ಇತಿಹಾಸಗಾರ ರಾಮಚಂದ್ರ ಗುಹಾ ಅವರು, ಯುಬಿ ಸಿಟಿಯ ಪಬ್ ನಲ್ಲಿ ನಡೆದ ಗಲಾಟೆ ಹಾಗೂ ಹ್ಯಾರೀಸ್ ಪುತ್ರನ ವಿರುದ್ಧ ಕಾನೂನು ಕ್ರಮದ ಬಗ್ಗೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮಾಡಿದ್ದರು. ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು, ಆರೋಪಿಗಳು ಯಾರೇ ಆಗಿರಲಿ, ಕಾನೂನಿಗೆ ತಲೆಬಾಗಲೇಬೇಕು ಎಂದಿದ್ದಾರೆ.

ವಿದ್ವತ್ ಎಂಬ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ನಲಪಾಡ್ ಅವರು ಆರೋಪಿ ನಂಬರ್ 01 ಆಗಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
Offenders should be punished to the full extent of law regardless of who they are. No less, no more.@CPBlr will take action as per law and bring the guilty to book. https://t.co/H0Km8zauVz
— Siddaramaiah (@siddaramaiah) February 18, 2018
ಈ ಹಿನ್ನೆಲೆಯಲ್ಲಿ ಮೊಹಮ್ಮದ್ ನಲಪಾಡ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಪಕ್ಷದ ಯಾವುದೇ ಚಟುವಟಿಕೆಯಲ್ಲಿ ಮೊಹಮ್ಮದ್ ಅವರು ಪಾಲ್ಗೊಳ್ಳುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರು ನೀಡಿದ ಆದೇಶದಲ್ಲಿ ಹೇಳಲಾಗಿದೆ.
ಡಾಲರ್ಸ್ ಕಾಲೋನಿ ನಿವಾಸಿ, ಉದ್ಯಮಿ ಲೋಕನಾಥ್ ಅವರ ಪುತ್ರ ವಿದ್ವತ್ ಅವರು ಇತ್ತೀಚೆಗೆ ಸಿಂಗಪುರದಲ್ಲಿ ಪದವಿ ಪಡೆದು, ಬೆಂಗಳೂರಿಗೆ ವಾಪಸ್ ಆಗಿದ್ದರು. ಯುಬಿ ಸಿಟಿಯ ಫರ್ಜ್ ಕೆಫೆಯಲ್ಲಿ ಸ್ನೇಹಿತರ ಜತೆ ಇದ್ದ ವಿದ್ವತ್ ಹಾಗೂ ಹ್ಯಾರೀಸ್ ಪುತ್ರ ಮೊಹಮ್ಮದ್ ಮತ್ತು ಸಂಗಡಿಗರಿಗೆ ಜಗಳವಾಗಿದೆ. ಮೊಹಮ್ಮದ್ ಕಡೆಯವರು ವಿದ್ವತ್ ಹಾಗೂ ಅವರ ಸೋದರನಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಕ್ರಮ ಜರುಗಿಸುವಂತೆ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications