ಮೊದಲ ಬಾರಿಗೆ ಶಾಸಕರಾದವರು ಸಂವಿಧಾನದ ಮೂಲ ತತ್ವಗಳನ್ನು ಅರ್ಥಮಾಡಿಕೊಳ್ಳಬೇಕು: ಸಿದ್ದರಾಮಯ್ಯ
ಬೆಂಗಳೂರು, ಜೂನ್. 27: ಮೊದಲ ಬಾರಿಗೆ ಶಾಸಕರು ಸಂವಿಧಾನವನ್ನು ಓದಬೇಕು ಮತ್ತು ಅದರ ಮೂಲ ತತ್ವಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಂವಿಧಾನವನ್ನು ತಿಳಿಯದವರು ಉತ್ತಮ ಶಾಸಕರು ಅಥವಾ ಸಂಸದರಾಗಲು ಸಾಧ್ಯವಿಲ್ಲ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.
"ನಾವು ಸಂವಿಧಾನವನ್ನು ಚೆನ್ನಾಗಿ ಅರ್ಥಮಾಡಿಕೊಂಡರೆ, ನಾವು ಜನರ ಸಮಸ್ಯೆಯನ್ನು ಶಾಸಕಾಂಗದ ಮುಂದೆ ಇಡಬಹುದು. ಸಂವಿಧಾನದ ಆಶಯಕ್ಕೆ ವಿರುದ್ಧವಾದ ಕಾನೂನುಗಳನ್ನು ಜಾರಿಗೆ ತರಲು ಅವಕಾಶವಿಲ್ಲ" ಎಂದು ಪ್ರಥಮ ಬಾರಿಗೆ ಚುನಾವಣೆಯಲ್ಲಿ ಗೆದ್ದು 16 ನೇ ಕರ್ನಾಟಕ ವಿಧಾನಸಭೆಗೆ ಪ್ರವೇಶಿಸಿರುವ 70 ಶಾಸಕರಿಗೆ ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿದ ನಂತರ ಸಿಎಂ ಸಿದ್ದರಾಮಯ್ಯ ಕಿವಿ ಮಾತು ಹೇಳಿದ್ದಾರೆ.

"ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿಯನ್ನು ಪ್ರತಿಯೊಬ್ಬ ಶಾಸಕ ಬೆಳೆಸಿಕೊಳ್ಳಬೇಕು. ಯಾರು ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳುವುದಿಲ್ಲವೋ ಅವರು ಉತ್ತಮ ಶಾಸಕರಾಗಲು, ಸಂಸದರಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲು ಸಂವಿಧಾನವನ್ನು ಓದಿ ಅದರ ಮೂಲಭೂತ ತತ್ವ ಮತ್ತು ಉದ್ದೇಶಗಳನ್ನು ಅರಿತುಕೊಳ್ಳಬೇಕು" ಎಂದು ನೂತನ ಶಾಸಕರಿಗೆ ತಿಳಿಸಿದ್ದಾರೆ.
"ಸಂವಿಧಾನವಿಲ್ಲದಿದ್ದರೆ ನಾನು, ನನ್ನಂಥವರು ಶಾಸಕರಾಗಲು, ಮುಖ್ಯಮಂತ್ರಿ ಆಗಲು ಡಾ.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಕಾರಣ. ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ, ನಾನು ಸಹ ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ದೇಶದ ಪ್ರತಿಯೊಬ್ಬರು ಸಂವಿಧಾನದ ಮೌಲ್ಯ ಅರಿತುಕೊಳ್ಳಬೇಕು" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

" ತಯಾರಿ, ಸಂಶೋಧನೆ, ವಿಷಯ ಪರಿಣತಿ, ಜನರ ಭಾಷೆ ಮತ್ತು ಜನಪರ ಮನೋಭಾವವು ಪ್ರತಿಯೊಬ್ಬ ಶಾಸಕನ ಅಗತ್ಯವಾಗಿದೆ. ಜನರ ಸಮಸ್ಯೆಗೆ ಸ್ಪಂದಿಸದವರು ಆಕಸ್ಮಿಕವಾಗಿ ಒಮ್ಮೆ ಮಾತ್ರ ಗೆಲ್ಲಬಹುದು, ಹಣ ಮತ್ತು ದುರಹಂಕಾರದ ಮೇಲೆ ರಾಜಕೀಯ ಮಾಡಲು ಸಾಧ್ಯವಿಲ್ಲ. ಒಮ್ಮೆಯಾದರೂ ಶಾಸಕರಾಗಬೇಕು ಮತ್ತು ವಿಧಾನಸೌಧಕ್ಕೆ ಬರಬೇಕು ಎಂಬ ಹಂಬಲ ಅನೇಕರಿಗೆ ಇದೆ. ಆದರೆ, ಅವರಲ್ಲಿ ಹಲವರು ವಿಧಾನಸಭೆಯ ಅಧಿವೇಶನದಲ್ಲಿ ಗೈರುಹಾಜರಾಗುತ್ತಾರೆ" ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮವಾರದಿಂದ ಆರಂಭವಾಗಿರುವ ಶಿಬಿರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಕೃಷ್ಣ ಬೈರೇಗೌಡ , ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಜೊತೆಗೆ ಶಾಸಕರು ಸಂವಾದ ನಡೆಸಲಿದ್ದಾರೆ. ಮೂರು ದಿನಗಳ ಕಾಲದ ಶಿಬಿರದಲ್ಲಿ ಆರೋಗ್ಯ ಹಾಗೂ ಬೌದ್ಧಿಕ ತರಬೇತಿ ಜೊತೆಗೆ ಹಲವು ವಿಚಾರಗಳು ಚರ್ಚೆಯಾಗಲಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications