Get Updates
Get notified of breaking news, exclusive insights, and must-see stories!

ಮೊದಲ ಬಾರಿಗೆ ಶಾಸಕರಾದವರು ಸಂವಿಧಾನದ ಮೂಲ ತತ್ವಗಳನ್ನು ಅರ್ಥಮಾಡಿಕೊಳ್ಳಬೇಕು: ಸಿದ್ದರಾಮಯ್ಯ

ಬೆಂಗಳೂರು, ಜೂನ್. 27: ಮೊದಲ ಬಾರಿಗೆ ಶಾಸಕರು ಸಂವಿಧಾನವನ್ನು ಓದಬೇಕು ಮತ್ತು ಅದರ ಮೂಲ ತತ್ವಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಂವಿಧಾನವನ್ನು ತಿಳಿಯದವರು ಉತ್ತಮ ಶಾಸಕರು ಅಥವಾ ಸಂಸದರಾಗಲು ಸಾಧ್ಯವಿಲ್ಲ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.

"ನಾವು ಸಂವಿಧಾನವನ್ನು ಚೆನ್ನಾಗಿ ಅರ್ಥಮಾಡಿಕೊಂಡರೆ, ನಾವು ಜನರ ಸಮಸ್ಯೆಯನ್ನು ಶಾಸಕಾಂಗದ ಮುಂದೆ ಇಡಬಹುದು. ಸಂವಿಧಾನದ ಆಶಯಕ್ಕೆ ವಿರುದ್ಧವಾದ ಕಾನೂನುಗಳನ್ನು ಜಾರಿಗೆ ತರಲು ಅವಕಾಶವಿಲ್ಲ" ಎಂದು ಪ್ರಥಮ ಬಾರಿಗೆ ಚುನಾವಣೆಯಲ್ಲಿ ಗೆದ್ದು 16 ನೇ ಕರ್ನಾಟಕ ವಿಧಾನಸಭೆಗೆ ಪ್ರವೇಶಿಸಿರುವ 70 ಶಾಸಕರಿಗೆ ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿದ ನಂತರ ಸಿಎಂ ಸಿದ್ದರಾಮಯ್ಯ ಕಿವಿ ಮಾತು ಹೇಳಿದ್ದಾರೆ.

CM Siddaramaiah urges first time legislators to read the Constitution

"ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿಯನ್ನು ಪ್ರತಿಯೊಬ್ಬ ಶಾಸಕ ಬೆಳೆಸಿಕೊಳ್ಳಬೇಕು. ಯಾರು ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳುವುದಿಲ್ಲವೋ ಅವರು ಉತ್ತಮ ಶಾಸಕರಾಗಲು, ಸಂಸದರಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲು ಸಂವಿಧಾನವನ್ನು ಓದಿ ಅದರ ಮೂಲಭೂತ ತತ್ವ ಮತ್ತು ಉದ್ದೇಶಗಳನ್ನು ಅರಿತುಕೊಳ್ಳಬೇಕು" ಎಂದು ನೂತನ ಶಾಸಕರಿಗೆ ತಿಳಿಸಿದ್ದಾರೆ.

"ಸಂವಿಧಾನವಿಲ್ಲದಿದ್ದರೆ ನಾನು, ನನ್ನಂಥವರು ಶಾಸಕರಾಗಲು, ಮುಖ್ಯಮಂತ್ರಿ ಆಗಲು ಡಾ.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಕಾರಣ. ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ, ನಾನು ಸಹ ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ದೇಶದ ಪ್ರತಿಯೊಬ್ಬರು ಸಂವಿಧಾನದ ಮೌಲ್ಯ ಅರಿತುಕೊಳ್ಳಬೇಕು" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

CM Siddaramaiah urges first time legislators to read the Constitution

" ತಯಾರಿ, ಸಂಶೋಧನೆ, ವಿಷಯ ಪರಿಣತಿ, ಜನರ ಭಾಷೆ ಮತ್ತು ಜನಪರ ಮನೋಭಾವವು ಪ್ರತಿಯೊಬ್ಬ ಶಾಸಕನ ಅಗತ್ಯವಾಗಿದೆ. ಜನರ ಸಮಸ್ಯೆಗೆ ಸ್ಪಂದಿಸದವರು ಆಕಸ್ಮಿಕವಾಗಿ ಒಮ್ಮೆ ಮಾತ್ರ ಗೆಲ್ಲಬಹುದು, ಹಣ ಮತ್ತು ದುರಹಂಕಾರದ ಮೇಲೆ ರಾಜಕೀಯ ಮಾಡಲು ಸಾಧ್ಯವಿಲ್ಲ. ಒಮ್ಮೆಯಾದರೂ ಶಾಸಕರಾಗಬೇಕು ಮತ್ತು ವಿಧಾನಸೌಧಕ್ಕೆ ಬರಬೇಕು ಎಂಬ ಹಂಬಲ ಅನೇಕರಿಗೆ ಇದೆ. ಆದರೆ, ಅವರಲ್ಲಿ ಹಲವರು ವಿಧಾನಸಭೆಯ ಅಧಿವೇಶನದಲ್ಲಿ ಗೈರುಹಾಜರಾಗುತ್ತಾರೆ" ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೋಮವಾರದಿಂದ ಆರಂಭವಾಗಿರುವ ಶಿಬಿರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಕೃಷ್ಣ ಬೈರೇಗೌಡ , ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಜೊತೆಗೆ ಶಾಸಕರು ಸಂವಾದ ನಡೆಸಲಿದ್ದಾರೆ. ಮೂರು ದಿನಗಳ ಕಾಲದ ಶಿಬಿರದಲ್ಲಿ ಆರೋಗ್ಯ ಹಾಗೂ ಬೌದ್ಧಿಕ ತರಬೇತಿ ಜೊತೆಗೆ ಹಲವು ವಿಚಾರಗಳು ಚರ್ಚೆಯಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+