ಬಜೆಟ್ ಕುರಿತು ಮುಖ್ಯಮಂತ್ರಿ ಟ್ವೀಟ್ ನಲ್ಲೇನಿದೆ?
ಯಾವೆಲ್ಲ ವಸ್ತುಗಳ ಬೆಲೆ ಏರಿಕೆಯಾಗುತ್ತೆ, ಯಾರ್ಯಾರಿಗೆ ಲಾಭ, ಯಾರಿಗೆ ನಷ್ಟ, ಸಾಲ ಮನ್ನಾ ಆಗುತ್ತಾ... ಎಂಬೆಲ್ಲ ವಿಷಯಗಳು ಚರ್ಚೆಯಾಗುತ್ತಿರುವ ಈ ಹೊತ್ತಲ್ಲಿ ಮುಖ್ಯಮಂತ್ರಿ ಕಚೇರಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬಜೆಟ್ ಕುರಿತು ಏನಿದೆ ನೋಡಿ.
ಬೆಂಗಳೂರು, ಮಾರ್ಚ್ 15: ದಾಖಲೆಯ 12ನೇ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಬಜೆಟ್ ಒಂದು ಸವಾಲೆಂದೇ ಕರೆಯಲಾಗುತ್ತಿದೆ.
2018 ರ ವಿಧಾನಸಭಾ ಚುನಾವಣೆ, ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆಯ ಮೇಲೆ ಪ್ರಭಾವ ಬೀರುವುದಕ್ಕೆ ಈ ಬಜೆಟ್ ಒಂದು ಉತ್ತಮ ಅವಕಾಶ. ಈ ಅವಕಾಶವನ್ನು ಸಿದ್ದರಾಮಯ್ಯ ಸಮರ್ಪಕವಾಗಿ ಬಳಸಿಕೊಳ್ಳುತ್ತಾರಾ ಎಂಬುದು ಇಂದು ಬೆಳಗ್ಗೆ 11:30 ರ ನಂತರವೇ ತಿಳಿಯಲಿದೆ.
ಯಾವೆಲ್ಲ ವಸ್ತುಗಳ ಬೆಲೆ ಏರಿಕೆಯಾಗುತ್ತೆ, ಯಾರ್ಯಾರಿಗೆ ಲಾಭ, ಯಾರಿಗೆ ನಷ್ಟ, ಸಾಲ ಮನ್ನಾ ಆಗುತ್ತಾ... ಎಂಬೆಲ್ಲ ವಿಷಯಗಳು ಚರ್ಚೆಯಾಗುತ್ತಿರುವ ಈ ಹೊತ್ತಲ್ಲಿ ಮುಖ್ಯಮಂತ್ರಿ ಕಚೇರಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬಜೆಟ್ ನ ವಿಶೇಷತೆಯ ಕುರಿತು ಕೆಲವು ಟ್ವೀಟ್ ಗಳು ಹರಿದಾಡುತ್ತಿವೆ. ಬಜೆಟ್ ಆರಂಭಕ್ಕೂ ಮುನ್ನ ಅವುಗಳ ಮೇಲೊಮ್ಮೆ ಕಣ್ಣು ಹಾಯಿಸೋಣ.
|
ಅಭಿವೃದ್ಧಿ ಚಿತ್ರವೊಂದೇ ಕಣ್ಣಮುಂದೆ
ಆಯವ್ಯಯವನ್ನು ಮಂಡಿಸಲು ಹೊರಟಿರುವ ಈ ಹೊತ್ತಲ್ಲಿ ನಾಡಿನ ಸಮಗ್ರ ಅಭಿವೃದ್ಧಿ ಚಿತ್ರವೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ದಾಖಲೆಯ 12 ನೇ ಬಜೆಟ್
ನಾಡಿನ ಸಮಗ್ರ ವಿಕಾಸಕ್ಕೆ ಕಾರಣವಾಗುವಂಥ 12 ಬಜೆಟ್ ಗಳ್ನು ಮಂಡಿಸುವ ಸಾರ್ಥಕ ಅವಕಾಶ ನೀಡಿದ ರಾಜ್ಯದ ಜನತೆಯನ್ನು ನೆನಯುತ್ತ ಜನಪರ ಬಜೆಟ್ ಮಂಡಿಸಲು ಹೊರಟಿದ್ದೇನೆ ಎಂದು ಜನತೆಗೆ ಡನ್ಯವಾದ ಅರ್ಪಿಸಿದ್ದಾರೆ.
|
ಬಹುಜನ ಹಿತಾಯ
ಕರ್ನಾಟಕ ರಾಜ್ಯದ ಸಾಮಾನ್ಯ ಜನರಿಗೆ, ಮಹಿಳೆಯರಿಗೆ, ರೈತರಿಗೆ, ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ, ಯುವಕರಿಗೆ ಎಲ್ಲರಿಗೂ ಉಪಯೋಗವಾಗುವಂಥ ಜನಪರ ಬಜೆಟ್ ಮಂಡಿಸುತ್ತಿದ್ದೇವೆ ಎಂದು ಬಹುಜನ ಹಿತಾಯ ಮಂತ್ರವನ್ನು ಪುರುಚ್ಚರಿಸಿದ್ದಾರೆ.
|
ಜನಪರ ಬಜೆಟ್
ಸರ್ವರನ್ನೂ ಒಳಗೊಳ್ಳುವ, ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುವ ಬಜೆಟ್ ಮಂಡನೆಗೆ ಅಣಿಯಾಗುತ್ತಿದ್ದೇನೆ ಎಂದಿರುವ ಅವರು ಬಜೆಟ್ ಜನಪರವಾಗಿರಲಿದೆ ಎಂಬ ಸೂಚನೆ ನೀಡಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ












Click it and Unblock the Notifications