ರಾಮನಗರದಲ್ಲಿ ಹೊಸ ಕಾಲೇಜುಗಳಿಗೆ ಜಾಗ ನೋಡಿ, ಫೈನಲ್: ಕುಮಾರಸ್ವಾಮಿ
Recommended Video

ಬೆಂಗಳೂರು, ಜುಲೈ 6: ರಾಮನಗರ ಜಿಲ್ಲೆಯಲ್ಲಿ ವಸತಿ ಸಹಿತ ಪದವಿ ಕಾಲೇಜು ಪ್ರಾರಂಭಿಸಲು ಆನಮಾನಹಳ್ಳಿ, ಹರಿಸಂದ್ರ ಹಾಗೂ ಅಚ್ಚಲು ಗ್ರಾಮದಲ್ಲಿ 7 ಎಕರೆ ವಿಸ್ತೀರ್ಣದಲ್ಲಿ ಗುರುತಿಸಿರುವ ಸ್ಥಳ ನೋಡಿದ ನಂತರ ಅಂತಿಮ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ರಾಮನಗರ ಜಿಲ್ಲೆಯಲ್ಲಿ ಹೊಸ ಕಾಲೇಜುಗಳ ಆರಂಭ ಮತ್ತು ಮೂಲಸೌಕರ್ಯ ಒದಗಿಸುವ ಬಗ್ಗೆ ಶುಕ್ರವಾರ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದರು.
ಕಟ್ಟಡ, ಶೌಚಾಲಯ ಸೇರಿದಂತೆ ಇನ್ನಿತರ ಮೂಲಸೌಲಭ್ಯಗಳಿದ್ದಲ್ಲಿ ಮಾತ್ರ ಸರಕಾರಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸಬಹುದು ಎಂದ ಅವರು, ಕಟ್ಟಡಗಳ ನಿರ್ವಹಣೆಗೂ ಆದ್ಯತೆ ನೀಡಬೇಕು ಎಂದರು.

ಬಿ.ಕಾಂ ಜೊತೆಗೆ ವೃತ್ತಿಪರ ಕೋರ್ಸ್ ಗಳ ಸಂಯೋಜನೆವುಳ್ಳ ಕೋರ್ಸ್ ಹಾಗೂ ಸಿ.ಬಿ.ಜೆಡ್ ಮತ್ತು ಮೈಕ್ರೋ ಬಯಾಲಜಿ ಕೋರ್ಸ್ ಗಳಿಗೆ ಬೇಡಿಕೆ ಇರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಈ ಕೋರ್ಸ್ ಗಳನ್ನು ಪದವಿ ಕಾಲೇಜುಗಳಲ್ಲಿ ಪ್ರಾರಂಭಿಸಲು ಸೂಚಿಸಿದರು.
ಕಾಲೇಜುಗಳಲ್ಲಿ ಉತ್ತಮ ಉಪನ್ಯಾಸಕರನ್ನು ನೇಮಿಸಲು ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸೂಚಿಸಿದರು.
ಕಾಲೇಜು ಪ್ರಾರಂಭಿಸಲು ಸ್ಥಳ ನಿಗದಿಯಾದ ನಂತರ ಅನುಮೋದನೆಯಾಗಿ, ಅನುದಾನ ಬಿಡುಗಡೆ ಮಾಡಿದ ಕೂಡಲೆ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಾಣ ಕಾರ್ಯವನ್ನು ಕೈಗೊಳ್ಳುವುದು ಎಂದು ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.
ಉನ್ನತ ಶಿಕ್ಷಣ ನಿರ್ದೇಶನಾಲಯದ ಪ್ರಧಾನ ಕಾರ್ಯದರ್ಶಿ ರಾಜ್ ಕುಮಾರ್ ಖತ್ರಿ, ಆಯುಕ್ತರಾದ ಎನ್.ಮಂಜುಳಾ, ರಾಮನಗರ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮುಲ್ಲೈ ಮಹಿಲನ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications