ಸಿಎಂ ಕುಮಾರಸ್ವಾಮಿ ಅವರಿಂದ ದಿನವಿಡೀ ಬರ ಕುರಿತು ಸಭೆ
ಬೆಂಗಳೂರು, ನವೆಂಬರ್ 27: ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ನೂರಕ್ಕೂ ಹೆಚ್ಚು ತಾಲೂಕುಗಳ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಮಂಗಳವಾರ ಬೆಳಗ್ಗೆ 11ರಿಂದ ವಿಧಾನಸೌಧದಲ್ಲಿ ಸಭೆ ನಡೆಸಲಿದ್ದಾರೆ.
ಕರ್ನಾಟಕದ 13 ಜಿಲ್ಲೆಗಳಲ್ಲಿ ನೀರಿನ ಬರ!
ರಾಜ್ಯದ 18 ಜಿಲ್ಲೆಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು, ಉದ್ಯೋಗ ಸೃಜನೆ ಮಾತ್ರವಲ್ಲದೆ ಗೋಶಾಲೆ ತೆರೆಯುವ ಕುರಿತು ಸಿದ್ಧತೆ ಮಾಡಿಕೊಳ್ಳುವುದು, ಬರಪೀಡಿತ ಜಿಲ್ಲೆಗಳಿಂದ ರಾಜಧಾನಿ ಬೆಂಗಳೂರು ಹಾಗೂ ನೆರೆ ರಾಜ್ಯ ಗೋವಾಕ್ಕೆ ಗ್ರಾಮೀಣ ಜನರು ಗುಳೆ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ ಗರಿಷ್ಠ ಉದ್ಯೋಗ ಒದಗಿರುವ ಕುರಿತಂತೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಭಾರಿ ಮಳೆ ಬಿದ್ದರೂ 13 ಜಿಲ್ಲೆಗಳಲ್ಲಿ ಬರದ ಛಾಯೆ: ಆತಂಕದಲ್ಲಿ ಜನರು
ರಾಜ್ಯದ ನೂರಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಕಾಣಿಸಿಕೊಂಡಿದೆ, ಹಿಂಗಾರು ಮಳೆಯಲ್ಲೂ ಕೊರತೆಯಾಗಿದೆ. ಹೀಗಾಗಿ ಮುಂದಿನ ಮೇ ಅಂತ್ಯದವರೆಗೆ ರಾಜ್ಯದಲ್ಲಿ ಕೈಗೊಳ್ಳಬೇಕಾದ ಬರ ಪರಿಹಾರ ಹಾಗೂ ನೆರವಿನ ಕುರಿತು ಚರ್ಚೆ ನಡೆಯಲಿದೆ.
ಬರ ಪೀಡಿತ ತಾಲೂಕುಗಳಿಗೆ 2,434 ಕೋಟಿ ಬೇಡಿಕೆ ಇಟ್ಟ ರಾಜ್ಯ
ಈಗಾಗಲೇ 16 ಸಾವಿರ ಕೋಟಿ ರೂ ಮೊತ್ತದ ಕೃಷಿ ಬೆಳೆಗಳ ನಷ್ಟ ಉಂಟಾಗಿದೆ. ಎನ್ಡಿಆರ್ಎಫ್ ನಿಧಿಯಿಂದ 2,241 ಕೋಟಿ ರೂ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದ್ದು, ಕೇಂದ್ರ ಬರ ಅಧ್ಯಯನ ತಂಡ ಈಗಾಗಲೇ ಭೇಟಿ ನೀಡಿದೆ. ಅದಕ್ಕಾಗಿ ಎಸ್ಡಿಆರ್ ಎಫ್ನಿಂದ ಪರಿಹಾರ ಕಾಮಗಾರಿಗೆ 220 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಇನ್ನು ಅನೇಕ ಅಭಿವೃದ್ಧಿ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.