Get Updates
Get notified of breaking news, exclusive insights, and must-see stories!

ಡಾ. ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕಾಲ ಕೂಡಿ ಬಂತು

ಬೆಂಗಳೂರು, ಡಿ. 24: ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಿಸುವುದು ಯಾವಾಗ...? ಇದು ವಿಷ್ಣು ಅಭಿಮಾನಿಗಳು ಬಹುದಿನಗಳಿಂದ ಕೇಳುತ್ತಿದ್ದ ಪ್ರಶ್ನೆ.

ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಡಿ. 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮಂಗಳವಾರ ಭಾರತೀ ವಿಷ್ಣುವರ್ಧನ್ ಸುದ್ದಿಗೋಷ್ಠಿ ಕರೆದು ಈ ಕುರಿತು ತಿಳಿಸಿದ್ದಾರೆ. ವಿಷ್ಣುವರ್ಧನ್ ಪುಣ್ಯ ಸ್ಮರಣೆ ಅಂಗವಾಗಿ ಅಂದು ಅಭಿಮಾನ್ ಸ್ಟುಡಿಯೋದಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆರೋಗ್ಯ ತಪಾಸಣೆ ಶಿಬಿರವನ್ನೂ ನಡೆಸಲಾಗುವುದು ಎಂದು ತಿಳಿಸಿದರು. [ವಿಷ್ಮು ಪ್ರೀತಿ, ಸ್ನೇಹ ನನ್ನ ಜೀವಮಾನದ ಸಾಧನೆ]

vishnu

ಸಾಹಸಸಿಂಹ ಕಾಮಿಕ್ ಪುಸ್ತಕ : ನಟ ಅನಿರುದ್ಧ ಮಾತನಾಡಿ, ಈ ವರ್ಷ 2ನೇ ಸಾಹಸಸಿಂಹ ಕಾಮಿಕ್ ಪುಸ್ತಕವನ್ನು ಲೋಕಾರ್ಪಣೆ ಮಾಡಲಾಗುವುದು. ಇದರಿಂದ ಮಕ್ಕಳಿಗೆ ಮನೋರಂಜನೆಯ ಜೊತೆ ನೈತಿಕ ಪಾಠವೂ ಸಿಗಲಿದೆ ಎಂದರು. [ಡಾ. ರಾಜ್ ನಂತರ ಯಾರು : ಹೈ ಕೋರ್ಟ್]

ಡಾ. ವಿಷ್ಣುವರ್ಧನ್ ಸ್ಮಾರಕಕ್ಕೆ ಈಗ ಎರಡು ಎಕರೆ ಭೂಮಿ ಸಿಕ್ಕಿದೆ. ಇನ್ನೂ ಮೂರು ಎಕರೆ ಭೂಮಿ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ಅನಿರುದ್ಧ ವಿವರಿಸಿದರು. [ಡಾ. ವಿಷ್ಣು ಸ್ಮಾರಕಕ್ಕೆ ಸರ್ಕಾರದಿಂದ ಭೂಮಿ ಹಸ್ತಾಂತರ]

ಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್‌ನ ಒಂದು ಭಾಗವಾಗಿ ಸ್ಮಾರಕದ ಕಾರ್ಯಚಟುವಟಿಕೆಗಳು ನಡೆಯಲಿವೆ ಎಂದು ಅನಿರುದ್ಧ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+