ಹುಳಿಮಾವು ಕೆರೆ ದುರಂತ: 50 ಸಾವಿರ ಪರಿಹಾರ ಘೋಷಣೆ

Recommended Video

      Hulimavu Lake breach : CM Yediyurappa announces 50k to the breach victims | Oneindia Kannada

      ಬೆಂಗಳೂರು, ನವೆಂಬರ್ 26: ಹುಳಿಮಾವು ಕೆರೆ ಕಟ್ಟೆ ಒಡೆದು ನೂರಾರು ಕುಟುಂಬಗಳು ಮನೆ ಕಳೆದುಕೊಂಡಿದ್ದು, ದುರಂತದಿಂದ ಸಂತ್ರಸ್ತರಾಗಿರುವವರಿಗೆ ಸರ್ಕಾರ ನೆರವು ಘೊಷಿಸಿದೆ.

      ಕೆರೆ ಕಟ್ಟೆ ಒಡೆದು ಮನೆಗಳಿಗೆ ನೀರು ನುಗ್ಗಿದ್ದರಿಂದ 319 ಕುಟುಂಬಗಳು ಬೀದಿಗೆ ಬಂದಿದ್ದು, ಮನೆ ಕಳೆದುಕೊಂಡ ಎಲ್ಲರ ಖಾತೆಗಳಿಗೆ ಇಂದು ಸಂಜೆ ಒಳಗೆ 50,000 ಹಣ ಜಮೆ ಮಾಡಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.

      ಈ ಬಗ್ಗೆ ಟ್ವೀಟ್ ಸಹ ಮಾಡಿರುವ ಯಡಿಯೂರಪ್ಪ, 'ಹುಳಿಮಾವು ದುರಂತದಿಂದ ಮನೆ ಕಳೆದುಕೊಂಡ 319 ಕಬಡ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ಈ ಕೂಡಲೇ 50,000 ಪರಿಹಾರ ಧನ ಜಮೆ ಮಾಡುವಂತೆ ಸೂಚಿಸಲಾಗಿದೆ' ಎಂದು ಹೇಳಿದ್ದಾರೆ.

      CM Yediyurappa Announce 50,000 To Hulimavu Lake Tragedy Victims

      ಯಡಿಯೂರಪ್ಪ ಅವರು ಇಂದು ಹುಳಿಮಾವು ಕೆರೆ ದುರಂತ ಸಂಭವಿಸಿರುವ ಪ್ರದೇಶಕ್ಕೆ ಸಹ ತೆರಳಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರಲ್ಲದೆ, ರಕ್ಷಣಾ ಕಾರ್ಯಕ್ಕೆ ಸಲಹೆ ಸೂಚನೆಗಳನ್ನು ನೀಡಿದರು.

      ಸಂತ್ರಸ್ತರನ್ನು ಸಹ ಭೇಟಿಯಾದ ಯಡಿಯೂರಪ್ಪ ಕೆಲವರಿಗೆ ಸ್ಥಳದಲ್ಲಿಯೇ ಪರಿಹಾರವನ್ನೂ ವಿತರಿಸಿದರು. ಈ ಸಮಯದಲ್ಲಿ ಯಡಿಯೂರಪ್ಪ ಜೊತೆಗೆ ಕೆಲವು ಶಾಸಕರು, ಸಚಿವರು ಹಾಜರಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+