ಸಿಎಂ ಯಡಿಯೂರಪ್ಪ ಗಣೇಶನಲ್ಲಿ ಕೇಳಿ ಕೊಂಡಿದ್ದೇನು?
ಬೆಂಗಳೂರು, ಆ. 22: ಪ್ರತಿ ವರ್ಷದಂತೆ ಈ ಸಲವೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಿದ್ದಾರೆ. ತಮ್ಮ ಪುತ್ರ, ಪುತ್ರಿಯರು ಹಾಗೂ ಕುಟುಂಬಸ್ಥರೊಂದಿಗೆ ಗಣೇಶ ಚತುರ್ಥಿಯನ್ನು ಸರಳವಾಗಿ ಆಚರಿಸಿದ್ದಾರೆ. ಪ್ರತಿ ಗಣೇಶ ಚತಿರ್ಥಿಯಂದು ತಾವೇ ಖುದ್ದಾಗಿ ಗಣೇಶ ಪೂಜೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಡುತ್ತಾರೆ.
Recommended Video
ಮೈದಾನದ
ಮೂಲೆ
ಮೂಲೆಗೂ
ಸಿಕ್ಸರ್
ಸಿಡಿಸಿದ
Dhoni
|
Oneindia
Kannada
ಈ ಸಲ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜೆಯನ್ನು ಸಿಎಂ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ನಾಡಿನ ಸಮಸ್ತ ಭಕ್ತಜನತೆಗೆ ಗಣೇಶ ಚತುರ್ಥಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು.
ಮೊದಲ ಪೂಜೆಯನ್ನು ಸ್ವೀಕರಿಸುವ ಸಿದ್ದಿ ವಿನಾಯಕ ರಾಜ್ಯದ ಪ್ರಗತಿಯ ಹಾದಿಯಲ್ಲಿ ಇರುವ ಕಂಟಕ, ಅಡಚಣೆಗಳನ್ನು ದೂರಮಾಡಲಿ, ಸಮಸ್ತ ಜನತೆಗೆ ಸುಖ, ಸಂತೋಷ, ಆರೋಗ್ಯ ಭಾಗ್ಯಗಳನ್ನು ಕೊಟ್ಟು ಸದಾ ಸಂರಕ್ಷಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
English summary
CM Yediyurappa celebrates Ganesh Chaturthi with family at his residence,