ಅಮೆರಿಕದಲ್ಲಿ ಕರ್ನಾಟಕದ ಹಿರಿಮೆ ಹೆಚ್ಚಿಸಿದ ವೈದ್ಯೆ: ಸಿಎಂ ಅಭಿನಂದನೆ
ಬೆಂಗಳೂರು, ಏಪ್ರಿಲ್ 22: ಅಮೆರಿಕದಲ್ಲಿ 'ಡ್ರೈವ್ ಆಫ್ ಹಾನರ್' ಪಡೆದ ಮೈಸೂರು ಮೂಲದ ವೈದ್ಯೆ ಉಮಾ ಮಧುಸೂಧನ್ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಉಮಾ ಅವರ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.
''ದೂರದ ಅಮೆರಿಕೆಯಲ್ಲಿ ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡುತ್ತಿರುವ ಮೈಸೂರು ಮೂಲದ ಕನ್ನಡತಿ ಡಾ.ಉಮಾ ಮಧುಸೂದನ್ ಅಲ್ಲಿನ ಜನರ ಹಾಗೂ ಸರಕಾರದ ಮೆಚ್ಚುಗೆಗೆ ಪಾತ್ರರಾಗಿ 'ಡ್ರೈವ್ ಆಫ್ ಹಾನರ್ ' ವಿಶೇಷ ಗೌರವ ಪಡೆದುಕೊಳ್ಳುತ್ತಿದ್ದಾರೆ. ಸೇವೆ, ಸಮರ್ಪಣೆ ನಮ್ಮ ಕನ್ನಡನಾಡಿನ ಹಿರಿಮೆ ಎಂದು ಸಾರುತ್ತಿರುವ ಈ ಹೆಣ್ಣು ಮಗಳನ್ನು ಅಭಿನಂದಿಸುವೆ.'' ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಮೈಸೂರು ಮೂಲದ ಡಾ ಉಮಾ ಮಧುಸೂಧನ್ ಅಮೆರಿಕದಲ್ಲಿ ಕೊರೊನಾ ತಡೆಗೆ ಶ್ರಮಿಸಿದ್ದಾರೆ. ಅಮೆರಿಕದ ಸೌತ್ ವಿಂಡ್ಸರ್ನ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ವಿಶೇಷ ಕಾಳಜಿ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಇವರ ಕೆಲಸವನ್ನು ಅಮೆರಿಕ ಸರ್ಕಾರ ಗುರುತಿಸಿ, ವಿಶೇಷ ಗೌರವ ನೀಡಿದೆ.
ದೂರದ ಅಮೆರಿಕೆಯಲ್ಲಿ ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡುತ್ತಿರುವ ಮೈಸೂರು ಮೂಲದ ಕನ್ನಡತಿ ಡಾ.ಉಮಾ ಮಧುಸೂದನ್ ಅಲ್ಲಿನ ಜನರ ಹಾಗೂ ಸರಕಾರದ ಮೆಚ್ಚುಗೆಗೆ ಪಾತ್ರರಾಗಿ ‘ಡ್ರೈವ್ ಆಫ್ ಹಾನರ್ ‘ ವಿಶೇಷ ಗೌರವ ಪಡೆದು ಕೊಳ್ಳುತ್ತಿದ್ದಾರೆ.
— B.S. Yediyurappa (@BSYBJP) April 22, 2020
ಸೇವೆ,ಸಮರ್ಪಣೆ ನಮ್ಮ ಕನ್ನಡನಾಡಿನ ಹಿರಿಮೆ ಎಂದು ಸಾರುತ್ತಿರುವ ಈ ಹೆಣ್ಣು ಮಗಳನ್ನು ಅಭಿನಂದಿಸುವೆ.
ಡಾ. ಉಮಾ ಅವರ ಮನೆಯ ಎದುರು ಹತ್ತಾರು ಕಾರುಗಳಲ್ಲಿ ಪರೇಡ್ ನಡೆಸಿ ಕೃತಜ್ಞತೆ ಸಲ್ಲಿಸಿದ್ದಾರೆ. ಜೊತೆಗೆ ಡಾ. ಉಮಾ ಮಧುಸೂಧನ್ ಅವರನ್ನು, "Dr Uma Madhusudhana has been recognized as one of the South Windsor's Unsung heroes' ಎಂಬ ಸಂದೇಶದೊಂದಿಗೆ ಗೌರವಿಸಲಾಗಿದೆ. ಉಮಾ ಅವರ ಸೇವೆಯನ್ನು ಮೆಚ್ಚಿರುವ ಅಲ್ಲಿನ ಸ್ಥಳಿಯರು ಹಾಗೂ ಸರ್ಕಾರ ವಿಶೇಷವಾಗಿ ಪರಿಗಣಿಸಿ 'ಡ್ರೈವ್ ಆಫ್ ಹಾನರ್' ಗೌರವ ಸಲ್ಲಿಸಿದ್ದಾರೆ.
ಡಾ. ಉಮಾರಾಣಿ ಮಧುಸೂದನ್ ಅವರು ಮೈಸೂರಿನ ಜೆಎಸ್ಎಸ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 1997ರಲ್ಲಿ ವೈದ್ಯಕೀಯ ಪದವಿ ಪಡೆದಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications