ಒಂದೊಳ್ಳೆ ಸುದ್ದಿ: 2ನೇ ಬಾರಿ ಕೊರೊನಾ ಗೆದ್ದ ಸಿಎಂ ಯಡಿಯೂರಪ್ಪ
ಬೆಂಗಳೂರು, ಏಪ್ರಿಲ್ 22: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿನ ಎರಡು ಅಲೆಗಳನ್ನು ಎದುರಿಸಿ ಯಡಿಯೂರಪ್ಪ ಅವರು ಜಯಿಸಿದ್ದಾರೆ.
ಯಡಿಯೂರಪ್ಪ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಡಿಸ್ಚಾರ್ಜ್ ಮಾಡಲಾಗಿದೆ, ಯಡಿಯೂರಪ್ಪ ಅವರ ಮೊಮ್ಮಗಳು ಕೂಡಾ ಗುಣಮುಖರಾಗಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ತಿಳಿಸಿದೆ.
ಆಸ್ಪತ್ರೆಯಿಂದ ನೇರವಾಗಿ ತಮ್ಮ ಅಧಿಕೃತ ನಿವಾಸ ಕಾವೇರಿಗೆ ಯಡಿಯೂರಪ್ಪ ತೆರಳಿದ್ದು, ಇದಕ್ಕೂ ಮುನ್ನ ಮಾತನಾಡಿ, ಕೊರೊನಾ ಸೋಂಕು ಎಲ್ಲೆಡೆ ವೇಗವಾಗಿ ಹಬ್ಬುತ್ತಿದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಯ್ದುಕೊಳ್ಳಿ, ಅನಗತ್ಯವಾಗಿ ಹೊರಗಡೆ ಓಡಾಡಬೇಡಿ. ಕರ್ಫ್ಯೂ ನಿಯಮಗಳನ್ನು ಪಾಲಿಸಿ ಎಂದರು.

ವಿಶ್ರಾಂತಿ ಅಗತ್ಯವಿಲ್ಲ: ನಾನು ಈಗಾಗಲೇ ಅಗತ್ಯ ವಿಶ್ರಾಂತಿ ಪಡೆದಿದ್ದೇನೆ, ವೈದ್ಯರ ಸಲಹೆಯಂತೆ ನಡೆದುಕೊಂಡಿದ್ದೇನೆ, ಇಂದು ಸಂಜೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದರು.
ಕೋವಿಡ್ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ @BSYBJPರವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ನಿಯಂತ್ರಿಸಲು ಮಾಸ್ಕ್ ಧಾರಣೆ, ಭೌತಿಕ ಅಂತರ, ಶುಚಿತ್ವ ಪಾಲನೆ ತಪ್ಪದೇ ಮಾಡಿ, ಅನಗತ್ಯವಾಗಿ ಹೊರಗೆ ಬರದೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ pic.twitter.com/kQYMQyIcgO
— CM of Karnataka (@CMofKarnataka) April 22, 2021
Recommended Video
ಗುರುವಾರ ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ನೈಟ್ ಕರ್ಫ್ಯೂ, ಹೊಸ ಮಾರ್ಗಸೂಚಿ ಪ್ರಗತಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications