ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಳೆ, ಪ್ರವಾಹ: ಮುಂಜಾಗ್ರತೆಗಾಗಿ 50 ಕೋಟಿ ಬಿಡುಗಡೆಗೆ ಸಿಎಂ ಸೂಚನೆ

|
Google Oneindia Kannada News

ಬೆಂಗಳೂರು, ಆಗಸ್ಟ್ 6: ಮಳೆ ಮತ್ತು ಪ್ರವಾಹ ಪೀಡಿತ ಜಿಲ್ಲೆಗಳ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಮುಂಚಿತವಾಗಿಯೇ 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಸಿಎಂ ಯಡಿಯೂರಪ್ಪ ಬುಧವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Recommended Video

Rainfall in Karnataka. BS Yediyurappa ಮುಂಜಾಗ್ರತೆಗಾಗಿ 50 ಕೋಟಿ ಬಿಡುಗಡೆಗೆ

ರಾಜ್ಯದಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸೂಕ್ತ ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಯಡಿಯೂರಪ್ಪ ಸಂದೇಶ ರವಾನಿಸಿದ್ದಾರೆ.

ಆಸ್ಪತ್ರೆಯಲ್ಲೂ ಕಡತ ಪರಿಶೀಲನೆ ಮಾಡುತ್ತಿರುವ ಯಡಿಯೂರಪ್ಪ!ಆಸ್ಪತ್ರೆಯಲ್ಲೂ ಕಡತ ಪರಿಶೀಲನೆ ಮಾಡುತ್ತಿರುವ ಯಡಿಯೂರಪ್ಪ!

ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಯವರೊಂದಿಗೆ ಸಿಎಂ ಚರ್ಚಿಸಿದ್ದು, ಮಳೆಯ ಬಗ್ಗೆ ಎಲ್ಲ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಿರಿ, ನಿರಂತರ ಸಂಪರ್ಕದಲ್ಲಿರುವಂತೆ ಆದೇಶಿಸಿದ್ದಾರೆ.

CM Yediyurappa releases Rs 50 crore for relief works in heavy rain-cum-flood-hit districts across Karnataka

ಸದ್ಯ, ಕೊರೊನಾ ಸೋಂಕಿಗೆ ಒಳಗಾಗಿರುವ ಸಿಎಂ ಯಡಿಯೂರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಎಂ ಬುಧವಾರ ಕೆಲವು ಜಿಲ್ಲಾಧಿಕಾರಿಗಳ ಜೊತೆ ಫೋನ್‌ನಲ್ಲಿ ಮಾತನಾಡಿ ಮಾಹಿತಿ ಪಡೆದಿದ್ದಾರೆ.

ಈಗಾಗಲೇ ಮೈಸೂರು ಜಿಲ್ಲೆಯ ಕೆಲವು ಹಳ್ಳಿಗಳಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದ್ದು, ಕಬಿನಿ ಅಣೆಕಟ್ಟಿನಿಂದ 40,000 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗಿದೆ. ಅಣೆಕಟ್ಟಿನ ಗರಿಷ್ಠ ಸಾಮರ್ಥ್ಯ 2,284 ಅಡಿಗಳಾಗಿದ್ದರೂ, ಭಾರಿ ಮಳೆಯಿಂದಾಗಿ ಅದರ ನೀರಿನ ಮಟ್ಟ 2,280 ಅಡಿ ತಲುಪಿತ್ತು.

English summary
Karnataka chife minister Yediyurappa releases Rs 50 crore for relief works in heavy rain-cum-flood-hit districts across Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X