ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಅಚ್ಚರಿ ಮೂಡಿಸಿದ ಸಿಎಂ ಪುತ್ರ ವಿಜಯೇಂದ್ರ ದೆಹಲಿ ಭೇಟಿ

|
Google Oneindia Kannada News

ಬೆಂಗಳೂರು, ಜೂನ್ 1: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸುದ್ದಿ ತಾರಕಕ್ಕೇರಿರುವ ಸಂದರ್ಭದಲ್ಲಿಯೇ ಸಿಎಂ ಯಡಿಯೂರಪ್ಪ ಪುತ್ರ ದೆಹಲಿ ಭೇಟಿ ಅಚ್ಚರಿ ಮೂಡಿಸಿದೆ.

Recommended Video

Vijayendra ಅವರು ಕೋಳಿ ಕೂಗುವ ಮೊದಲು ದೆಹಲಿಗೆ ಹಾರಿದ್ದೇಕೆ | Oneindia Kannada

ರಾಜ್ಯ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚಿಗೆ ಸಚಿವ ಸಿ.ಪಿ ಯೋಗೇಶ್ವರ್ ದೆಹಲಿಗೆ ಭೇಟಿ ನೀಡಿ ಬಂದ ನಂತರ ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಗುಟ್ಟಾಗಿ ಉಳಿದಿಲ್ಲ.

ಇದೇ ವೇಳೆ ಮಂಗಳವಾರ ಬೆಳಿಗ್ಗೆ 5.30ರ ವಿಮಾನದಲ್ಲಿ ಬೆಂಗಳೂರಿನಿಂದ ತಮ್ಮ ಆಪ್ತರೊಂದಿಗೆ ದೆಹಲಿಗೆ ಪ್ರಯಾಣ ಬೆಳೆಸಿದ ಬಿ.ವೈ ವಿಜಯೇಂದ್ರ, ಬಿಜೆಪಿ ಹೈಕಮಾಂಡ್ ಭೇಟಿಯಾಗಲಿದ್ದಾರೆ ಎಂಬ ನಿರೀಕ್ಷೆ ಇದೆ.

Bengaluru: CM Yediyurappa Son BY Vijayendra Travel To Delhi

ತಮ್ಮ ಇಲಾಖೆ ಮತ್ತು ಕ್ಷೇತ್ರದಲ್ಲಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರರ ಹಸ್ತಕ್ಷೇಪವಾಗುತ್ತಿದೆ ಎಂದು ಕೆಲವು ಸಚಿವರು ಹಾಗೂ ಶಾಸಕರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಈ ಕಾರಣಕ್ಕಾಗಿ ಹೈಕಮಾಂಡ್ ವಿಜಯೇಂದ್ರರಿಗೆ ಬುಲಾವ್ ನೀಡಿದೆ ಎಂಬ ಮಾತು ಕೇಳಿಬರುತ್ತಿದೆ.

English summary
CM Yediyurappa son BY Vijayendra, who is also the state BJP vice president has sudden traveled to Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X