ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹತ್ವದ ಸಮನ್ವಯ ಸಮಿತಿ ಸಭೆ ಆರಂಭ: ಹಲವು ಪ್ರಮುಖ ವಿಷಯ ಚರ್ಚೆ

By Manjunatha
|
Google Oneindia Kannada News

ಬೆಂಗಳೂರು, ಆಗಸ್ಟ್ 31: ಮಹತ್ವದ ಸಮನ್ವಯ ಸಮಿತಿ ಸಭೆ ಆರಂಭವಾಗಿದ್ದು ಕೊಡಗು ಪ್ರವಾಹ, ಸಂಪುಟ ವಿಸ್ತರಣೆ, ಸಾಲಮನ್ನಾ ಸುಗ್ರೀವಾಜ್ಞೆ ಕುರಿತು ಚರ್ಚೆ ನಡೆಯಲಿದೆ.

ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕುಮಾರಕೃಪ ಅತಿಥಿ ಗೃಹದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಳ್, ಜೆಡಿಎಸ್ ರಾಷ್ಟ್ರೀಯ ಸಮನ್ವಯಕಾರ ಡಾನಿಷ್ ಅಲಿ ಭಾಗವಹಿಸಿದ್ದಾರೆ.

ಸಮನ್ವಯ ಸಮಿತಿ ಸಭೆಗೆ ಈ ಇಬ್ಬರು ಪ್ರಮುಖರಿಗೆ ಆಹ್ವಾನವಿಲ್ಲ!ಸಮನ್ವಯ ಸಮಿತಿ ಸಭೆಗೆ ಈ ಇಬ್ಬರು ಪ್ರಮುಖರಿಗೆ ಆಹ್ವಾನವಿಲ್ಲ!

ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ 3ನೇ ಸಭೆ ಇದಾಗಿದ್ದು, ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ರಾಜ್ಯದಲ್ಲಿ ಆದ ಆಡಳಿತ ಬೆಳವಣಿಗೆಗಳು ಇನ್ನಿತರ ಕಾರಣಕ್ಕೆ ಈ ಸಭೆ ಅತ್ಯಂತ ಮಹತ್ವದ್ದಾಗಿದೆ.

Coalition governments 3rd co-ordination meeting started

ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗಬೇಕಿದ್ದು ಸಭೆ ಕುಮಾರಸ್ವಾಮಿ ಅವರು ಆಂಧ್ರ ಪ್ರದೇಶ ತೆರಳಿದ್ದ ಕಾರಣ ತಡವಾಗಿ ಆರಂಭವಾಗಿದೆ. ಸಭೆಗೂ ಮುನ್ನಾ ಸಿದ್ದರಾಮಯ್ಯ ಅವರು ಸಿಎಂ ಕುಮಾರಸ್ವಾಮಿ ಹಾಗೂ ಪರಮೇಶ್ವರ್ ಅವರಿಗೆ ಹಸ್ತಲಾಘವ ಮಾಡಿ ಸರ್ಕಾರ 100 ದಿನ ಪೂರೈಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು? ಎಲ್ಲ ಸುಳ್ಳು ಅಂದ್ರು ಗೌಡ್ರು!ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು? ಎಲ್ಲ ಸುಳ್ಳು ಅಂದ್ರು ಗೌಡ್ರು!

ಸಭೆಗೆ ತೆರಳುವ ಮುನ್ನಾ ಕುಮಾರಸ್ವಾಮಿ ಅವರು ಮಾಧ್ಯಮಗಳತ್ತ ತಿರುಗಿ ನಮ್ಮಲ್ಲಿ ಒಗ್ಗಟ್ಟಿದೆ ಎಂದರು. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು 'ವಿ ಆರ್‌ ಒನ್' (ನಾವೆಲ್ಲಾ ಒಂದು) ಎಂದು ಹೇಳಿ ಸಭೆಗೆ ಹೋಗಿದ್ದಾರೆ.

English summary
Coalition government's 3rd co-ordination meeting started in Bengaluru's Kumarakrupa guest house. CM Kumaraswamy, Parameshwar, Siddaramaiah, KC Venugopal, Danish Ali participated in the meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X